ಉಡುಪಿ ಶ್ರೀ ಕೃಷ್ಣಮಠಕ್ಕೆ ಖ್ಯಾತ ಕ್ರಿಕೆಟ್ ಆಟಗಾರ ವಿವಿಎಸ್ ಲಕ್ಷ್ಮಣ್ ಭೇಟಿ

ಉಡುಪಿ: ಖ್ಯಾತ ಕ್ರಿಕೆಟ್ ಆಟಗಾರ ವಿವಿಎಸ್ ಲಕ್ಷ್ಮಣ್ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಶ್ರೀ ಕೃಷ್ಣ ದರ್ಶನ ಕೈಗೊಂಡ ಅವರು, ಪರ್ಯಾಯ ಪುತ್ತಿಗೆ ಮಠದವರು ನಡೆಸುವ ಕೋಟಿಗೀತಾ ಲೇಖನ ಯಜ್ಞದ ಬಗ್ಗೆ ವಿಶೇಷ ಆಸಕ್ತಿಯಿಂದ ಮಾಹಿತಿ ಪಡೆದುಕೊಂಡರು. ತನ್ನ ಅಜ್ಜನವರು ತಮಗೆ ಕಲಿಸಿಕೊಟ್ಟ ಭಗವದ್ಗೀತೆಯ ವಿಚಾರಗಳನ್ನು ಶ್ಲೋಕಗಳನ್ನು ಸ್ವಾಮೀಜಿಯ ಮುಂದೆ ಹೇಳಿದರು. ಪರ್ಯಾಯ ಮಠದ ವತಿಯಿಂದ ಈ ವೇಳೆ ವಿವಿಎಸ್ ಲಕ್ಷ್ಮಣ್ ಮತ್ತು ಕುಟುಂಬದವರನ್ನು ಸನ್ಮಾನಿಸಲಾಯಿತು. ಉಡುಪಿ ಶ್ರೀ ಕೃಷ್ಣ ಮಠದಿಂದ ಕೊಲ್ಲೂರು ಕ್ಷೇತ್ರ […]