ಉಡುಪಿಯಲ್ಲಿ ಸಂಭ್ರಮದ ಮಹಾ ಶಿವರಾತ್ರಿ

ಉಡುಪಿ: ಉಡುಪಿ ನಗರದ ರಥಬೀದಿ ಹಾಗೂ ಹೊರ ವಲಯದಲ್ಲಿರುವ ಶಿವ ಮಂದಿರಗಳಲ್ಲಿ ಇಂದು ಸಂಭ್ರಮದ ಮಹಾ ಶಿವರಾತ್ರಿ ಆಚರಣೆ ನಡೆಯಿತು. ಉಡುಪಿ ರಥಬೀದಿಯ ಅನಂತೇಶ್ವರ ಹಾಗೂ ಶ್ರೀ ಚಂದ್ರಮೌಳೀಶ್ವರ, ಬನ್ನಂಜೆಯ ಶ್ರೀ ಮಹಾಲಿಂಗೇಶ್ವರ, ಪರ್ಕಳ ಶ್ರೀ ಮಹಾಲಿಂಗೇಶ್ವರ, ಮಹಾಗಣಪತಿ ಸೇರಿದಂತೆ ವಿವಿಧ ಶಿವ ದೇವಾಲಯಗಳಲ್ಲಿ ಬೆಳಗ್ಗಿನ ಜಾವದಲ್ಲಿಯೇ ಭಕ್ತಾದಿಗಳು ಆಗಮಿಸಿ ಭಗವಾನ್ ಶಿವನ ದರ್ಶನವನ್ನು ಪಡೆದು ಪುನೀತರಾದರು. ಈ ಸಂದರ್ಭದಲ್ಲಿ ದೇವಾಲಯಗಳನ್ನು ಬಗೆಬಗೆಯ ಹೂವುಗಳ ತೋರಣಗಳಿಂದ ಆಕರ್ಷಕವಾಗಿ ಅಲಂಕಾರಗೊಳಿಸಲಾಗಿತ್ತು. ಭಕ್ತಾದಿಗಳು ರುದ್ರಾಭಿಷೇಕ ಸೇರಿದಂತೆ ವೈವಿಧ್ಯಮಯ ಸೇವೆಗಳನ್ನು ಭಗವಂತನಿಗೆ […]
ಇಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಶಿವರಾತ್ರಿ ಸಂಭ್ರಮ.

ಮಂಗಳೂರು: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಶಿವನ ದೇವಸ್ಥಾನಗಳಲ್ಲಿ (ಇಂದು)ಬುಧವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಶ್ರೀ ಕ್ಷೇತ್ರ ಧರ್ಮಸ್ಥಳ ಸೇರಿದಂತೆ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನ, ಶ್ರೀ ಮಂಗಳಾದೇವಿ ಕ್ಷೇತ್ರ, ಶರವು ಶ್ರೀ ಮಹಾಗಣಪತಿ ಕ್ಷೇತ್ರ, ಕಾವೂರು ಶ್ರೀ ಮಹಾಲಿಂಗೇಶ್ವರ ದೇಗುಲ, ಪಾಂಡೇಶ್ವರ ಮಹಾಲಿಂಗೇಶ್ವರ ದೇವಸ್ಥಾ ನ ಸೇರಿದಂತೆ ನಗರದ ವಿವಿಧ ಸನ್ನಿಧಾನಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರಗಲಿದೆ. ಬಂಟ್ವಾಳ ತಾಲೂಕಿನ ಕಾರಿಂಜೇಶ್ವರ ದೇವಸ್ಥಾನದಲ್ಲಿ ಈಗಾಗಲೇ ಜಾತ್ರೆ ಆರಂಭಗೊಂಡಿದ್ದು, ಶಿವರಾತ್ರಿ ಹಿನ್ನೆಲೆ, ಧಾರ್ಮಿಕ ಕಾರ್ಯಕ್ರಮ, […]