ಉಡುಪಿ: ವಲಸೆ ಕಾರ್ಮಿಕನ ಕೊಲೆ ಪ್ರಕರಣ; ಮೂವರು ಆರೋಪಿಗಳ ಬಂಧನ

ಉಡುಪಿ: ಒಂದು ವರ್ಷ ಹಿಂದೆ ಕರಾವಳಿ ಜಂಕ್ಷನ್ ಬಳಿ ನಡೆದ ವಲಸೆ ಕಾರ್ಮಿಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಳಕಲ್ ನಿವಾಸಿಗಳಾದ ಕನಕಪ್ಪ ಹನುಮಂತ ರೋಡಿ(46), ಯಮನೂರ ತಿಪ್ಪಣ್ಣ ಮಾರಣ ಬಸರಿ(24), ಯಮನೂರಪ್ಪಜೇಡಿ(26) ಬಂಧಿತ ಆರೋಪಿಗಳು. ಗುಜರಿ ಹೆಕ್ಕುತ್ತಿದ್ದ ಸುಮಾರು 45 ರಿಂದ 48 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರನ್ನು 2023ರ ಅ.16ರಂದು ರಾತ್ರಿ ವೇಳೆ ಹೋಟೇಲ್ ಕರಾವಳಿ ಬಳಿ ಹರಿತವಾದ ಆಯುಧದಿಂದ ಬಲಕೈಯನ್ನು […]