ಮಂಗಳೂರು: ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನ ಆಚರಣೆ

ಮಂಗಳೂರು: ಸೋಮವಾರದಂದು ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನವನ್ನು ಆಚರಿಸಲಾಯಿತು. ಹೆಸರಾಂತ ಇ.ಎನ್.ಟಿ ಶಸ್ತ್ರ ಚಿಕಿತ್ಸಕ ಡಾ.ಕಿಶೋರ್ ಶೆಟ್ಟಿ ಕಾರ್ಯಕರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಪದವಿಪೂರ್ವ ಹಂತವೆಂಬುದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿನ ಅಡಿಪಾಯ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ಶಿಸ್ತು, ಸಮರ್ಪಣಾ ಮನೋಭಾವವನ್ನು ಅಳವಡಿಸಿಕೊಳ್ಳಬೇಕು. ನಮ್ಮ ಕನಸು ಯಾವಾಗಲೂ ದೊಡ್ಡದಾಗಿರಬೇಕು ಎಂದರು. ಈ ಸಂದರ್ಭದಲ್ಲಿಎಕ್ಸ್ಪರ್ಟ್ ನ ನೂತನ ಸಭಾಂಗಣ ‘ಎಕ್ಸ್ಪೋಡಿಯಂ’ ಅನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ. […]
ಶಿಕ್ಷಕರ ದಿನಾಚರಣೆಯಂದು ಪಿಎಂ-ಶ್ರೀ ಶಾಲಾ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ

ನವದೆಹಲಿ: ಶಿಕ್ಷಕರ ದಿನಾಚರಣೆಯಂದು ಭಾರತದಾದ್ಯಂತದ 14,500 ಶಾಲೆಗಳ ಅಭಿವೃದ್ಧಿ ಮತ್ತು ಉನ್ನತೀಕರಣ ಯೋಜನೆಗೆ ಪ್ರಧಾನಿ ಮೋದಿ ಶ್ರೀ ಕಾರ ನೀಡಿದ್ದಾರೆ. ಸೋಮವಾರ ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ, “ಇಂದು, ಶಿಕ್ಷಕರ ದಿನದಂದು ನಾನು ಹೊಸ ಉಪಕ್ರಮವನ್ನು ಘೋಷಿಸಲು ಸಂತೋಷಪಡುತ್ತೇನೆ. ಪ್ರಧಾನ ಮಂತ್ರಿ ಸ್ಕೂಲ್ ಫಾರ್ ರೈಸಿಂಗ್ ಇಂಡಿಯಾ (PM-SHRI) ಯೋಜನೆ ಅಡಿಯಲ್ಲಿ ಭಾರತದಾದ್ಯಂತ 14,500 ಶಾಲೆಗಳ ಅಭಿವೃದ್ಧಿ ಮತ್ತು ಉನ್ನತೀಕರಣವಾಗಲಿದೆ. ಇವುಗಳು ರಾಷ್ಟ್ರೀಯ ಶಿಕ್ಷಣ ನೀತಿಯ ಪೂರ್ಣ ಚೈತನ್ಯವನ್ನು ಆವರಿಸುವ ಮಾದರಿ ಶಾಲೆಗಳಾಗುತ್ತವೆ” […]
ಕಾರ್ಕಳ ಜ್ಞಾನಸುಧಾ ಕಾಲೇಜಿನಲ್ಲಿ ನಿವೃತ್ತ ಹಿರಿಯ ಶಿಕ್ಷಕರಿಗೆ ಗೌರವಾರ್ಪಣೆ

ಉಡುಪಿ: ಇಂದಿನ ಶಿಕ್ಷಣದಲ್ಲಿ ಸಾಮಾಜಿಕ ಜಾಲತಾಣಗಳ ಭರಾಟೆಯಿಂದ ರಸಕ್ಕಿಂತ ಕಸವೇ ಹೆಚ್ಚು ತುಂಬಿದೆ. ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಜೊತೆಗೆ ಪೋಷಕರು ಸಹ ಕೈ ಜೋಡಿಸಿದಲ್ಲಿ ಆದರ್ಶ ಸಮಾಜ ನಿರ್ಮಾಣವಾವಾಗಲು ಸಾಧ್ಯ ಎಂದು ಉಡುಪಿಯ ಡಾ.ಟಿ.ಎಂ.ಎ.ಪೈ.ಕಾಲೇಜ್ ಆಫ್ ಎಜ್ಯುಕೇಷನ್ ಸಂಸ್ಥೆಯ ಸಂಯೋಜನಾಧಿಕಾರಿ, ಶಿಕ್ಷಣ ತಜ್ಞ ಡಾ.ಮಹಾಬಲೇಶ್ವರ ರಾವ್ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಜರುಗಿದ ಶಿಕ್ಷಕರ ದಿನಾಚರಣೆಯಲ್ಲಿ ನಿವೃತ್ತ ಹಿರಿಯ ಶಿಕ್ಷಕರನ್ನು ಗೌರವಿಸಿ ಮಾತನಾಡಿದರು. ಪ್ರಾಥಮಿಕ ಶಾಲಾ ಶಿಕ್ಷಕರು ಮಕ್ಕಳ ಎರಡನೆ ಪಾಲಕರು. ಅಂತಹ […]
ಮಹಾನ್ ವ್ಯಕ್ತಿಗಳ ಜೀವನದಿಂದ ಸ್ಪೂರ್ತಿ ಪಡೆದು ಶಿಕ್ಷಕರು ಉತ್ತಮ ಸಮಾಜ ರೂಪಿಸಬೇಕು: ಎಸ್.ಅಂಗಾರ

ಉಡುಪಿ: ಡಾ. ಎಸ್.ರಾಧಾಕೃಷ್ಣನ್ ಸೇರಿದಂತೆ ಅನೇಕ ಹಿರಿಯ ಮಹಾನ್ ವ್ಯಕ್ತಿಗಳ ತತ್ವಾದರ್ಶಗಳನ್ನು ಪಾಲನೆ ಮಾಡುವುದರೊಂದಿಗೆ ಶಿಕ್ಷಕರು ಉತ್ತಮ ಸಾಧನೆಗಳನ್ನು ಮಾಡಿ, ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಬೆಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು ಸೋಮವಾರ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿ ಉಡುಪಿ ಜಿಲ್ಲೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ತಾಲೂಕು ಹಾಗೂ ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣಾ ಸಮಿತಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ, ರಜತಾದ್ರಿಯ ಅಟಲ್ […]
ಸರ್ವಪಳ್ಳಿ ರಾಧಾಕೃಷ್ಣನ್ ಅವರನ್ನು ಸದಾ ಸ್ಮರಣೆ ಮಾಡುವುದು ಅವಶ್ಯ: ನರೇಂದ್ರ ಕುಮಾರ್ ಕೋಟ

ಕುಂದಾಪುರ: ಮೇಧಾವಿಗಳು, ತಿಳಿದವರ ಶಿಕ್ಷಣದ ಕುರಿತು ವ್ಯಾಖ್ಯಾನದ ಪ್ರಕಾರ ಶಿಕ್ಷಣ ಕೇವಲ ಪರೀಕ್ಷೆಗೆ ಮಾತ್ರ ಸೀಮಿತವಾಗಬಾರದು, ಅದರಾಚೆಗೂ ನಮ್ಮ ಬದುಕಿಗೆ ಪೂರಕವಾದ ಶಿಕ್ಷಣವು ದೊರೆತಾಗ ಆ ಶಿಕ್ಷಣಕ್ಕೆ ಅರ್ಥ ಬರುತ್ತದೆ. ಇತ್ತೀಚೆಗಿನ ದಿನಗಳಲ್ಲಿ ಶಿಕ್ಷಣವು ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ. ಹೊಸ ಶಿಕ್ಷಣ ನೀತಿಯೂ ಮಕ್ಕಳನ್ನು ತರಗತಿಯೊಳಗೆ ಮಾತ್ರವಲ್ಲದೇ ಅದರಾಚೆಗೆ ತೆರಡಿದಲು ಸಾಧ್ಯವಾಗಿದೆ. ವಿದ್ಯಾರ್ಥಿಗಳೆಲ್ಲರೂ ಶೈಕ್ಷಣಿಕ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು. ಸರ್ವಪಳ್ಳಿ ರಾಧಾಕೃಷ್ಣನ್ ಅವರನ್ನು ಇಂದು ಮಾತ್ರ ನೆನೆಯುವುದು ಅಲ್ಲ, ಅವರನ್ನು ಸದಾ […]