ಕಾಪು: ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಆಟೋರಿಕ್ಷಾ ಮೇಲೆ ಉರುಳಿದ ಮರ; ಇಬ್ಬರು ಪ್ರಯಾಣಿಕರ ಸಾವು

ಕಾಪು: ನಿನ್ನೆ ಸಂಜೆ ವೇಳೆಗೆ ಸುರಿದ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ರಿಕ್ಷಾ ಮೇಲೆ ಬೃಹತ್ ಗಾತ್ರದ ಮರ ಬಿದ್ದು ರಿಕ್ಷಾದಲ್ಲಿದ್ದ ಪ್ರಯಾಣಿಕರಿಬ್ಬರು ಸಾವನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾಪು – ಶಿರ್ವ ರಸ್ತೆಯಲ್ಲಿ ನಡೆದಿದೆ. ಇಲ್ಲಿನ ಮಲ್ಲಾರು ಚಂದ್ರನಗರದ ಬಳಿ ಗುರುವಾರ ರಾತ್ರಿ ವೇಳೆ ಈ ಅವಘಡ ಸಂಭವಿಸಿದೆ. ಪಾದೂರು ಕೂರಾಲು ರೈಸ್ ಮಿಲ್ ಬಳಿಯ ನಿವಾಸಿ 45 ವರ್ಷದ ಪುಷ್ಪಾ ಕುಲಾಲ್ ಮತ್ತು ಕಳತ್ತೂರು ನಿವಾಸಿ 48ವರ್ಷದ ಕೃಷ್ಣ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ರಿಕ್ಷಾ ಚಾಲಕ […]
ರಾಜ್ಯದಲ್ಲಿ ಇದುವರೆಗೆ ಶೇ.52.03ರಷ್ಟು ಮತದಾನ: ಅವಿಭಜಿತ ದ.ಕ ಜಿಲ್ಲೆಯಲ್ಲಿ ಮತದಾರರ ಸರತಿ ಸಾಲು!

ಬೆಂಗಳೂರು: 224 ಸ್ಥಾನಗಳ ಕರ್ನಾಟಕ ವಿಧಾನಸಭೆಗೆ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಮಧ್ಯಾಹ್ನ 3 ಗಂಟೆಯವರೆಗೆ ಶೇ.52.03ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಇದುವರೆಗಿನ ಅಂಕಿ ಅಂಶಗಳ ಪ್ರಕಾರ ರಾಮನಗರದಲ್ಲಿ ಅತಿ ಹೆಚ್ಚು ಅಂದರೆ ಶೇ.63.3ರಷ್ಟು ಮತದಾನವಾಗಿದೆ. ಏತನ್ಮಧ್ಯೆ, ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದ.ಕ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮತದಾನವಾಗಿದೆ. ಬೆಳಗ್ಗೆಯಿಂದಲೇ ಮತದಾರರು ತಮ್ಮ ಹಕ್ಕು ಚಲಾಯಿಸಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿಯೂ ಉತ್ಸಾಹಿ ಮತದಾರರು ಉದ್ದನೆಯ ಸರತಿ ಸಾಲಿನಲ್ಲಿ […]
ಉಡುಪಿ: ಯಶ್ ಪಾಲ್ ಸುವರ್ಣ ಅವರಿಂದ ಮತ ಚಲಾವಣೆ

ಉಡುಪಿ: ಇಲ್ಲಿನ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಅವರು ತಮ್ಮ ಮತ ಕ್ಷೇತ್ರವಾದ ಉಡುಪಿ ನಗರದ ಅಜ್ಜರಕಾಡು ವಾರ್ಡಿನಲ್ಲಿರುವ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ಬೂತ್ ನಂ 188 ರಲ್ಲಿ ಮತದಾನ ಮಾಡಿದರು.
ಉಡುಪಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಂದ ರೋಡ್ ಶೋ

ಉಡುಪಿ: ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಶಿವಸೇನೆ ನಾಯಕ ಏಕನಾಥ್ ಶಿಂಧೆ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ. ಶಿಂಧೆ ಅವರು ಸೋಮವಾರ ರಾಜ್ಯಕ್ಕೆ ಆಗಮಿಸಲಿದ್ದು, ಕಾಪು ಮತ್ತು ಉಡುಪಿ ಪಟ್ಟಣದ ಬಿಜೆಪಿಯ ರೋಡ್ ಶೋಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಉಡುಪಿ ತಲುಪುವ ಮುನ್ನ ಶಿಂಧೆ ಅವರು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಂತರ ಧರ್ಮಸ್ಥಳ ದೇವಸ್ಥಾನದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಿದ್ದಾರೆ. ಬಳಿಕ ಉಡುಪಿಯ ಶ್ರೀಕೃಷ್ಣ ಮಠಕ್ಕೂ ಭೇಟಿ ನೀಡಲಿದ್ದು, ಸೋಮವಾರವೇ […]
ಉಡುಪಿ: ಮೀನುಗಾರರ ಸರ್ವೋದಯಕ್ಕಾಗಿ ವಿಶೇಷ ಆದ್ಯತೆ; ಬಿಜೆಪಿ ಪಕ್ಷ ಪ್ರಣಾಳಿಕೆಯಲ್ಲಿ ಘೋಷಣೆ

ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ಕೇಂದ್ರದಲ್ಲಿ ಬುಧವಾರದಂದು ಉಡುಪಿ ವಿಧಾನಸಭಾ ಕ್ಷೇತ್ರದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಲಾಯಿತು. ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಉಡುಪಿಯನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಸಂಕಲ್ಪದೊಂದಿಗೆ ಈ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದೇವೆ. ನಗರದಲ್ಲಿ ಬಹುಮುಖ್ಯವಾಗಿ ಬೇಕಾಗಿರುವ ಬಹುಮಡಿ ಪಾರ್ಕಿಂಗ್ ಸಂಕೀರ್ಣ ನಿರ್ಮಾಣ, ಕಲ್ಸಂಕ ಜಂಕ್ಷನ್ ನಲ್ಲಿ 70 ಮೀಟರ್ ವ್ಯಾಸವುಳ್ಳ ಸಿಗ್ನಲ್ ರಹಿತ ಮಧ್ವಾಚಾರ್ಯ ವೃತ್ತ ನಿರ್ಮಾಣ, ಒಳಚರಂಡಿ ವ್ಯವಸ್ಥೆಯ ಪುನನಿರ್ಮಾಣ, 35 ವಾರ್ಡ್ ನಲ್ಲಿ ವೈಜ್ಞಾನಿಕ […]