ಜೂನ್1 ರಿಂದ ಜುಲೈ 31ರ ವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ: ರಾಜ್ಯ ಸರ್ಕಾರ ಆದೇಶ.

ಉಡುಪಿ, ಮೇ.29: ಪ್ರಸಕ್ತ ಸಾಲಿನ ಮಳೆಗಾಲದ ಅವಧಿಯಲ್ಲಿ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ನಿಷೇಧವನ್ನು ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 […]