ಉಡುಪಿ: ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಹಾಗೂ ರಾಷ್ಟ್ರೋತ್ಥಾನ ಪದವಿ ಪೂರ್ವ ಕಾಲೇಜು ಕಟ್ಟಡಗಳ ಲೋಕಾರ್ಪಣೆ

ಬ್ರಹ್ಮಾವರ: ದೇಶದ ಪ್ರತಿಯೊಬ್ಬ ಮಗುವೂ ಸತ್ಪ್ರಜೆಯಾಗಿ ಬೆಳೆಯಲು ಈ ನೆಲದ ಸಂಸ್ಕೃತಿಯನ್ನು ಮಕ್ಕಳಲ್ಲಿ ತುಂಬಬೇಕು ಎಂದು ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಬುಧವಾರ ಹೇಳಿದ್ದಾರೆ. ರಾಷ್ಟ್ರೋತ್ಥಾನ ಪರಿಷತ್ ವತಿಯಿಂದ ಚೇರ್ಕಾಡಿ ಗ್ರಾಮದ ಕೇಶವ ನಗರದ ರಾಣಿ ಅಬ್ಬಕ್ಕ ರಸ್ತೆಯಲ್ಲಿ ನಿರ್ಮಾಣಗೊಂಡ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ (ಸಿಬಿಎಸ್ಇ) ಹಾಗೂ ರಾಷ್ಟ್ರೋತ್ಥಾನ ಪದವಿ ಪೂರ್ವ ಕಾಲೇಜು ಕಟ್ಟಡಗಳ ಲೋಕಾರ್ಪಣೆ ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡುತಿದ್ದರು. ದೇಶದ ಅಂತ:ಸ್ಸತ್ವ ಕುಗ್ಗುತ್ತಿದ್ದು, ಇದನ್ನು ತಡೆಗಟ್ಟಿ ಮಾತೃಭೂಮಿ ರಕ್ಷಿಸಲು ನೆಲ, ಜಲ, ಆಚಾರ, ವಿಚಾರ, […]