ಕುಂದಾಪುರ: ಗಾಂಜಾ ದಾಸ್ತಾನು ಇಟ್ಟುಕೊಂಡಿದ್ದ ಮನೆಗೆ ದಾಳಿ; ಮಹಿಳೆ ಸಹಿತ ಇಬ್ಬರ ಬಂಧನ

ಉಡುಪಿ: ಗಾಂಜಾ ದಾಸ್ತಾನು ಇಟ್ಟುಕೊಂಡಿದ್ದ ಮನೆಯೊಂದಕ್ಕೆ ದಾಳಿ ನಡೆಸಿದ ಪೊಲೀಸರು ಮಹಿಳೆ ಸಹಿತ ಇಬ್ಬರನ್ನು ಬಂಧಿಸಿದ ಘಟನೆ ಕುಂದಾಪುರ ತಾಲೂಕಿನ‌ ಗುಲ್ವಾಡಿ ಗ್ರಾಮದ ಉದಯ ನಗರ ಎಂಬಲ್ಲಿ ಇಂದು ನಡೆದಿದೆ. ಗುಲ್ವಾಡಿ ಗ್ರಾಮದ ಉದಯನಗರ ನಿವಾಸಿಗಳಾದ ನಜರುಲ್ಲಾ ಖಾನ್‌ (40) ಹಾಗೂ ಫಾತಿಮಾ(33) ಬಂಧಿತ ಆರೋಪಿಗಳು. ಈ ಇಬ್ಬರು ಆರೋಪಿಗಳು ಗಾಂಜಾ ಮಾರಾಟ ಮಾಡುವ ಉದ್ದೇಶದಿಂದ ಮನೆಯಲ್ಲಿ ಗಾಂಜಾ ದಾಸ್ತಾನು ಇಟ್ಟುಕೊಂಡಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ 6.43 ಲಕ್ಷ ಮೌಲ್ಯದ […]