ಉಡುಪಿಯಲ್ಲಿ ಭಾರೀ ವರ್ಷಾಧಾರೆ; ಕೆಮ್ತೂರು, ಮಠ ಕುದ್ರು ಭಾಗದಲ್ಲಿ ನೆರೆ

ಉಡುಪಿ: ಜಿಲ್ಲೆಯಾದ್ಯಂತ ಕಳೆದ ಐದು ದಿನಗಳಿಂದ ಭಾರೀ ವರ್ಷಾಧಾರೆಯಾಗುತ್ತಿದ್ದು, ಇದರಿಂದ ನದಿ ಪಾತ್ರದ ಜನರಲ್ಲಿ ಆತಂಕ ಮನೆಮಾಡಿದೆ. ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಪಾಪನಾಶಿನಿ ನದಿ, ಪಿನಾಕಿನಿ ನದಿ ಉಕ್ಕಿ ಹರಿಯುತ್ತಿದ್ದು, ನದಿ ತೀರದ ನಿವಾಸಿಗಳಲ್ಲಿ ನೆರೆ ಭೀತಿ ಎದುರಾಗಿದೆ. ಪಾಪನಾಶಿನಿ ನದಿಗೆ ಹೊಂದಿಕೊಂಡಿರುವ ಉದ್ಯಾವರ, ಮಟ್ಟು ಪ್ರದೇಶದಲ್ಲಿ ನೆರೆ ಬಂದಿದ್ದು, ಜನಜೀವನಕ್ಕೆ ತೊಂದರೆಯಾಗಿದೆ. ಉದ್ಯಾವರದ ಮಠದ ಕುದ್ರು, ಕೆಮ್ತೂರು, ಮೂಡುಅಲೆವೂರು ಮತ್ತಿತರೆಡೆಗಳಲ್ಲಿ ನದಿ ಅಪಾಯದ ಮಟ್ಟ ತಲುಪಿದೆ. ಇಂದು ಮುಂಜಾನೆ ಅಗ್ನಿಶಾಮಕ ಸಿಬ್ಬಂದಿ ಈ ಭಾಗದ ಜನರ […]