ಭಾವನೆಗೆ ಧಕ್ಕೆ ಆಗದಂತೆ ಮಹಿಷಾ ದಸರಾ ಆಚರಣೆ ಮಾಡಿದರೆ ಸಂತೋಷ

ಉಡುಪಿ: ಚಾಮುಂಡಿ ಬೆಟ್ಟ ಧಾರ್ಮಿಕ ಪ್ರದೇಶವಾಗಿದ್ದು, ಚಾಮುಂಡೇಶ್ವರಿ ತಾಯಿಯನ್ನು ಮಹಿಷಾಸುರ ಮರ್ದಿನಿ ಎಂದು ನಾವು ನಂಬುತ್ತೇವೆ. ಹೀಗಾಗಿ ಈ ಭಾವನೆಗೆ ಧಕ್ಕೆ ಆಗದಂತೆ ಮಹಿಷಾ ದಸರಾ ಆಚರಣೆ ಮಾಡಿದರೆ ನಮಗೆ ಸಂತೋಷ ಎಂದು ಮೈಸೂರು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಮೈಸೂರು ಮಹಿಷಾ ದಸರಾ ಆಚರಣೆ ವಿಚಾರಕ್ಕೆ ಸಂಬಂಧಿಸಿ ಉಡುಪಿಯಲ್ಲಿಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆ ಉತ್ತರಿಸಿದ ಅವರು, ನಾನೊಬ್ಬ ಜವಾಬ್ದಾರಿಯುತ ಪ್ರತಿನಿಧಿ. ಸಂವಿಧಾನದಲ್ಲಿ ಯಾವುದೇ ನಂಬಿಕೆಗಳನ್ನು ಇಟ್ಟುಕೊಳ್ಳಲು ಅವಕಾಶವಿದೆ. ಮನೆಯಲ್ಲಿ ಯಾವುದೇ ಆಚರಣೆ ಮಾಡಬಹುದು. […]