ದುಬಾೖ ಬಿಸಿಲಿನ ತಾಪಕ್ಕೆ ಕುಂದಾಪುರದ ಯುವಕ ಮೃತ್ಯು.

ಕುಂದಾಪುರ: ಯು.ಎ.ಇ.ಯಲ್ಲಿ ಬಿಸಿಲಿನ ಝಳ ತಾಳಲಾರದೆ ಕುಂದಾಪುರದ ವಿಟ್ಠಲವಾಡಿ ಯುವಕ ಶಾನ್ ಡಿ’ಸೋಜಾ (19) ಮೃತಪಟ್ಟ ಘಟನೆ ಸೆ.15 ರಂದು ನಡೆದಿದೆ. ದುಬಾೖಯಿಂದ ಸುಮಾರು 115 ಕಿ.ಮೀ. ದೂರದಲ್ಲಿರುವ ರಾಸ್ ಅಲ್ ಖೈಮಾದಲ್ಲಿ ಬಿಸಿಲಿನ ತಾಪಕ್ಕೆ ಗುರಿಯಾಗಿ ಆರ್ಎಕೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ರವಿವಾರ ಮೃತರಾಗಿದ್ದಾರೆ. ಅವರು ತಂದೆ, ತಾಯಿ, ಇಬ್ಬರು ಸಹೋದರರನ್ನು ಅಗಲಿದ್ದಾರೆ. ಶಾನ್ ಡಿ’ಸೋಜಾ ಅವರು ಕುಂದಾಪುರದ, ಮೂಲತಃ ಮೂಡುಬಿದಿರೆಯ ಹೊಸಬೆಟ್ಟು ನಿವಾಸಿ ಎಲಿಯಾಸ್ ಸಿರಿಲ್ ಡಿ’ಸೋಜಾ ಮತ್ತು ಪ್ರಮೀಳಾ ಡಿ’ಸೋಜಾ […]