ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಮಾಹಿತಿ ಕಾರ್ಯಾಗಾರ

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಡಿ02 ರಂದು ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ತ್ರಿಶಾ ಕಾಲೇಜಿನ ಸಂಸ್ಥಾಪಕ ಸಿಎ ಗೋಪಾಲಕೃಷ್ಣ ಭಟ್ ಭಾಗವಹಿಸಿ ಮಾತನಾಡಿ, ಜೀವನದ ಪ್ರಮುಖ ಘಟ್ಟವಾಗಿರುವ ಪಿಯುಸಿಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವಾಗ ಉಂಟಾಗುವ ಗೊಂದಲ, ಆತಂಕಗಳನ್ನು ದೂರ ಮಾಡಿ ಆತ್ಮ ವಿಶ್ವಾಸ ರೂಪಿಸಿಕೊಳ್ಳುವ ಬಗ್ಗೆ ಮತ್ತು ಉತ್ತಮ ಭವಿಷ್ಯದ ಕನಸು ಕಟ್ಟಿಕೊಂಡಿರುವ ವಿದ್ಯಾರ್ಥಿಗಳು ಪಿಯುಸಿ ನಂತರ ಮುಂದೇನು ಎನ್ನುವ ಗೊಂದಲಕ್ಕೆ ತೆರೆ ಎಳೆದು ಜೀವನದಲ್ಲಿ ಯಶಸ್ವಿಯಾಗಲು […]

ತ್ರಿಶಾ ಕಾಲೇಜಿನಲ್ಲಿ ಎನ್.ಎಸ್.ಎಸ್. ಹಾಗೂ ವೈ.ಆರ್. ಸಿ. ಸ್ವಯಂಸೇವಕರಿಗೆ ಮಾಹಿತಿ ಕಾರ್ಯಗಾರ

ಮಂಗಳೂರು: ನಗರದ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ ಹಾಗೂ ತ್ರಿಶಾ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‍ಎಸ್‍ಎಸ್) ಮತ್ತು ಯೂತ್ ರೆಡ್ ಕ್ರಾಸ್ (ವೈ.ಆರ್.ಸಿ.) ಘಟಕಗಳಿಗೆ ಹೊಸದಾಗಿ ಸೇರ್ಪಡೆಗೊಂಡ ಸ್ವಯಂ ಸೇವಕರಿಗೆ ಒಂದು ದಿನದ ಮಾಹಿತಿ ಕಾರ್ಯಗಾರವನ್ನು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಹ್ಯಾದ್ರಿ ಕಾಲೇಜು ಮಂಗಳೂರಿನ ಕಾರ್ಯತಂತ್ರ ಯೋಜನಾ ವಿಭಾಗದ ಮುಖ್ಯಸ್ಥ ರಮೇಶ್ ಕೆ.ಜಿ., ವ್ಯಕ್ತಿಯೊಬ್ಬನ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಎನ್.ಎಸ್.ಎಸ್ ಮತ್ತು ವೈ.ಆರ್.ಸಿ. ಗಳ ಪಾತ್ರ ಬಹಳ ಮಹತ್ವದ್ದಾಗಿದೆ. […]

ತ್ರಿಶಾ ಕಾಲೇಜಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಗಾರ

ಉಡುಪಿ: ಕ್ಷೇತ್ರ ಶಿಕ್ಷಣ ಇಲಾಖೆ, ಉಡುಪಿ ಇವರ ಸಹಯೋಗದಲ್ಲಿ ತ್ರಿಶಾ ಸಮೂಹ ಸಂಸ್ಥೆಗಳು ಮತ್ತು ಎಸ್.ವಿ.ಎಸ್. ಟ್ರಸ್ಟ್, ಕಟಪಾಡಿ ಇವರ ಆಶ್ರಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆಂದು ಅರಿವು ಕಾರ್ಯಗಾರವನ್ನು ಆಗಸ್ಟ್ 26 ರಂದು ಏರ್ಪಡಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಏಕಾಗ್ರತೆ, ಧ್ಯಾನ ಮತ್ತು ಅಧ್ಯಯನವು ಮಕ್ಕಳ ಭವಿತವ್ಯವನ್ನು ಉಜ್ವಲಗೊಳಿಸುತ್ತದೆ ಎಂದು ತಿಳಿಸಿದರು. ತ್ರಿಶಾ ಸಮೂಹ ಸಂಸ್ಥೆಗಳ ಸಂಸ್ಥಾಪಕ ಸಿಎ ಗೋಪಾಲಕೃಷ್ಣ ಭಟ್ ಅವರು ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು […]

ತ್ರಿಶಾ ವಿದ್ಯಾ ಕಾಲೇಜಿನ ವತಿಯಿಂದ ರಕ್ತದಾನ ಶಿಬಿರ

ಉಡುಪಿ: ತ್ರಿಶಾ ವಿದ್ಯಾ ಕಾಲೇಜಿನ ಯೂತ್ ರೆಡ್ ಕ್ರಾಸ್ ಘಟಕ ಮತ್ತು ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಕುಂದಾಪುರ ಇದರ ಸಹಯೋಗದಲ್ಲಿ ರಕ್ತದಾನ ಶಿಬಿರವು ಕಾಲೇಜಿನ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತ್ರಿಶಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಸಿಎ ಗೋಪಾಲಕೃಷ್ಣ ಭಟ್ ರಕ್ತದಾನ ಎನ್ನುವುದು ಜೀವ ಉಳಿಸುವ ಪ್ರಕ್ರಿಯೆಯಾಗಿದ್ದು, ಇಂತಹ ಶಿಬಿರಗಳು ಜನರಲ್ಲಿ ಮಾನವೀಯತೆಯನ್ನು ವೃದ್ಧಿಗೊಳಿಸುತ್ತವೆ ಎಂದರು. ಕಾರ್ಯಕ್ರಮದ ಅತಿಥಿಗಳಾಗಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಚೇರ್ಮನ್ ಎಸ್.ಜಯಕರ […]

ತ್ರಿಶಾ ವಿದ್ಯಾ ಕಾಲೇಜು ಹಾಗೂ ಎಸ್.ವಿ.ಎಸ್. ವಿದ್ಯಾವರ್ಧಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

ಉಡುಪಿ: ಸ್ವಾತಂತ್ರ್ಯದ ಅಮೃತಮಹೋತ್ಸವದ ಅಂಗವಾಗಿ ತ್ರಿಶಾ ವಿದ್ಯಾ ಕಾಲೇಜು ಮತ್ತು ಎಸ್.ವಿ.ಎಸ್. ವಿದ್ಯಾವರ್ಧಕ ಸಂಘ ಇವರು ಜಂಟಿಯಾಗಿ ಸ್ವಾತಂತ್ರ್ಯದ ಅಮೃತಮಹೋತ್ಸವವನ್ನು ಆಚರಿಸಿದರು. ನಿವೃತ್ತ ಮಿಲಿಟರಿ ಪೋಲೀಸ್ ಸುಬೇದಾರ್ ರವೀಂದ್ರ ಪೈ ಧ್ವಜಾರೋಹಣ ನೆರವೇರಿಸಿ ದೇಶಕ್ಕಾಗಿ ಹೋರಾಡುವ ಸೈನಿಕರ ಮಹತ್ವವನ್ನು ತಿಳಿಸಿ ಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತ್ರಿಶಾ ಸಮೂಹ ಸಂಸ್ಥೆಗಳ ಸಂಸ್ಥಾಪಕ ಸಿಎ ಗೋಪಾಲಕೃಷ್ಣ ಭಟ್ ಅವರು ಸ್ವಾತಂತ್ರ್ಯ ಗಳಿಸಿದಂದಿನಿಂದ ಇಂದಿನವರೆಗೆ ದೇಶ ಅಭಿವೃದ್ಧಿ ಹೊಂದಿದ ಪರಿಯನ್ನು ವಿದ್ಯಾರ್ಥಿಗಳಿಗೆ ಹೇಳಿದರು. ಈ ಸಂದರ್ಭದಲ್ಲಿ ಎಸ್.ವಿ.ಎಸ್. ವಿದ್ಯಾವರ್ಧಕ ಸಂಘದ […]