ತೆಂಕಪೇಟೆ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಅಹೋರಾತ್ರಿ ಭಜನಾ ಸಪ್ತಾಹ

ಉಡುಪಿ: ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆಯ ಶ್ರೀ ದೇವರ ಸನ್ನಿಧಿಯಲ್ಲಿ ಮಂಗಳವಾರ ಮಹೋತ್ಸವಕ್ಕೆ ದೇವಳದ ಅರ್ಚಕ ವಿನಾಯಕ ಭಟ್ ದೀಪ ಬೆಳಗಿಸಿ ಚಾಲನೆ ನೀಡಿದರು. ಭಜನಾ ಮಂಟಪದ ಶ್ರೀ ವಿಠೋಬಾ ರುಖುಮಾಯಿ ದೇವರ ಸನ್ನಿಧಿಯಲ್ಲಿ ಜೈ ವಿಠಲ್ ಹರಿ ವಿಠಲ್ ನಾಮ ಪಠಿಸುತ್ತಾ ಭಜನೆ ಆರಂಭಗೊಂಡಿತು. ಶ್ರೀ ಲಕ್ಷ್ಮೀ ವೆಂಕಟೇಶ ದೇವರಿಗೆ ಮತ್ಸ್ಯಾವತಾರ ಅಲಂಕಾರ ಹಾಗೂ ದೇವಾಲಯಕ್ಕೆ ವಿಶೇಷ ಹೂಗಳಿಂದ ಅಲಂಕಾರ ಮಾಡಲಾಗಿತ್ತು. ಕ್ಷೇತ್ರದಲ್ಲಿ ಊರಿನ ಹಲವು ಭಜನಾ ಮಂಡಳಿಗಳಿಂದ 7 ದಿನಗಳ ಕಾಲ ಅಹೋ […]

ಸ್ವಯಂ ಪ್ರೇರಣೆಯಿಂದ ಎಪಿಕ್ ಕಾರ್ಡಿಗೆ ಆಧಾರ್ ಜೋಡಣೆ ಮಾಡಿಸುವಂತೆ ಜಿಲ್ಲಾಧಿಕಾರಿ ಕರೆ

ಉಡುಪಿ: ಜಿಲ್ಲೆಯ ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಆಧಾರ್ ಸಂಖ್ಯೆಯನ್ನು ಮತದಾರರ ಎಪಿಕ್ ಕಾರ್ಡಿಗೆ ಸ್ವಯಂ ಪ್ರೇರಿತರಾಗಿ ಜೋಡಣೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಕರೆ ನೀಡಿದರು. ಅವರು ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಮತದಾರರ ಎಪಿಕ್ ಕಾರ್ಡಿಗೆ ಸ್ವಯಂ ಪ್ರೇರಿತರಾಗಿ ಆಧಾರ್ ಸಂಖ್ಯೆ ಜೋಡಣೆ ಮಾಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಪ್ರಮುಖ ಪಾತ್ರ ವಹಿಸಲಿದ್ದು, ಚುನಾವಣೆಯನ್ನು ಪಾರದರ್ಶಕ, ಮುಕ್ತ, ನ್ಯಾಯ ಸಮ್ಮತವಾಗಿ ನಡೆಸಲು […]

ಕಿದಿಯೂರು ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಆಚರಣೆ

ಉಡುಪಿ: ಕಿದಿಯೂರು ಹೋಟೆಲಿನ ಕಾರ್ಣಿಕ ಕೇತ್ರ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಪೂಜೆಯನ್ನು ಮಾಡಲಾಯಿತು. ಕಬಿಯಾಡಿ ಜಯರಾಂ ಆಚಾರ್ಯ ಮಾರ್ಗದರ್ಶನದಲ್ಲಿ ಧಾರ್ಮಿಕ ಪೂಜಾ ವಿಧಾನಗಳಾದ ಕ್ಷೀರಾಭಿಷೇಕ ಹಾಗೂ ಗೆಂದಾಳಿ ಬೊಂಡಾಭಿಷೇಕ ನಡೆಸಲಾಯಿತು. ವಿಶೇಷ ಹೂವಿನ ಅಲಂಕಾರ, ಮಹಾ ಪೂಜೆ ನೆರವೇರಿಸಲಾಯಿತು. ಹೋಟೆಲ್ ಮಾಲೀಕ ಭುವನೇಂದ್ರ ಕಿದಿಯೂರು, ಶ್ರೀಮತಿ ಹೀರಾ ಬಿ ಕಿದಿಯೂರು, ಜಿತೇಶ್ ಕಿದಿಯೂರು, ಭವ್ಯಶ್ರೀ ಕಿದಿಯೂರು, ವಿಲಾಸ ಕುಮಾರ್, ಹಾಗೂ ಕ್ಷೇತ್ರದ ಭಕ್ತರು ಉಪಸ್ಥಿತರಿದ್ದರು.

ಉಡುಪಿ: ಕಾಂಗ್ರೆಸ್ ನ ಹಿಂದುಳಿದ ವರ್ಗದ ಅಧ್ಯಕ್ಷ ಸಂಕಪ್ಪ. ಎ ಜೆ.ಡಿ.ಎಸ್ ಗೆ ಸೇರ್ಪಡೆ

ಉಡುಪಿ: ಉಡುಪಿಯ ಪ್ರಖ್ಯಾತ ವಕೀಲ, ಬಿಲ್ಲವ ಮುಖಂಡ ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗದ ಅಧ್ಯಕ್ಷ ಸಂಕಪ್ಪ. ಎ ಆಗಸ್ಟ್ 1 ರಂದು ಜಾತ್ಯಾತೀತ ಜನತಾದಳ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಇವರನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ಶಾಲು ಹೊದೆಸಿ, ಪಕ್ಷದ ಧ್ವಜ ನೀಡುವ ಮೂಲಕ ವಿದ್ಯುಕ್ತವಾಗಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಉಡುಪಿ ಜಿಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ, ನಾಯಕರಾದ ವಸಂತ ಪೂಜಾರಿ ಮಂಗಳೂರು, ಇಕ್ಬಾಲ್ ಮಂಗಳೂರು, ಇಕ್ಬಾಲ್ ಅತ್ರಾಡಿ, ಭರತ್ […]

ಚೈಲ್ಡ್ ಲೈನ್-1098 ವತಿಯಿಂದ ವಿಶ್ವ ಮಾನವ ಕಳ್ಳ ಸಾಗಣಿಕೆ ತಡೆ ದಿನಾಚರಣೆ ಅರಿವು ಕಾರ್ಯಕ್ರಮ

ಉಡುಪಿ: ಚೈಲ್ಡ್ ಲೈನ್-1098 ವತಿಯಿಂದ ವಿಶ್ವ ಮಾನವ ಕಳ್ಳ ಸಾಗಣಿಕೆ ತಡೆ ದಿನಾಚರಣೆಯ ಪ್ರಯುಕ್ತ ಇಂದಿರಾ ನಗರದ ಸರಕಾರಿ ಪ್ರೌಢಶಾಲೆ ಯ ವಿದ್ಯಾರ್ಥಿಗಳಿಗೆ ಮಕ್ಕಳ ಕಳ್ಳ ಸಾಗಾಣಿಕೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಉಡುಪಿ ಚೈಲ್ಡ್ ಲೈನ್-1098 ನ ನಿರ್ದೇಶಕ ರಾಮಚಂದ್ರ ಉಪಾಧ್ಯಾಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ರೈಲ್ವೆ ರಕ್ಷಣಾ ಪಡೆ ಇನ್ಸಪೆಕ್ಟರ್ ಪಿ.ವಿ ಮಧುಸೂದನ್ ಮಾತನಾಡಿ, ವಿದ್ಯಾರ್ಥಿಗಳಿಗೆ ಮಕ್ಕಳ ಕಳ್ಳ ಸಾಗಾಣಿಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿದರು. ಮಕ್ಕಳು ಕಡ್ಡಾಯವಾಗಿ […]