ಮೇ 3 ರಂದು ಸಾರಿಗೆ ಕೆ.ಎಸ್.ಆರ್.ಟಿಸಿ ಬಸ್ ಕಾರ್ಯಾಚರಣೆಯಲ್ಲಿ ವ್ಯತ್ಯಯ

ಉಡುಪಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ ಬಸ್‌ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಮೇ 3 ರಂದು ಅಂಕೋಲದ ಹಟ್ಟಿಕೇರಿಯಲ್ಲಿ ನಡೆಯುವ ಪ್ರಧಾನಮಂತ್ರಿಗಳ ಕಾರ್ಯಕ್ರಮಕ್ಕೆ ನಿಯೋಜಿಸಲಾಗಿರುವುದರಿಂದ, ಸದ್ರಿ ದಿನದಂದು ಮಂಗಳೂರು ವಿಭಾಗ ವ್ಯಾಪ್ತಿಯ ಉಡುಪಿ, ಕಾರ್ಕಳ, ಕುಂದಾಪುರ, ಸಿದ್ಧಾಪುರ, ಬೈಂದೂರು ಹಾಗೂ ಭಟ್ಕಳ ವಲಯ ಸಾರಿಗೆ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಪ್ರಯಾಣಿಕರು ಕ.ರಾ.ರ.ಸಾ.ನಿಗಮದೊಂದಿಗೆ ಸಹಕರಿಸುವಂತೆ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇ-3 ಮಂಗಳೂರಿಗೆ ಪ್ರಧಾನಿ ಮೋದಿ: ವಾಹನ ಸಂಚಾರದಲ್ಲಿ ಬದಲಾವಣೆ

ಮಂಗಳೂರು: ಮೇ 3ರಂದು ಮುಲ್ಕಿಯ ಕೊಲ್ನಾಡು ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನವ ಕರ್ನಾಟಕ ಸಂಕಲ್ಪ ಸಮಾವೇಶ ಹಿನ್ನೆಲೆಯಲ್ಲಿ ಸಮಾವೇಶ ನಡೆಯುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಚಾರ ಬದಲಾವಣೆ ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಭದ್ರತೆಯ ಹಿತದೃಷ್ಟಿಯಿಂದ ಮೇ 3 ರ ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸಂಚಾರದಲ್ಲಿ ಮಾರ್ಪಾಡು ಮಾಡಲಾಗಿದೆ.   ಬೆಳಗ್ಗೆ ಸುಮಾರು 10.30ರ ಬಳಿಕ ಪ್ರಧಾನಿ ಮೋದಿ ಕೊಲ್ನಾಡು ಹೆಲಿಪ್ಯಾಡ್‌ನಿಂದ ಕಾರ್ಯಕ್ರದ ಸ್ಥಳಕ್ಕೆ […]

ಕರಾವಳಿಯ ಜೀವನಾಡಿ ಮತ್ಸ್ಯಗಂಧಾ ಎಕ್ಸ್ ಪ್ರೆಸ್ ಗೆ ರಜತ ಸಂಭ್ರಮ: ಉಡುಪಿ ನಿಲ್ದಾಣದಲ್ಲಿ ಸಂಭ್ರಮಾಚರಣೆ

ಉಡುಪಿ: ದಿ. ಜಾರ್ಜ್ ಫೆರ್ನಾಂಡೀಸ್ ಅವರ ಕನಸಿನ ಕೂಸು, ಅವಿಭಜಿತ ದ.ಕ ಜಿಲ್ಲೆಯನ್ನು ಒಂದುಗೂಡಿಸುವ ಕೊಂಕಣ ರೈಲ್ವೆಯ “ಮತ್ಸ್ಯ ಗಂಧಾ” ಎಕ್ಸ್‌ಪ್ರೆಸ್‌ ರೈಲು ಈ ಮಾರ್ಗದಲ್ಲಿ ತನ್ನ ಓಡಾಟವನ್ನು 1998ರ ಮೇ 1ರಂದು ಪ್ರಾರಂಭಿಸಿತು. ಉಡುಪಿಯೂ ಕೂಡಾ ಪ್ರತ್ಯೇಕ ಜಿಲ್ಲೆಯಾಗಿ ರೂಪುಗೊಂಡು ರಜತ ಸಂಭ್ರಮವನ್ನು ಆಚರಿಸುತ್ತಿರುವ ಈ ಹೊತ್ತಿನಲ್ಲಿ ಮತ್ಸ್ಯಗಂಧಾ ಎಕ್ಸ್‌ಪ್ರೆಸ್‌ ಕೂಡಾ 25 ವರ್ಷ ಪೂರ್ಣಗೊಳಿಸಿ ರಜತ ಮಹೋತ್ಸವವನ್ನು ಆಚರಿಸುತ್ತಲಿದೆ. ಈ ದಿನವನ್ನು ಅವಿಸ್ಮರಣೀಯವಾಗಿಸಲು ಉಡುಪಿ ರೈಲು ಯಾತ್ರಿ ಸಂಘವು ಇದನ್ನು ವಿಶೇಷ ರೀತಿಯಲ್ಲಿ ಆಚರಿಸಲು […]

ಔರಾ ಕೆಫೆ&ಕೇಕ್ ಶಾಪ್ ಶುಭಾರಂಭ

ಉಡುಪಿ: ನಗರದ ಹೊಸ ಬಸ್ ನಿಲ್ದಾಣದ ಬಳಿಯ ಜಿ.ಬಿ. ಪಂತ್ ರಸ್ತೆಯಲ್ಲಿರುವ ಗ್ರಾಸ್ ಲಾಂಡ್ ಕಾಂಪ್ಲೆಕ್ಸ್ ನಲ್ಲಿ ಔರಾ ಕೆಫೆ ಶಾಪ್ ಭಾನುವಾರಂದು ಶುಭಾರಂಭಗೊಂಡಿತು. ಸೇಂಟ್ ಆಂಟೋನಿ ಆರ್ಥೊಡಾಕ್ಸ್ ಚರ್ಚ್ ಕೊಳಲಗಿರಿ ಇದರ ಧರ್ಮಗುರು ಫಾ.ಡೇವಿಡ್ ಕ್ರಾಸ್ತಾ ಬೇಕರಿಯನ್ನು ಉದ್ಘಾಟಿಸಿದರು. ಬೇಕರಿ ಮಾಲೀಕರಾದ ನಿಶಾನ್ ಡಿಸೋಜಾ ಮತ್ತು ನೆಯಾನ್ ಡಿಸೋಜಾ ಉಪಸ್ಥಿತರಿದ್ದರು. ಔರಾ ಕೆಫೆ ಶಾಪ್ ನಲ್ಲಿ ಮನೆಯಲ್ಲೇ ತಯಾರಿಸಿದ ಐಸ್ ಕ್ರೀಮ್, ಬೇಕರಿ ಉತ್ಪನ್ನಗಳು, ಚಾಕೋಲೇಟ್ ಗಳು ಹಾಗೂ ಪೆಸ್ಟ್ರಿಗಳು ದೊರೆಯುತ್ತವೆ.

ಡಾ.ವಿ.ಎಸ್.ಆಚಾರ್ಯ ಕನಸು ನನಸಾಗಿಸಲು ಯಶ್ ಪಾಲ್ ಸುವರ್ಣರಿಗೆ ಮತ ನೀಡಿ: ಪ್ರತಾಪ್ ಸಿಂಹ ನಾಯಕ್

ಉಡುಪಿ: ಡಾ.ವಿ.ಎಸ್ ಆಚಾರ್ಯ ಕಂಡ ನವ ಉಡುಪಿ ನಿರ್ಮಾಣದ ಕನಸು ನನಸಾಗಿಸಲು ಬಿಜೆಪಿಯ ಸಮರ್ಥ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಅವರನ್ನು ಗೆಲ್ಲಿಸುವಂತೆ ಮತದಾರರಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮನವಿ ಮಾಡಿದರು. 3 ಬಾರಿ ಉಡುಪಿ ನಗರ ಸಭೆಯ ಸದಸ್ಯರಾಗಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಮತ್ತು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿ ಸಹಕಾರ ಕ್ಷೇತ್ರದಲ್ಲೂ ತಮ್ಮ ಕಾರ್ಯವೈಖರಿಯಿಂದ ಗುರುತಿಸಿಕೊಂಡು, ಧಾರ್ಮಿಕ ಸಾಮಾಜಿಕ ಶಿಕ್ಷಣ ಕ್ಷೇತ್ರದಲ್ಲಿ […]