ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆಯನ್ನು 1 ನೇ ಸ್ಥಾನಕ್ಕೇರಿಸಲು ಅಧಿಕಾರಿಗಳು ಶ್ರಮವಹಿಸಿ: ಸಿಎಂ ಸಿದ್ದರಾಮಯ್ಯ

ಉಡುಪಿ: ಜಿಲ್ಲೆಯ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುವುದು ಆರೋಗ್ಯ ಇಲಾಖೆಯ ಆದ್ಯ ಕರ್ತವ್ಯಗಳಲ್ಲಿ ಒಂದಾಗಿದೆ. ಪ್ರಸ್ತುತ ಜಿಲ್ಲೆಯು ಆರೋಗ್ಯ ಸೇವೆ ಸೂಚ್ಯಂಕದಲ್ಲಿ 18ನೇ ಸ್ಥಾನದಲ್ಲಿದೆ. ಆದರೆ 2015 ನೇ ಸಾಲಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಿಲ್ಲೆಯು ರಾಜ್ಯದಲ್ಲಿ ಮೊದಲನೇ ಸ್ಥಾನದಲ್ಲಿತ್ತು. ಇದು ಅಧಿಕಾರಿಗಳ ಉದಾಸೀನತೆಯನ್ನು ತೋರುತ್ತದೆ. ಮತ್ತೊಮ್ಮೆ ಜಿಲ್ಲೆಯನ್ನು 1 ನೇ ಸ್ಥಾನಕ್ಕೆ ತರಲು ಆರೋಗ್ಯ ಇಲಾಖೆ ಸಿಬ್ಬಂದಿಗಳು ಶ್ರಮವಹಿಸಿ, ಕೆಲಸ ಮಾಡಬೇಕು. ಆರೋಗ್ಯ ಸಿಬ್ಬಂದಿಗಳು ಜನರಿಗೆ ಉತ್ತಮ ಸೇವೆಗಳನ್ನು ಒದಗಿಸದಿದ್ದಲ್ಲಿ ಮರಣ ಹೊಂದುವವರ ಸಂಖ್ಯೆ […]

ವೀಡಿಯೋ ಪ್ರಕರಣ: ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಉಡುಪಿಗೆ

ಉಡುಪಿ: ಉಡುಪಿ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಕೂಲಕಂಷ ವಿಚಾರಣೆ ನಡೆಸಲು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಬುಧವಾರದಂದು ಉಡುಪಿಗೆ ಆಗಮಿಸಿದ್ದಾರೆ. ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಲೇಜು ವಿದ್ಯಾರ್ಥಿಗಳ ಸಮಸ್ಯೆ ಕುರಿತು ವಿಚಾರಣೆಗೆ ಬಂದಿದ್ದೇನೆ. ನಾನು ಮೊದಲು ಈ ಸಂಬಂಧ ಪೊಲೀಸರನ್ನು ಭೇಟಿಯಾಗಿ ಎಫ್‌ಐಆರ್ ಸೇರಿದಂತೆ ಎಲ್ಲ ವಿಚಾರಗಳ ಕುರಿತು ಮಾಹಿತಿ ಪಡೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. ಗುರುವಾರದಂದು ಕಾಲೇಜಿಗೆ ಭೇಟಿ ನೀಡಿ ಸಂತ್ರಸ್ತೆ, ಮೂವರು […]

ವೀಡಿಯೋ ಪ್ರಕರಣ: ವಿದ್ಯಾರ್ಥಿನಿಯರು ತರಗತಿ ಬಹಿಷ್ಕರಿಸಿ ನ್ಯಾಯಕ್ಕಾಗಿ ಆಗ್ರಹಿಸಲು ಹಿಂದೂ ಯುವ ಸೇನೆ ಕರೆ

ಉಡುಪಿ: ಇಲ್ಲಿನ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಹಿಂದೂ ಹುಡುಗಿಯರು ಶೌಚಾಲಯ ಬಳಸುವ ದೃಶ್ಯವನ್ನು ಮುಸ್ಲಿಮ್ ಸಹಪಾಠಿ ಹುಡುಗಿಯರು ಗೌಪ್ಯವಾಗಿ ಚಿತ್ರೀಕರಿಸಿ ವ್ಯವಸ್ಥಿತವಾಗಿ ಮುಸ್ಲಿಮ್ ಹುಡುಗರ ಜೊತೆ ಹಂಚಿಕೊಂಡಿರುವ ಮಾಹಿತಿ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಇದು ಕಾಲೇಜುಗಳಲ್ಲಿ ನಮ್ಮ ಹಿಂದೂ ಹುಡುಗಿಯರನ್ನು ಸ್ಪಷ್ಟವಾಗಿ ಗುರಿಯಾಗಿಸಿಕೊಂಡು ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ ನಡೆಸಿ ಲವ್ ಜಿಹಾದ್ ಗೆ ಬಲಿಯಾಗಿಸುವ ಷಡ್ಯಂತ್ರದಂತೆ ಗೋಚರಿಸುತ್ತಿದೆ. ಆದ್ದರಿಂದ ಈ ಘಟನೆಯ ಬಗ್ಗೆ ಸಮರ್ಪಕವಾಗಿ ತನಿಖೆ ನಡೆದು, ಇದರ ಹಿಂದೆ ಇರುವ ಷಡ್ಯಂತ್ರದ ಜಾಲ […]

‘ಕರ್ನಾಟಕ ಸ್ಟೋರಿ’ಗೆ ಆಸ್ಪದವಿಲ್ಲ; ವೀಡಿಯೋ ಪ್ರಕರಣ ಸಮಗ್ರ ತನಿಖೆ ನಡೆಸಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಜಿಹಾದಿ ಮಾನಸಿಕತೆಯ ಕೆಲವು ವಿದ್ಯಾರ್ಥಿನಿಯರು ಉಡುಪಿ‌ಯ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ಗಂಭೀರ ಪ್ರಕರಣದಲ್ಲಿ ಭಾಗಿಯಾಗಿದ್ದು, ಕಳೆದ ಒಂದು ವರ್ಷದಿಂದ ನಿರಂತರವಾಗಿ ಈ ಪ್ರಕ್ರಿಯೆ ನಡೆಯುತ್ತಿದೆ ಎಂಬ ಮಾಹಿತಿ ಇದೆ. ಶಿಕ್ಷಣ ಮತ್ತು ಸಾಂಸ್ಕೃತಿಕ ನಗರಿ ಉಡುಪಿಯ ಖ್ಯಾತಿಗೆ ಮಸಿ ಬಳಿಯುವ ಪ್ರಯತ್ನದ ಮೂಲಕ ‘ಕೇರಳ ಸ್ಟೋರಿ’ಯಂತೆ ಉಡುಪಿ ಸಹಿತ ‘ಕರ್ನಾಟಕ ಸ್ಟೋರಿ’ಗೆ ಸ್ಕೆಚ್ ಹಾಕಲು ಎಂದಿಗೂ ಅವಕಾಶ ನೀಡಲಾರೆವು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಈಗಾಗಲೇ […]

ರಾಜ್ಯದಲ್ಲೇ ಪ್ರಥಮ: ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಗೆ “ಆರೋಗ್ಯ ಶನಿವಾರ”; ಉಡುಪಿ ಶಿಕ್ಷಣ ಇಲಾಖೆಯ ನಿನೂತನ ಕಾರ್ಯ

ಮಲೇರಿಯಾ, ಡೆಂಗ್ಯೂ, ಜ್ವರ, ನೆಗಡಿ ಕಾಯಿಲೆಗಳು ಯಾವಾಗ ಬರುತ್ತವೆ, ಈ ರೋಗಗಳು ಏಕೆ ಬರುತ್ತವೆ, ಯಾವುದರಿಂದ ಬರುತ್ತದೆ, ಅವುಗಳ ಲಕ್ಷಣಗಳೇನು, ಈ ರೋಗಗಳು ಬಾರದಂತೆ ಏನು ಮಾಡಬೇಕು, ನಮ್ಮ ಆರೋಗ್ಯವನ್ನು ಸುರಕ್ಷಿತವಾಗಿ ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಈ ಎಲ್ಲಾ ವಿಷಯಗಳ ಬಗ್ಗೆ ಶಾಲಾ ಮಕ್ಕಳಿಗೆ ನಿರಂತರವಾಗಿ ತಿಳಿಸುವ ವಿನೂತನ ಮತ್ತು ಬಹುಶ: ರಾಜ್ಯದಲ್ಲೇ ಪ್ರಥಮವಾದ “ಆರೋಗ್ಯ ಶನಿವಾರ” ಎಂಬ ಕಾರ್ಯಕ್ರಮ ಉಡುಪಿ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಆರಂಭಿಸಲಾಗಿದ್ದು, ಇದರಿಂದ ಉತ್ತಮ ಫಲಿತಾಂಶ ಕಂಡು ಬರುತ್ತಿದೆ. ಉಡುಪಿ […]