ಉಡುಪಿ: ಎರಡು ಅಂಗಡಿಗಳಲ್ಲಿ ಬೆಂಕಿ ಅವಘಡ; ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿ

ಉಡುಪಿ: ಇಲ್ಲಿನ ಸರ್ವಿಸ್ ಬಸ್ ನಿಲ್ದಾಣ ಸಮೀಪದ ಎರಡು ಅಂಗಡಿಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟುಹೋಗಿವೆ. ಬೆಂಕಿ ಅನಾಹುತದಿಂದ ಎರಡು ಅಂಗಡಿಗಳು ಕೂಡ ಭಾಗಶಃ ಸುಟ್ಟು ಹೋಗಿದ್ದು, ಎರಡು ಲಕ್ಷಕ್ಕೂ ಹೆಚ್ಚಿನ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಕರೆಂಟ್ ಶಾರ್ಟ್ ಸರ್ಕಿಟ್ ನಿಂದ ಈ ದುರ್ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ನಗರಸಭಾ ಸದಸ್ಯ ಟಿ.ಜಿ. ಹೆಗಡೆ, ನಗರ ಸಭೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.