ಕರ್ತವ್ಯದಿಂದ ನಾಯಕನ ವರ್ಚಸ್ಸು ಹೆಚ್ಚಳ – ಕಿರಣ್.ಎಸ್.ಗಂಗಣ್ಣನವರ್

ಉಡುಪಿ: ಉಡುಪಿ ವಕೀಲರ ಸಂಘದ 125 ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಎಮ್‌ಜಿ‌ಎಮ್ ಮೈದಾನದಲ್ಲಿ ಎರಡು ದಿನ ನಡೆದ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರೀಡಾಕೂಟ ಮುಕ್ತಾಯಗೊಂಡಿತು. ಸಮಾರೋಪದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಕಿರಣ್.ಎಸ್.ಗಂಗಣ್ಣನವರ್ ಮಾತನಾಡಿ, ಉಡುಪಿ ವಕೀಲರ ಸಂಘವು ನಿತ್ಯದ ಕಾರ್ಯಗಳೊಂದಿಗೆ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ವಕೀಲರ ಬೇಡಿಕೆಗಳಿಗೆ ಕೊನೆ ಇರುವುದಿಲ್ಲ. ಕ್ರೀಡೆ ಹಾಗು ನ್ಯಾಯಾಂಗದಲ್ಲಿ ತುಡಿತ ಇದ್ದಾಗ, ಹೊಸ ವಿಚಾರಗಳು ಬರುತ್ತವೆ. ಅಂತಹ ಮನಸ್ಸುಗಳಿಂದ ಇಂತಹ ಬದಲಾವಣೆಗಳನ್ನು ತರಲು […]