ಉಡುಪಿ: ರಾಜಾಂಗಣ ಪಾರ್ಕಿಂಗ್ ರಸ್ತೆಗೆ ತಡೆಗೊಡೆ ನಿರ್ಮಿಸಲು ಆಗ್ರಹ

ಉಡುಪಿ: ಕಲ್ಸಂಕ ರಾಷ್ಟ್ರೀಯ ಹೆದ್ದಾರಿಯಿಂದ ಶ್ರೀಕೃಷ್ಣ ಮಠದ ರಾಜಾಂಗಣ ಯಾತ್ರಿಕರ ವಾಹನ ನಿಲುಗಡೆ ಸ್ಥಳವನ್ನು ಸಂಪರ್ಕಿಸುವ ರಸ್ತೆ ಅಪಾಯಕಾರಿ ಸ್ಥಿತಿಯಲ್ಲಿದೆ. ರಸ್ತೆಯ ಎರಡು ಪಾರ್ಶ್ವಗಳಲ್ಲಿಯೂ ಇಂದ್ರಾಣಿ ತೀರ್ಥ ನದಿ ಹರಿಯುತ್ತಿದ್ದು, ಯಾವುದೇ ತಡೆಗೋಡೆ ಇಲ್ಲ. ಅತಿವೇಗದಲ್ಲಿ ಸಂಚರಿಸುವ ವಾಹನಗಳು ನಿಯಂತ್ರಣ ತಪ್ಪಿ ನದಿಗೆ ಬೀಳುವ ಸಾಧ್ಯತೆ ಹೆಚ್ಚು ಇದೆ. ಹಾಗಾಗಿ ಜಿಲ್ಲಾಡಳಿತ, ನಗರಸಭೆ ಕೂಡಲೇ ಎಚ್ಚೆತ್ತುಕೊಂಡು ರಸ್ತೆಯ ಎರಡು ಬದಿಗಳಲ್ಲಿ ತಡೆಗೋಡೆಗಳನ್ನು ನಿರ್ಮಿಸಬೇಕೆಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿ ಆಗ್ರಹಿಸಿದೆ. ಕಳೆದ ವರ್ಷ ಆಟೋ ಒಂದು ಇಂದ್ರಾಣಿ […]