ಶಾಲಾ ಪಠ್ಯ ಪುಸ್ತಕಗಳ ಕೇಸರೀಕರಣ ವಿವಾದ: ಮಕ್ಕಳಿಗೆ ‘ನೈಜ ಇತಿಹಾಸ’ ಕಲಿಸುತ್ತೇವೆ ಎಂದ ಶಿಕ್ಷಣ ಸಚಿವ

ಬೆಂಗಳೂರು: ಶಾಲಾ ಪಠ್ಯಪುಸ್ತಕಗಳ ವಿವಾದಾತ್ಮಕ ಪರಿಷ್ಕರಣೆ ಕುರಿತು ಮೌನ ಮುರಿದಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್, ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ “ನೈಜ” ಇತಿಹಾಸವನ್ನು ಕಲಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಶಿಕ್ಷಣವನ್ನು ಕೇಸರಿಕರಣಗೊಳಿಸುವ ಆರೋಪವನ್ನು ತಳ್ಳಿಹಾಕಿದ ಅವರು, “ಕೆಲವು ಬುದ್ಧಿಜೀವಿಗಳು ಮತ್ತು ರಾಜಕಾರಣಿಗಳು ಪರಿಷ್ಕೃತ ಪಠ್ಯಪುಸ್ತಕಗಳನ್ನು ನೋಡದೆಯೆ ಜಾತಿ ರಾಜಕಾರಣ ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದಿದ್ದಾರೆ. ಬರಗೂರು ರಾಮಚಂದ್ರಪ್ಪ ನೇತೃತ್ವದ ಹಿಂದಿನ ಸಮಿತಿಯು ಪರಿಷ್ಕರಿಸಿದ ಪಠ್ಯಪುಸ್ತಕಗಳು ಸುಳ್ಳು ಮತ್ತು ತಪ್ಪು […]