ಉಡುಪಿ ನಗರಸಭೆ: ಹರ್ ಘರ್ ತಿರಂಗ ಅಭಿಯಾನ ಕುರಿತು ಮಾಹಿತಿ ಕಾರ್ಯಾಗಾರ

ಉಡುಪಿ: ಭಾರತ ಸ್ವಾತಂತ್ರ್ಯದ 75 ರ ಸಂಭ್ರಮವನ್ನು ವೈವಿಧ್ಯಮಯವಾಗಿ ಆಚರಿಸುವ ಸಲುವಾಗಿ ಕೇಂದ್ರ ಸರ್ಕಾರವು ಹರ್ ಘರ್ ತಿರಂಗ ಅಭಿಯಾನವನ್ನು ಹಮ್ಮಿಕೊಂಡಿದ್ದು, ಈ ಅಭಿಯಾನವನ್ನು ನಗರಸಭಾ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಜಿಲ್ಲಾ ಭಾರತ್ ಸೇವಾದಳದ ವತಿಯಿಂದ ಆಗಸ್ಟ್ 1 ರಂದು ಮಧ್ಯಾಹ್ನ 3.30 ಕ್ಕೆ ನಗರಸಭೆಯ ಸತ್ಯಮೂರ್ತಿ ಸಭಾಭವನದಲ್ಲಿ ಧ್ವಜ ಹಾಗೂ ಧ್ವಜಾರೋಹಣ ಕುರಿತು ಮಾಹಿತಿ ಕಾರ್ಯಾಗಾರ ನಡೆಯಲಿದ್ದು, ನಗರಸಭಾ ವ್ಯಾಪ್ತಿಯ ಸಂಘ-ಸಂಸ್ಥೆಗಳ, ಸ್ವ-ಸಹಾಯ ಸಂಘಗಳ ಹಾಗೂ ನಿರಂತರ ಉಳಿತಾಯ ಗುಂಪುಗಳ ಮುಖ್ಯಸ್ಥರು ಕಡ್ಡಾಯವಾಗಿ ಭಾಗವಹಿಸುವಂತೆ […]

ಉಡುಪಿಯ ಪುತ್ತಿಗೆ ಮಠದಲ್ಲಿ 7 ಲಕ್ಷ ರೂ. ಮೌಲ್ಯದ ಚಿನ್ನದ ಗಿಂಡಿ ಕಳವು: ದೂರು ದಾಖಲು

ಉಡುಪಿ : ಇಲ್ಲಿನ ಪುತ್ತಿಗೆ ಮಠದಲ್ಲಿ 7 ಲಕ್ಷ ರೂ. ಮೌನ್ಯದ ಚಿನ್ನದ ಗಿಂಡಿ ಕಳವಾಗಿರುವ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣದ ವಿವರ: ಜು.26 ರಂದು ಬೆಳಿಗ್ಗೆ ಮಠದಲ್ಲಿ ಪೂಜೆಯ ಸಂದರ್ಭದಲ್ಲಿ ಮಠದ 6 ವಿದ್ಯಾರ್ಥಿಗಳು ಮತ್ತು ಪುರೋಹಿತರು ಬಂದು ಹೋಗಿದ್ದು, ಪೂಜೆಯ ನಂತರ ಪೂಜಾ ಸಾಮಾಗ್ರಿಗಳನ್ನು ತೆಗೆದಿಡುವ ಸಂದರ್ಭದಲ್ಲಿ 7 ಲಕ್ಷ ರೂಪಾಯಿ ಮೌಲ್ಯದ 146 ಗ್ರಾಂ ತೂಕದ ಚಿನ್ನದ ಗಿಂಡಿ ಕಾಣೆಯಾಗಿದ್ದು ಗಮನಕ್ಕೆ ಬಂದಿದೆ. ಮಠದ ವ್ಯವಸ್ಥಾಪಕರಾದ ವಿಷ್ಣುಮೂರ್ತಿ ಅವರು […]

ಶ್ರೀಕೃಷ್ಣಮಠ: ಶ್ರಾವಣ ಶನಿವಾರ ಪ್ರಯುಕ್ತ ಶ್ರೀಕೃಷ್ಣನಿಗೆ ವಿಚಾರ ಶ್ರೀನಿವಾಸ ಅಲಂಕಾರ

ಉಡುಪಿ: ಶ್ರೀಕೃಷ್ಣಮಠದಲ್ಲಿ ಶ್ರಾವಣ ಶನಿವಾರದ ಪ್ರಯುಕ್ತ ಶ್ರೀಕೃಷ್ಣದೇವರಿಗೆ ಕಾಣಿಯೂರು ಮಠಾಧೀಶರು “ವಿಚಾರ ಶ್ರೀನಿವಾಸ” ಅಲಂಕಾರ ಮಾಡಿ, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

ಕಡಿಯಾಳಿ: ಆಗಸ್ಟ್ 5ರಂದು ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಹಾಗೂ ಸಾಮೂಹಿಕ ಕುಂಕುಮಾರ್ಚನೆ

ಉಡುಪಿ: ವಿಶ್ವ ಹಿಂದೂ ಪರಿಷತ್ , ಮಾತೃ ಮಂಡಳಿ ಕಡಿಯಾಳಿ ಇದರ ಜಂಟಿ ಆಶ್ರಯದಲ್ಲಿ 38 ನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಹಾಗೂ ಸಾಮೂಹಿಕ ಕುಂಕುಮಾರ್ಚನೆಯು ಆಗಸ್ಟ್ 5ರಂದು ಸಂಜೆ 4.30 ಕೆ ಕಾತ್ಯಾಯಿನಿ ಮಂಟಪ ದಲ್ಲಿ ಜರುಗಲಿದೆ.

ಕುದಿ ಗ್ರಾಮದ ಗ್ಯಾಸ್ ಪ್ಲಾಂಟ್ ನಲ್ಲಿ ಅನಿಲ ಸೋರಿಕೆ, ತಕ್ಷಣ ಕಾರ್ಯಾಚರಣೆ, ತಪ್ಪಿದ ಭಾರೀ ಅನಾಹುತ: ಇದು ರಾಸಾಯನಿಕ ವಿಪತ್ತು ನಿರ್ವಹಣಾ ಅಣಕು ಪ್ರದರ್ಶನ

ಉಡುಪಿ: ಉಡುಪಿ ತಾಲೂಕಿನ ಕುದಿ ಗ್ರಾಮದ ಜನತೆಗೆ ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ತೀವ್ರ ಉಸಿರಾಟದ ತೊಂದರೆ ಹಾಗೂ ಅಸ್ವಸ್ಥತೆ ಕಾಣಿಸಿಕೊಂಡಿದ್ದರಿಂದ ಸಾರ್ವಜನಿಕರು ತೀವ್ರ ಆತಂಕದಲ್ಲಿದ್ದರು, ಗ್ರಾಮದಲ್ಲಿದ್ದ ಎ.ಜಿ.ಎಸ್. ಎಲ್‌ಪಿಜಿ ಇಂಡಸ್ಟ್ರಿಯಲ್ಲಿ ಸಂಭವಿಸಿದ ಅನಿಲ ಸೋರಿಕೆಯಿಂದಾಗಿ ಈ ಘಟನೆ ಸಂಭವಿಸಿತ್ತು. ಇಂದು ಬೆಳಗ್ಗೆ 8.50 ಕ್ಕೆ ಕುದಿ ಗ್ರಾಮದಲ್ಲಿರುವ ಎ.ಜಿ.ಎಸ್ ಎಲ್‌ಪಿಜಿ ಇಂಡಸ್ಟ್ರಿಯಲ್ಲಿ ಅನಿಲ ಸೋರಿಕೆ ಕಂಡು ಬಂದಿದ್ದು, ತಕ್ಷಣವೇ ಅಲ್ಲಿನ ಸಿಬ್ಬಂದಿ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಉಚಿತ ದೂರವಾಣಿ ಸಂಖ್ಯೆ 1077 ಗೆ ಘಟನೆ […]