ಉಡುಪಿಯ ಶ್ರೀ ಕೃಷ್ಣಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವದ ಸಂಭ್ರಮ

ಉಡುಪಿ:ಉಡುಪಿಯ ಶ್ರೀಕೃಷ್ಣಮಠದಲ್ಲಿ ನಡೆಯುವ ಕಾರ್ತಿಕ ಲಕ್ಷದೀಪೋತ್ಸವಕ್ಕೆ ಬುಧವಾರ ಸಂಜೆ ಚಾಲನೆ ನೀಡಲಾಯಿತು.ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಕಿರಿಯ ಸುಶೀಂದ್ರತೀರ್ಥ ಶ್ರೀಪಾದರು ರಥಬೀದಿಯ ಸುತ್ತಲೂ ಹಣತೆಯನ್ನಿಟ್ಟು ದೀಪೋತ್ಸವಕ್ಕೆ ಚಾಲನೆ ನೀಡಿದರು. ಉತ್ಥಾನ ದ್ವಾದಶಿಯ ಪ್ರಯುಕ್ತ ಮಧ್ವ ಸರೋವರದಲ್ಲಿರುವ ಮಂಟಪದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಉಭಯ ಶ್ರೀಪಾದರು ಕ್ಷೀರಾಭ್ದಿಯನ್ನು ಮಾಡಿ, ಅರ್ಘ್ಯವನ್ನು ನೀಡಿದರು.ಆ ಬಳಿಕ ಲಕ್ಷದೀಪೋತ್ಸವದ ಅಂಗವಾಗಿ ಮಧ್ವ ಸರೋವರದಲ್ಲಿ ಪಾರ್ಥ ಸಾರಥಿ ರಥದ ಮಾದರಿಯ ತೆಪ್ಪದಲ್ಲಿ ಆಕರ್ಷಕ ತೆಪ್ಪದಲ್ಲಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರನ್ನಿಟ್ಟು […]