ಉಡುಪಿ:ಮತ್ಸ್ಯ ಸಂಪದ ಯೋಜನೆ : ಅರ್ಜಿ ಆಹ್ವಾನ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ-ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಘಟಕಗಳ ವಿವರ: ಪಚ್ಚಿಲೆ ಕೃಷಿ (ಮಸ್ಸೆಲ್ಸ್, ಕಲ್ಲ, ಕ್ಲಾಮ್ಸ್, ಮುತ್ತು ಇತ್ಯಾದಿ), ಸಾಂಪ್ರದಾಯಿಕ ಮೀನುಗಾರರಿಗೆ (ಬದಲಿ) ದೋಣಿ ಮತ್ತು ಬಲೆ ಒದಗಿಸುವುದು ಹಾಗೂ ಐಸ್ ಪ್ಲ್ಯಾಂಟ್ / ಕೋಲ್ಡ್ ಸ್ಟೋರೇಜ್ ಆಧುನೀಕರಣಕ್ಕೆ ಸಹಾಯಧನ. ಆಸಕ್ತರು ಅರ್ಜಿ ಸಲ್ಲಿಸಲು ಏಪ್ರಿಲ್ 28 ಕೊನೆಯ ದಿನ. […]