ಅವಿಭಜಿತ ದ.ಕ ಜಿಲ್ಲೆಯ ಸಾರ್ವಜನಿಕರ ಅತ್ಯುತ್ತಮ ಸಹಕಾರದಿಂದ ಅರಣ್ಯ ಸಂಪತ್ತಿನ ರಕ್ಷಣೆ: ಗಣಪತಿ ಕೆ

ಉಡುಪಿ: ಉಡುಪಿ ಮತ್ತು ದ.ಕನ್ನಡ ಜಿಲ್ಲೆಯಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂಪತ್ತು ರಕ್ಷಣೆಯಲ್ಲಿ ಅರಣ್ಯ ಇಲಾಖೆಗೆ ಸಾರ್ವಜನಿಕರು ಅತ್ಯುತ್ತಮ ರೀತಿಯಲ್ಲಿ ಸಹಕಾರ ನೀಡುತ್ತಿದ್ದು, ಇದರಿಂದ ಇಲಾಖೆಯು ಉತ್ತಮವಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತಿದೆ ಎಂದು ಕಾರ್ಕಳ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಹೇಳಿದರು. ಅವರು ಭಾನುವಾರದಂದು ನಗರದ ಕಿದಿಯೂರು ಹೋಟೆಲ್‍ನ ರೂಫ್ ಟಾಪ್ ಸಭಾಂಗಣದಲ್ಲಿ, ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘ (ರಿ) ಉಡುಪಿ ಜಿಲ್ಲೆ ಇವರ ವತಿಯಿಂದ ವಾರ್ಷಿಕ ಸಮಾರಂಭ, ನೂತನ ವರ್ಷದ […]

ರಾಜ್ಯದಲ್ಲಿ ಅತಿ ಹೆಚ್ಚು ಮಹಿಳಾ ಮತದಾರರಿರುವ ಜಿಲ್ಲೆ: ಉಡುಪಿಗೆ ಪ್ರಥಮ ಸ್ಥಾನ

ಉಡುಪಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ – 2023 ರ ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ರಾಜ್ಯದಲ್ಲಿ ಅತ್ಯಂತ ಹೆಚ್ಚು ಮಹಿಳಾ ಮತದಾರರಿರುವ ಜಿಲ್ಲೆಯಾಗಿ ಉಡುಪಿ ಮೊದಲ ಸ್ಥಾನದಲ್ಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಅತ್ಯಂತ ಕಡಿಮೆ ಮಹಿಳಾ ಮತದಾರರನ್ನು ಹೊಂದಿರುವ ಜಿಲ್ಲೆಯಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿಯ ಕಚೇರಿ ತಿಳಿಸಿದೆ. ಉಡುಪಿಯಲ್ಲಿ 4,90,060 ಪುರುಷ ಮತದಾರರು ಹಾಗೂ 5,26,173 ಮಹಿಳಾ ಮತದಾರರಿದ್ದು ಒಟ್ಟು 10,16,245 ಮತದಾರರಿದ್ದಾರೆ. ಜಿಲ್ಲೆಯ ಲಿಂಗಾನುಪಾತ: 1074 ಬೆಂಗಳೂರು ಗ್ರಾಮಾಂತರದಲ್ಲಿ 14,90, 481 […]

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ: ಉಡುಪಿಯಲ್ಲಿ ಎನ್.ಐ.ಎ ತನಿಖೆ

ಉಡುಪಿ: ಬೆಂಗಳೂರಿನ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಇಲ್ಲಿನ ವಿದ್ಯಾರ್ಥಿ ರಿಹಾನ್ ಶೇಖ್‌ ಎಂಬಾತನ ಫ್ಲಾಟ್‌ ಅನ್ನು ಪರಿಶೀಲನೆ ನಡೆಸಿದ್ದಾರೆ. ಕುಕ್ಕರ್ ಸ್ಫೋಟದ ಆರೋಪಿಗಳೊಂದಿಗೆ ರಿಹಾನ್ ಶೇಖ್‌ ನ ಶಂಕಿತ ಸಂಪರ್ಕದ ಆಧಾರದಲ್ಲಿ ಆತನ ಫ್ಲಾಟ್ ಅನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ. ಕೊಣಾಜೆ ನಡುಪದವು ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಲಿಯುತ್ತಿದ್ದ ರಿಹಾನ್ ಉಡುಪಿಯ ಬ್ರಹ್ಮಾವರ ಮೂಲದವನಾಗಿದ್ದಾನೆ. ಆತನ ಪೋಷಕರು ವಾರಂಬಳ್ಳಿಯ ಮೀನಾ ಅನ್ಮೋಲ್ ವಸತಿ ಗೃಹದ ಕಟ್ಟಡದಲ್ಲಿ ವಾಸಮಾಡಿಕೊಂಡಿದ್ದರೆ, ರಿಹಾನ್ ಮಂಗಳೂರಿನ ಬಲ್ಮಠದಲ್ಲಿ ವಾಸವಾಗಿದ್ದನು. ಅಧಿಕಾರಿಗಳು ಕೆಲವು ದಾಖಲೆಗಳನ್ನು […]

ಕರಾವಳಿಯುದ್ದಕ್ಕೂ ಸಾಗಲಿದೆ ಜಿಲ್ಲೆಯ ಪ್ರಗತಿ-ಸಂಸ್ಕೃತಿಯನ್ನು ಬಿಂಬಿಸುವ ರಜತರಥ: ರಘುಪತಿ ಭಟ್

ಉಡುಪಿ: ಉಡುಪಿ ಜಿಲ್ಲೆಯ ರಜತ ಉತ್ಸವದ ಅಂಗವಾಗಿ ಜಿಲ್ಲೆಯನ್ನು ಮುಂದಿನ 25 ವರ್ಷಗಳಲ್ಲಿ ಎಲ್ಲಾ ಕ್ಷೇತ್ರದಲ್ಲಿ ಸಮಗ್ರವಾಗಿ ಅಭಿವೃದ್ದಿಪಡಿಸುವ ಬಗ್ಗೆ ಯೋಜನೆ ಮತ್ತು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ, ದಿಕ್ಸೂಚಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ವಿವಿಧ ಕ್ಷೇತ್ರಗಳ ತಜ್ಞರು ನೀಡಿರುವ ಸಲಹೆಗಳನ್ನು ದಾಖಲೀಕರಣ ಮಾಡಿ, ಅದರಂತೆ ಜಿಲ್ಲೆಯನ್ನು ಅಭಿವೃದ್ದಿಗೊಳಿಸಲಾಗುವುದು. ರಜತ ಉತ್ಸವ ಅಂಗವಾಗಿ ಜಿಲ್ಲೆಯ ಪ್ರಗತಿ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ರಥವನ್ನು ಸಿದ್ದಪಡಿಸಲಾಗಿದ್ದು, ಕರಾವಳಿಯ ಎಲ್ಲಾ ಕಡೆಗಳಲ್ಲಿ ಸಂಚರಿಸುವ ಈ ರಥವು ಜಿಲ್ಲೆಯ ಪ್ರಗತಿಯನ್ನು ಎಲ್ಲೆಡೆ ಸಾರಲಿದೆ ಎಂದು ಶಾಸಕ […]

ಸಾಂತಾಕ್ಲಾಸ್ ವೇಷ ಧರಿಸಿ ಕಾಂತಾರ ಪಂಜುರ್ಲಿ ಆವೇಷದ ಅಣಕು: ಸಾರ್ವಜನಿಕರಿಂದ ಆಕ್ರೋಶ

ಉಡುಪಿ: ಕ್ರಿಸ್ಮಸ್ ಹಿನ್ನಲೆಯಲ್ಲಿ ಸಾಂತಾಕ್ಲಾಸ್ ವೇಷದಲ್ಲಿ ಮನೆಮನೆಗೆ ಭೇಟಿ ನೀಡಿ ಉಡುಗೊರೆಗಳನ್ನು ನೀಡುವುದು ಹಿಂದಿನ ಕಾಲದಿಂದಲೂ ವಾಡಿಕೆ. ಟರ್ಕಿಯ ಸೇಂಟ್ ನಿಕೋಲಸ್ ಎನ್ನುವ ಪಾದ್ರಿಯೊಬ್ಬರು ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುತ್ತಾ ಉಡುಗೊರೆಗಳನ್ನು ನೀಡುತ್ತಿದ್ದು ಅವರ ಹೆಸರು ನೆದರ್ಲ್ಯಾಂಡ್ಸ್ ದೇಶದಲ್ಲಿ ಸಿಂಟರ್ಕ್ಲಾಸ್ ಎಂದು ಅಪಭ್ರಂಶವಾಗಿ ಮುಂದೆ ಅಮೇರಿಕಾ ಮತ್ತು ಯೂರೋಪ್ ಗಳಲ್ಲಿ ಸಾಂಟಾಕ್ಲಾಸ್ ಎಂದು ಕರೆಯಲ್ಪಟ್ಟು ವಿಶ್ವಾದ್ಯಂತ ಪ್ರಸಿದ್ದವಾಯಿತು. ಸೇಂಟ್ ನಿಕೋಲಸ್ ನೆನಪಿಗಾಗಿ ಕ್ರಿಸ್ ಮಸ್ ಹಬ್ಬದಂದು ಸಾಂಟಾಕ್ಲಾಸ್ ವೇಷ ಧರಿಸಿ ಉಡುಗೊರೆ ನೀಡುವುದು ಎಲ್ಲೆಲ್ಲೂ ನಡೆಯುತ್ತಿದೆ. ಆದರೆ ಈ […]