ಜು.27: ವಿಶೇಷ ಮಕ್ಕಳ ಶಿಕ್ಷಕರ ಹಾಗೂ ಮುಖ್ಯಸ್ಥರ ಸಭೆ

ಉಡುಪಿ: ಕರ್ನಾಟಕ ರಾಜ್ಯ ವಿಶೇಷ ಮಕ್ಕಳ ಶಾಲೆಯ ಶಿಕ್ಷಕರು ಹಾಗೂ ಶಿಕ್ಷಕೇತರ ಸಂಘದ ವತಿಯಿಂದ ರಾಜ್ಯದ ವಿಶೇಷ ಮಕ್ಕಳ ಶಾಲೆಗಳ ಮುಖ್ಯಸ್ಥರ ಹಾಗೂ ಶಿಕ್ಷಕರ ಸಭೆ ಅಂಬಲಪಾಡಿ ಶ್ಯಾಮಿಲಿ ಸಭಾಭವನದಲ್ಲಿ ಇದೇ 27ರಂದು ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಡಾ. ವಸಂತ ಕುಮಾರ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅಂದು ಬೆಳಿಗ್ಗೆ 10.30ಕ್ಕೆ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಜಿ. ಶಂಕರ್ ಸಭೆ ಉದ್ಘಾಟಿಸುವರು. ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ನಿ.ಬೀ. […]