ಉಡುಪಿ: ಪ್ರತ್ಯೇಕ ಪ್ರಕರಣ – ಇಬ್ಬರೂ ಮಹಿಳೆಯರ ಆತ್ಮಹತ್ಯೆ
ಕುಂದಾಪುರ: ಮಾನಸಿಕ ಖಿನ್ನತೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಅ.12ರಂದು ಮಧ್ಯಾಹ್ನ ಮನೆಯಲ್ಲಿ ಇಲಿ ಪಾಷಣ ತಿಂದು ಆತ್ಮಹತ್ಯೆಗೆ ಯತ್ನಿಸಿ ತೀವ್ರ ಅಸ್ವಸ್ಥರಾಗಿದ್ದ ಸಿದ್ದಾಪುರ ಗ್ರಾಮದ ಹರ್ಕೆಬಾಳು ನಿವಾಸಿ ಸಾದಮ್ಮ (62) ಎಂಬವರು ಅ.21ರಂದು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಅ.21ರಂದು ಬೆಳಗ್ಗೆ ಮೃತಪಟ್ಟರು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ:ಬ್ರಹ್ಮಾವರ: ಯಡ್ತಾಡಿ ಗ್ರಾಮದ ಹರ್ಷ ಎಂಬವರ ಎಂಬವರ ಪತ್ನಿ ಶಾಲಿನಿ(34) ಎಂಬವರು ಅ.19ರಂದು ತನ್ನ ಪತಿಗೆ ಮೊಬೈಲ್ ಸಂದೇಶ ಕಳುಹಿಸಿ […]
ಕುಂದಾಪುರ: ನೇಣುಬಿಗಿದು ಯುವತಿ ಆತ್ಮಹತ್ಯೆ.
ಕುಂದಾಪುರ: ತಾಲೂಕಿನಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಶಂಕರನಾರಾಯಣ ಗ್ರಾಮದ ಯುವತಿ ಸೆ.29ರಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಂಕರನಾರಾಯಣ ಗ್ರಾಮದ ಶಿಲ್ಪಾ(25) ಅವರು ಮೂರ್ಛೆ ರೋಗದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ವರ್ಷ ಸಹೋದರ ಸಾವನಪ್ಪಿದ್ದು, ಇದರಿಂದ ಇನ್ನಷ್ಟು ಖನ್ನತೆಗೆ ಒಳಗಾಗಿದ್ದರು. ಸೆ.29ರಂದು ಮನೆಯ ಒಳಗಿನ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರನ್ನು ಕೂಡಲೆ ಶಂಕರನಾರಾಯಣ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದ್ದಾಗಿ ತಿಳಿಸಿದ್ದಾರೆ ಎಂದು ತಂದೆ ಸುಬ್ಬ(48) ರವರು ಪೊಲೀಸರಿಗೆ ದೂರು ನೀಡಿದ್ದಾರೆ.ಶಂಕರನಾರಾಯಣ […]