ಉಡುಪಿಯಲ್ಲಿ ಧಾರಾಕಾರ ಮಳೆ: ಚರಂಡಿಗೆ ಬಿದ್ದು ಮಹಿಳೆ ಸಾವು

ಉಡುಪಿ: ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಮಳೆ ಅಬ್ಬರಕ್ಕೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಪುತ್ತೂರು ಗ್ರಾಮದ ಕುಕ್ಕುಂಜೆ ನಿವಾಸಿ ಗುಲಾಬಿ (60) ಎಂಬುವವರು ಆಕಸ್ಮಿಕವಾಗಿ ತುಂಬಿ ಹರಿಯುತ್ತಿದ್ದ ಚರಂಡಿಗೆ ಬಿದ್ದು ಮೃತಪಟ್ಟಿದ್ದಾರೆ. ನಿಟ್ಟೂರು- ಹನುಮಂತನಗರದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿ: ಸತತವಾಗಿ ಗಾಳಿ ಸಹಿತ ಮಳೆಯಾಗುತ್ತಿರುವ ಪರಿಣಾಮ ಜಿಲ್ಲೆಯ ಪ್ರಮುಖ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ಸ್ವರ್ಣ, ಸೌಪರ್ಣಿಕಾ, ಸೀತಾ ನದಿಗಳು […]