ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತು ಸಿಎಂಗೆ ಮನವಿ: ಕೋಟ

ಉಡುಪಿ: ಸಮಾಜದ ದಮನಿತ ವರ್ಗದ ಜನರ ಏಳಿಗೆಗಾಗಿ, ಅವರ ಧ್ವನಿಗೆ ಶಕ್ತಿ ಕೊಡುವ ನಿಟ್ಟಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಅಭಿವೃದ್ಧಿ ನಿಗಮ ಸ್ಥಾಪಿಸುವ ಕುರಿತಂತೆ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವುದಾಗಿ  ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶುಕ್ರವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ವತಿಯಿಂದ ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಜಿಲ್ಲಾ ಬಿಲ್ಲವ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ, ಬ್ರಹ್ಮಶ್ರೀ ನಾರಾಯಣ ಗುರುಗಳ […]