ವಯನಾಡು ಭೂಕುಸಿತ; ಖೇದ ವ್ಯಕ್ತಪಡಿಸಿದ ವಿಧಾನಸಭಾ ಸ್ಪೀಕರ್ ಯುಟಿ ಖಾದರ್

ಉಡುಪಿ: ಕೇರಳ ವಯನಾಡು ಭೂಕುಸಿತಕ್ಕೆ ಖೇದ ವ್ಯಕ್ತಪಡಿಸಿದ ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಅವರು, ಈ ರೀತಿ ಕೂಡ ಪ್ರಕೃತಿ ಮುನಿಸಿಕೊಳ್ಳುತ್ತಾ ಎಂದು ಅಚ್ಚರಿ ವ್ಯಕ್ತಪಡಿಸಿದರು. ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಜೀವಮಾನದಲ್ಲೇ ಪ್ರಥಮ ಬಾರಿಗೆ ಇಂಥ ದುರ್ಘಟನೆ ನೋಡಿದ್ದೇನೆ. ನನಗೆ ಅತ್ಯಂತ ನೋವಾಗಿದೆ. ಪ್ರಕೃತಿ ವಿಕೋಪ ದೇವರ ಸೃಷ್ಟಿ, ಅದನ್ನು ತಡೆಯಲು ನಮಗೆ ಸಾಧ್ಯವಿಲ್ಲ. ಜನರು ಪ್ರಯತ್ನ ಪಟ್ಟರೆ ಇಂತಹ ದುರ್ಘಟನೆಗಳನ್ನು ತಡೆಗಟ್ಟಬಹುದು ಎಂದರು. ಮಾನವರ ತಪ್ಪಿನಿಂದ ಆಗುವ ದುರ್ಘಟನೆಗಳನ್ನು ತಪ್ಪಿಸಬಹುದು. ಈ […]