ಉಡುಪಿ: ಲಾಕ್ ಡೌನ್ ಕುರಿತಂತೆ ನಾಳೆ ಜನಪ್ರತಿನಿಧಿಗಳ ಸಭೆ: ಡಿಸಿ ಜಗದೀಶ್

ಉಡುಪಿ: ಮುಖ್ಯಮಂತ್ರಿಗಳು ಇಂದು ಕೊರೊನಾ ಹೆಚ್ಚುತ್ತಿರುವ 11 ಜಿಲ್ಲೆಗಳ ಡಿಸಿಗಳೊಂದಿಗೆ ಸಭೆ ನಡೆಸಿದ್ದು, ಲಾಕ್ ಡೌನ್ ಸಂಬಂಧಿಸಿದಂತೆ ಜಿಲ್ಲಾಡಳಿತ ತೀರ್ಮಾನ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ. ಅದರಂತೆ ನಾಳೆ (ಜುಲೈ 14) ಬೆಳಿಗ್ಗೆ 10ಗಂಟೆಗೆ ಜಿಲ್ಲೆಯ ಜನಪ್ರತಿನಿಧಿಗಳ ಸಭೆ ಕರೆದಿದ್ದು, ಈ ಸಭೆಯಲ್ಲಿ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಯಾವ ಕ್ರಮಗಳನ್ನು ಕೈಗೊಳ್ಳಬೇಕೆಂಬುವುದರ ಬಗ್ಗೆ ತೆಗೆದುಕೊಳ್ಳುತ್ತೇವೆ. ಅಲ್ಲದೆ ಲಾಕ್ ಡೌನ್ ಬಗ್ಗೆಯೂ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.‌ಜಗದೀಶ್ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವೇಳೆಯಲ್ಲಿ […]