ಉಡುಪಿ ಜಿಲ್ಲೆ: ಲಾಕ್ ಡೌನ್ ನಿರ್ಬಂದಗಳ ಪಾಲನೆ ಕಡ್ಡಾಯ, ತಪ್ಪಿದಲ್ಲಿ ಕಠಿಣ ಕಾನೂನು ಕ್ರಮ – ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ

ಉಡುಪಿ : ಕೊರೊನಾ ನಿಯಂತ್ರಣ ಕುರಿತಂತೆ, ರಾಜ್ಯ ಸರ್ಕಾರ ಸೂಚಿಸಿರುವ ನಿರ್ಬಂಧಗಳನ್ನು ಉಡುಪಿ ಜಿಲ್ಲೆಯ ನಾಗರೀಕರು ಕಡ್ಡಾಯವಾಗಿ ಪಾಲನೆ ಮಾಡುವಂತೆ ಹಾಗೂ ಈ ನಿರ್ಬಂಧಗಳನ್ನು ಉಲ್ಲಂಘಿಸುವವರ ವಿರುದ್ದ ಕಾನೂನು ರೀತಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ. ಅವರು ಮಂಗಳವಾರ, ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲೆಗೆ ವಿದೇಶದಿಂದ ಬಂದಿರುವ 900 ಜನರನ್ನು ಗುರುತಿಸಲಾಗಿದ್ದು, ಈ ಎಲ್ಲರ ಮನೆಗಳಿಗೆ ನೋಟೀಸ್ ಅಂಟಿಸಲಾಗಿದ್ದು, ಕಡ್ಡಾಯವಾಗಿ ಹೋಂ ಕ್ವಾರಂಟೈನ್ ಪಾಲಿಸಲು ಸೂಚಿಸಲಾಗಿದ್ದು, ಪ್ರತಿದಿನ ದಿನಕ್ಕೆ […]