ಠಾಣೆ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ದೂರು ಸ್ವೀಕರಿಸದೇ ಇರಲು ಸಾಧ್ಯವಿಲ್ಲ: ಹೈ ಕೋರ್ಟ್

ಬೆಂಗಳೂರು: ‘ನಾಪತ್ತೆ ಪ್ರಕರಣಗಳಲ್ಲಿ ನಾಪತ್ತೆಯಾದವರ ಬಗ್ಗೆ ದೂರು ಸ್ವೀಕರಿಸುವಾಗ ಪೊಲೀಸರು; ‘ಸಂಬಂಧಿಸಿದ ಪ್ರದೇಶ ನಮ್ಮ ಠಾಣೆ ವ್ಯಾಪ್ತಿಗೆ ಒಳಪಡುವುದಿಲ್ಲ’ ಎಂದು ನಿರಾಕರಣೆ ಮಾಡುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ‘ನನ್ನ ಪುತ್ರಿ 2023ರಲ್ಲಿ ನಾಪತ್ತೆಯಾಗಿದ್ದಾಳೆ. ಪೊಲೀಸರಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ’ ಎಂದು ಆರೋಪಿಸಿ ಹುಬ್ಬಳಿಯ ರಾಮಕೃಷ್ಣ ಭಟ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ನೇತೃತ್ವದ ವಿಭಾಗೀಯ ನ್ಯಾಯಪೀಠ (ಧಾರವಾಡ), ಇಂತಹ ದೂರುಗಳು ಬಂದಾಗ ಪೊಲೀಸರು ಯಾವ ಕ್ರಮ ಅನುಸರಿಸಬೇಕು ಎಂಬ ಬಗ್ಗೆ ಮಾರ್ಗಸೂಚಿ […]