ಯುವ ಜನತೆ ರಕ್ತದಾನ ಮಾಡಲು ಮುಂದಾಗಬೇಕು: ಬಸ್ರೂರು ರಾಜೀವ್ ಶೆಟ್ಟಿ

ಉಡುಪಿ, ಜೂನ್ 14: ರಕ್ತದಾನದ ಮಾಡುವ ಮೂಲಕ ಯಾವುದೇ ಖರ್ಚು ಇಲ್ಲದೇ ಜನರ ಪ್ರಾಣವನ್ನು ಉಳಿಸಬಹುದು. ಆದ್ದರಿಂದ ಯುವ ಜನತೆ ರಕ್ತದಾನ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಮುಂದಾಗಬೇಕು ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಮ್ಯಾನೆಜಿಂಗ್ ಕಮಿಟಿ ಮೆಂಬರ್ ಬಸ್ರೂರು ರಾಜೀವ್ ಶೆಟ್ಟಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಶುಕ್ರವಾರ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಘಟಕದ ವತಿಯಿಂದಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಂಗಣದಲ್ಲಿ ನಡೆದ ರಕ್ತದಾನಿಗಳ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ತಂತ್ರಜ್ಞಾನ ಎಷ್ಟೇ ಮುಂದುವರಿದರೂ […]
ಕರಾವಳಿಗೆ ವರುಣನ ಕೃಪೆ, ತುಂಬಿ ಹರಿಯುತ್ತಿರುವ ನೇತ್ರಾವತಿ… ಕಡಲ್ಕೊರೆತದಿಂದ ತತ್ತರಿಸುತ್ತಿರುವ ಕರಾವಳಿ

ಮಂಗಳೂರು: ನೀರಿಲ್ಲದೇ ಕಂಗೆಟ್ಟಿದ್ದ ಕರಾವಳಿಯಲ್ಲಿ ಕಡೆಗೂ ವರುಣ ದೇವ ಕೃಪೆ ತೋರಿದ್ದಾನೆ. ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದೆ. ನೀರಿಲ್ಲದೇ ಒಣಗಿದ್ದ ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. ಆದರೆ ಕೆಲವೆಡೆ ಮಳೆಯಿಂದಾಗಿ ಗುಡ್ಡ ಕುಸಿದಂತ ಅವಾಂತರ ಸಂಭವಿಸಿದೆ. ಸಮುದ್ರ ಪ್ರಕ್ಷುಬ್ಧಗೊಂಡು ಕಡಲ್ಕೊರೆತ ಉಂಟಾಗಿ ಕಡಲ ತೀರದ ಮನೆಗಳು ಅಪಾಯದ ಅಂಚಿನಲ್ಲಿವೆ. ಈ ಅತೀಹೆಚ್ಚು ಮಳೆ ಬೀಳುವ ಕರಾವಳಿಯಲ್ಲಿ ಈ ಬಾರಿ ನೀರಿಗಾಗಿ ಆಹಾಕಾರ ಶುರುವಾಗಿತ್ತು. ಶಾಲಾ ಕಾಲೇಜುಗಳಲ್ಲಿ ನೀರಿಲ್ಲದೇ ವಿದ್ಯಾರ್ಥಿಗಳ […]
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: 84 ಮಂದಿ ಗೈರು

ಉಡುಪಿ, ಜೂನ್ 11: ಜಿಲ್ಲೆಯಲ್ಲಿ ಮಂಗಳವಾರ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ಒಟ್ಟು 639 ಮಂದಿ ಪರೀಕ್ಷೆ ಬರೆದಿದ್ದಾರೆ. ಸಮಾಜಶಾಸ್ತ್ರ ಪರೀಕ್ಷೆಗೆ 61 ಮಂದಿ ನೊಂದಾಯಿಸಿದ್ದು, 50 ಮಂದಿ ಪರೀಕ್ಷೆ ಬರೆದಿದ್ದು, 11 ಮಂದಿ ಗೈರಾಗಿದ್ದಾರೆ. ಲೆಕ್ಕಶಾಸ್ತ್ರ (ಎನ್ಎಸ್) ಪರೀಕ್ಷೆಗೆ 246 ಮಂದಿ ಹೆಸರು ನೊಂದಾಯಿಸಿದ್ದು, 217 ಮಂದಿ ಪರೀಕ್ಷೆ ಬರೆದಿದ್ದು, 29 ಮಂದಿ ಗೈರಾಗಿದ್ದಾರೆ. ಲೆಕ್ಕಶಾಸ್ತ್ರ (ಓಎಸ್) ಪರೀಕ್ಷೆಗೆ 96 ಮಂದಿ ಹೆಸರು ನೊಂದಾಯಿಸಿದ್ದು, 77 ಮಂದಿ ಪರೀಕ್ಷೆಗೆ ಹಾಜರಾಗಿದ್ದು, 19 ಮಂದಿ ಗೈರಾಗಿದ್ದಾರೆ. […]
ಉಡುಪಿಯಲ್ಲಿ ಮಳೆಗಾಗಿ ಕಪ್ಪೆಗಳಿಗೆ ಮದ್ವೆ..! ಮಳೆ ಬರಲು ಹೀಗೊಂದು ವಿನೂತನ ಪ್ರಾರ್ಥನೆ

ಉಡುಪಿ: ದೇಶದಾದ್ಯಂತ ಮಳೆಗಾಗಿ ಒಂದಿಲ್ಲೊಂದು ರೀತಿಯಲ್ಲಿ ಪ್ರಾರ್ಥನೆ ನಡೆಯುತ್ತಿದೆ. ಆದರೆ ಉಡುಪಿಯ ಕಿದಿಯೂರ್ ಹೋಟೆಲಿನ ಸಭಾಂಗಣದಲ್ಲಿ ಶನಿವಾರ ವಿಶೇಷ ಹಾಗೂ ವಿಭಿನ್ನವಾಗಿ ಕಪ್ಪೆ ಗಳಿಗೆ ಮದ್ವೆ ಮಾಡುವ ಮೂಲಕ ಮಳೆಗಾಗಿ ಪ್ರಾರ್ಥನೆ ಮಾಡಲಾಯಿತು. ಹಿಂದೂ ಸಂಪ್ರದಾಯದಂತೆ ಕಾಲು ಉಂಗುರ ತೊಡಿಸಿ, ಮಾಂಗಲ್ಯವನ್ನು ಕಟ್ಟಿ ಕಪ್ಪೆಗಳ ಮದುವೆಯನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು. ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ಹಾಗೂ ಪಂಚರತ್ನಾ ಸೇವಾ ಟ್ರಸ್ಟ್ ವತಿಯಿಂದ ಮಂಡೂಕ ಕಲ್ಯಾಣೋತ್ಸವ ಹಮ್ಮಿ ಕೊಳ್ಳಲಾಯಿತು. ಉಡುಪಿಯ ಕೊಳಲಗಿರಿ ಸಮೀಪದ ಕೀಳಿಂಜೆ ಎಂಬಲ್ಲಿ ಪತ್ತೆಯಾದ […]
ಗೋಹತ್ಯೆ ನಿಷೇಧಿಸಲು ಮೋದಿ ಸರಕಾರ ಸೂಕ್ತ ಕಾನೂನು ರೂಪಿಸಬೇಕು: ಪೇಜಾವರ ಶ್ರೀ

ಉಡುಪಿ: ಗೋಹತ್ಯೆ, ಗೋಮಾಂಸದ ಭಕ್ಷಣೆ ಹೇಯ ಕೃತ್ಯ. ಮಾನವೀಯ ನೆಲೆಯಲ್ಲಿ ಗೋವಿನ ರಕ್ಷಣೆಯಾಗಬೇಕು. ಕೇಂದ್ರದಲ್ಲಿ ಬಿಜೆಪಿ ಬಹುಮತದಿಂದ ಆಯ್ಕೆಯಾಗಿದೆ. ಹೀಗಾಗಿ ನರೇಂದ್ರ ಮೋದಿ ನೇತೃತ್ವದ ಸರಕಾರ ಗೋವಿನ ರಕ್ಷಣೆಗೆ ಸೂಕ್ತ ಕಾನೂನು ರೂಪಿಸಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಹೇಳಿದ್ದಾರೆ. ಉಡುಪಿ ಶ್ರೀಕೃಷ್ಣ ಮಠದಲ್ಲಿ ಭಾನುವಾರ ದೇಸಿ ಗೋ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ದೇಶದಲ್ಲಿ ಪಶು ಸಂಪತ್ತು ಬೆಳೆಯಬೇಕು. ಅಮೃತ ಕೊಡುವ ಗೋವುಗಳ ಬಗ್ಗೆ ಕಾಳಜಿ ವಹಿಸಬೇಕಿದೆ. ಗೋವುಗಳನ್ನು ಉಳಿಸುವ ಕಾಳಜಿ ಯಾರು […]