ಮಾನವೀಯತೆಗೆ ತಲೆಬಾಗೋಣ ಮಾನವ ಧರ್ಮವನ್ನು ಉಳಿಸೋಣ: ಡಿಸಿಎಂ ಡಿ.ಕೆ.ಶಿವಕುಮಾರ್ ಕರೆ

ಉಡುಪಿ: ನಾವೆಲ್ಲರೂ ಮಾನವೀಯತೆಗೆ ತಲೆಭಾಗಬೇಕು. ಮಾನವ ಧರ್ಮವನ್ನು ಉಳಿಸಿಕೊಳ್ಳಬೇಕು. ಯಾರಿಗೂ ತೊಂದರೆ ಕೊಡದಂತೆ ನಮ್ಮ ಧರ್ಮದ ದಾರಿಯಲ್ಲಿ ನಾವು ಬದುಕಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಉಡುಪಿ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕಾಪುವಿನ ಶ್ರೀ ಹೊಸಮಾರಿಗುಡಿ ದೇಗುಲದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು‌.ಮಾರಿಯಮ್ಮ ಎಲ್ಲರೂ ನೀಡುವ ಹಣ್ಣು, ಹೂವು ಜೊತೆಗೆ ಕೋಳಿಯನ್ನು ಸಹ ಅರ್ಪಿಸಿಕೊಳ್ಳುತ್ತಾಳೆ ಎಂದು ಪುರೋಹಿತರು ಹೇಳಿದರು. ಏಕೆಂದರೆ ಭಕ್ತರು ಭಕ್ತಿಯಿಂದ ನೀಡಿದ್ದನ್ನು ತಾಯಿ ಬೇಡ ಎನ್ನುವುದಿಲ್ಲ. ಭಕ್ತಿಗೆ ದೊಡ್ಡ ಶಕ್ತಿಯಿದೆ” ಎಂದರು. ಸರ್ಕಾರದ ಸಹಾಯವಿಲ್ಲದೇ […]