ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ಪ್ರಕರಣ: ಸಂತ್ರಸ್ತರಿಗೆ ನ್ಯಾಯ ದೊರಕಿಸಿ ಕೊಡುವವರೆಗೆ ಸುಮ್ಮನಿರುವುದಿಲ್ಲ ಎಂದ ಯಶ್ ಪಾಲ್ ಸುವರ್ಣ

ಉಡುಪಿ: ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆಯಲ್ಲಿ ಓದುತ್ತಿದ್ದ ಮೂವರು ವಿದ್ಯಾರ್ಥಿನಿಯರು ಮಹಿಳಾ ಶೌಚಾಲಯದಲ್ಲಿ ರಹಸ್ಯ ಕ್ಯಾಮರಾ ಮೂಲಕ ಮತ್ತೊಬ್ಬ ವಿದ್ಯಾರ್ಥಿನಿಯನ್ನು ವಿಡೀಯೋ ಚಿತ್ರೀಕರಿಸಿರುವ ಘಟನೆ ಬಗ್ಗೆ ವರದಿಯಾಗಿದ್ದು, ಇದು ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ವರದಿಗಳ ಪ್ರಕಾರ ಮೂವರು ವಿದ್ಯಾರ್ಥಿನಿಯರು ತಮ್ಮ ಸಹವರ್ತಿ ವಿದ್ಯಾರ್ಥಿನಿಗಳು ಶೌಚಾಲಯಗಳನ್ನು ಬಳಸುವುದನ್ನು ರೆಕಾರ್ಡ್ ಮಾಡಲು ಮಹಿಳಾ ವಾಶ್ ರೂಂಗಳಲ್ಲಿ ವೀಡಿಯೋ ಕ್ಯಾಮೆರಾಗಳನ್ನು ಇರಿಸಿದ್ದರು ಎನ್ನಲಾಗಿದ್ದು ಈ ಸಂಬಂಧ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ. ಘಟನೆ ಸಂಬಂಧ ಉಡುಪಿ ಎಸ್ಪಿ ಅಕ್ಷಯ್ ಹಾಕೆ ಸ್ಪಷ್ಟನೆ ನೀಡಿದ್ದು, […]

ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕೆ ಪ್ರತ್ಯೇಕ ಘಟಕ ರಚನೆ: ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

ಉಡುಪಿ: ಜಿಲ್ಲೆಯಲ್ಲಿ ಗಣನೀಯ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಯುವ ಜನತೆ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಿರುವ ಕಳವಳಕಾರಿ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕೆ ಪ್ರತ್ಯೇಕ ಘಟಕವನ್ನು ಆರಂಭಿಸುವಂತೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೇ ಅಕ್ಷಯ್ ಮಚ್ಚಿಂದ್ರ ಅವರನ್ನು ಭೇಟಿ ಮಾಡಿ ಆಗ್ರಹಿಸಿದರು. ಈ ಬಗ್ಗೆ ಈಗಾಗಲೇ ಗೃಹ ಸಚಿವ ಜಿ. ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮನವಿ ಸಲ್ಲಿಸಿದ್ದು […]

ಕಳ್ಳತನವಾದ ಅಥವಾ ಕಳೆದುಹೋದ ಮೊಬೈಲ್ ಅನ್ನು ಸುಲಭವಾಗಿ ಬ್ಲಾಕ್ ಮಾಡುವ ವಿಧಾನ ತಿಳಿಯಿರಿ

ಅಕಸ್ಮಾತ್ ಆಗಿ ಮೊಬೈಲ್ ಕಳೆದು ಹೋದಲ್ಲಿ ಅಥವಾ ಕಳ್ಳತನವಾದಲ್ಲಿ ಇತರರು ಅದನ್ನು ಬಳಸದಂತೆ ಸುಲಭವಾಗಿ ಅದನ್ನು ಬ್ಲಾಕ್ ಮಾಡಬಹುದು. ಬ್ಲಾಕ್ ಮಾಡುವ ವಿಧಾನ: 1.KSP ಮೊಬೈಲ್ ಅಪ್ಲಿಕೇಶನ್‌ಗೆ ಹೋಗಿ ಮತ್ತು ಇ-ಲಾಸ್ಟ್ ದೂರನ್ನು ನೋಂದಾಯಿಸಿ ಮತ್ತು ಇ-ಅಕ್ನಾಲೆಡ್ಜ್‌ಮೆಂಟ್ ಪಡೆಯಿರಿ. 2. ಒಟಿಪಿ ಪಡೆಯಲು ಸಂಬಂಧಿತ ಸೇವಾ ಪೂರೈಕೆದಾರರಿಂದ ನಕಲಿ ಸಿಮ್ ತೆಗೆದುಕೊಳ್ಳಿ ಮತ್ತು ಸಿಮ್ ಅನ್ನು ಸಕ್ರಿಯಗೊಳಿಸಿ. 3.CEIR na https://ceir.gov.in ವೆಬ್‌ಸೈಟ್‌ಗೆ ಲಾಗಿನ್ ಆಗಿ. 4. ಸ್ಟೋಲನ್/ಲಾಸ್ಟ್ ಮೊಬೈಲ್ ಮೇಲೆ ಕ್ಲಿಕ್ ಮಾಡಿ. 5.ಮೊಬೈಲ್ ಸಂಖ್ಯೆ, […]

ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ: ನಾಲ್ವರ ಬಂಧನ; ಮುಖ್ಯ ಆರೋಪಿಗಾಗಿ ಶೋಧ

ಉಡುಪಿ: ಫೆ. 5 ರಂದು ಪಾಂಗಾಳದಲ್ಲಿ ನಡೆದ ಶರತ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೇ ಅಕ್ಷಯ್ ಮಚ್ಚೀಂದ್ರ ತಿಳಿಸಿದ್ದಾರೆ. ಪ್ರಕರಣದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಫೆಬ್ರವರಿ 5 ರಂದು ಮಾರಕ ಶಸ್ತ್ರಾಸ್ತ್ರಗಳನ್ನು ಬಳಸಿ ನಾಲ್ವರು ವ್ಯಕ್ತಿಗಳು ಶರತ್ ಶೆಟ್ಟಿಯನ್ನು ಕೊಲೆ ಮಾಡಿದ್ದರು. ಆದರೆ ಈ ಘಟನೆಗೆ ಪ್ರತ್ಯಕ್ಷ ಸಾಕ್ಷಿಗಳಿರಲಿಲ್ಲ. ಆದರೆ ನಮ್ಮ ತಂಡಗಳ ಪರಿಣತಿಯಿಂದ ನಾವು ಈ ಪ್ರಕರಣವನ್ನು ಭೇದಿಸಿದ್ದೇವೆ ಮತ್ತು ನಾಲ್ವರನ್ನು ಬಂಧಿಸಿ, […]

ಜ.16 ರಿಂದ 22 ರವರೆಗೆ ನಾಗರೀಕ ಬಂದೂಕು ತರಬೇತಿ ಕಾರ್ಯಕ್ರಮ: ಆಸಕ್ತರು ಅರ್ಜಿ ಸಲ್ಲಿಸಿ

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ನಾಗರೀಕ ಬಂದೂಕು ತರಬೇತಿ ಕಾರ್ಯಕ್ರಮವನ್ನು ಜ.16 ರಿಂದ 22 ರವರೆಗೆ ಉಡುಪಿ ಜಿಲ್ಲಾ ಪೊಲೀಸ್ ಕವಾಯತು ಮೈದಾನ, ಡಿಎಆರ್ ಉಡುಪಿ ಇಲ್ಲಿ ಹಮ್ಮಿಕೊಳ್ಳಲಾಗಿದ್ದು, ಉಡುಪಿ ಜಿಲ್ಲೆಗೆ ಸಂಬಂಧಿಸಿದ ಆಸಕ್ತ ನಾಗರೀಕರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಗಳು ಉಡುಪಿ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಮತ್ತು ಡಿಎಆರ್ ಪೊಲೀಸ್ ಕೇಂದ್ರ ಸ್ಥಾನದಲ್ಲಿ ಲಭ್ಯವಿದ್ದು, ಆಸಕ್ತರು ಆಯಾಯ ಕೇಂದ್ರ ಸ್ಥಾನದಿಂದ ಅರ್ಜಿ ಪಡೆದುಕೊಂದು ಭರ್ತಿ ಮಾಡಿ ಸಲ್ಲಿಸಬಹುದು ಎಂದು ಜಿಲ್ಲಾ ಪೊಲೀಸ್ […]