ತುಮಕೂರು ಭೀಕರ ಅಪಘಾತ: ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರಿಗೆ 2 ಲಕ್ಷ ರೂ ಪರಿಹಾರ

ತುಮಕೂರು: ಗುರುವಾರ ಬೆಳಗ್ಗೆ ಜಿಲ್ಲೆಯಲ್ಲಿ ಲಾರಿ ಮತ್ತು ಟೆಂಪೋ ಟ್ರಾಕ್ಸ್ ಕ್ರೂಸರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 13 ಜನರು ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ 200 ಕಿಮೀ ದೂರದಲ್ಲಿರುವ ಬಾಳೇನಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದೆ. ಪೊಲೀಸರು ಸಂಗ್ರಹಿಸಿದ ಪ್ರಾಥಮಿಕ ಮಾಹಿತಿಯ ಪ್ರಕಾರ, ಬಲಿಯಾದವರಲ್ಲಿ ಹೆಚ್ಚಿನವರು ರಾಯಚೂರು ಜಿಲ್ಲೆಯ ಕಾರ್ಮಿಕರಾಗಿದ್ದಾರೆ. ಟ್ರಾಕ್ಸ್ ಕ್ರೂಸರ್‌ನಲ್ಲಿ ಸುಮಾರು 24 ಜನರು ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿದ್ದು, ಮೃತರಲ್ಲಿ ಚಾಲಕ ಕೃಷ್ಣಪ್ಪ ಕೂಡ […]