ಉಡುಪಿ:ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಮೋ-ಜೋ ಕಿಟ್ ನೀಡಲು ಅರ್ಜಿ ಆಹ್ವಾನ.

ಉಡುಪಿ:ಕರ್ನಾಟಕ ಮಾಧ್ಯಮ ಅಕಾಡೆಮಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಉತ್ತೇಜನ ನೀಡುವ ಸಲುವಾಗಿ ಉಚಿತವಾಗಿ ಮೋ-ಜೋ ಕಿಟ್‌ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಜಿದಾರರು ಈ ಕೆಳಕಂಡ ಷರತ್ತುಗೊಳಪಟ್ಟು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಾಗಿರಬೇಕು ಅಥವಾ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಅಥವಾ ಉಪಗ್ರಹ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು. […]