ಧ್ವಜ ಸಂಹಿತೆಯ ಅನುಸಾರ ಮಸೀದಿ-ಮದ್ರಸಾಗಳಲ್ಲಿ ಧ್ವಜ ಹಾರಿಸಿ: ಜಿಲ್ಲಾ ವಕ್ಫ್ ಸಲಹಾ ಸಮಿತಿ ಕರೆ

ಉಡುಪಿ: ಜಿಲ್ಲಾ ಮಟ್ಟದ ಆಜಾದೀ ಕಾ ಅಮೃತ್ ಮಹೋತ್ಸವದ ಅಂಗವಾಗಿ ಜಿಲ್ಲೆಯಲ್ಲಿರುವ ಎಲ್ಲಾ ಮಸೀದಿ ಮತ್ತು ಮದ್ರಸಾಗಳಲ್ಲಿ ಧ್ವಜ ಸಂಹಿತೆಯ ಅನುಸಾರವೆ ರಾಷ್ಟ್ರ ಧ್ವಜವನ್ನು ಹಾರಿಸುವಂತೆ ಹಾಗೂ ರಾಷ್ಟ್ರಧ್ವಜಕ್ಕೆ ಅಗೌರವ ಉಂಟಾಗದಂತೆ ಕ್ರಮವಹಿಸುವಂತೆ ಎಲ್ಲಾ ವಕ್ಫ್ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಆಡಳಿತಾಧಿಕಾರಿಗಳಿಗೆ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಸಿ.ಹೆಚ್. ಅಬ್ದುಲ್ ಮುತ್ತಾಲಿ ತಿಳಿಸಿರುತ್ತಾರೆ.
ದೈನಂದಿನ ಬದುಕಿನಲ್ಲಿ ಬಸವಣ್ಣನವರ ವಚನ ಸಂದೇಶಗಳನ್ನು ಎಲ್ಲರೂ ಪಾಲಿಸಬೇಕು : ಜಿಲ್ಲಾಧಿಕಾರಿ

ಉಡುಪಿ: ಸಮಾಜದಲ್ಲಿನ ಅಸಮಾನತೆ ,ಮೂಡನಂಬಿಕೆಗಳನ್ನು ತೊಡೆದು ಹಾಕುವ ನಿಟ್ಟಿನಲ್ಲಿ, ಜನಸಾಮಾನ್ಯರಿಗೂ ಅರ್ಥವಾಗುವಂತೆ, ಸಮಾಜ ಸುಧಾರಕ, ಮಹಾನ್ ಮಾನವತಾವಾದಿ ಬಸವಣ್ಣ ತಮ್ಮ ವಚನಗಳ ಮೂಲಕ ನೀಡಿದ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ , ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಲೋಕದ ಡೊಂಕ ನೀವೇಕೆ […]
ಹಿಂ.ಜಾ.ವೇ ಮತ್ತು ಶ್ರೀ ಶನೇಶ್ವರ ಸೇವಾ ಸಮಿತಿ ವತಿಯಿಂದ ಧಾರ್ಮಿಕ ಕಾರ್ಯಕ್ರಮ

ಹಿರಿಯಡ್ಕ: ಹಿಂದು ಜಾಗರಣ ವೇದಿಕೆ ಹಿರಿಯಡ್ಕ ವಲಯ ಮತ್ತು ಶ್ರೀ ಶನೇಶ್ವರ ಸೇವಾ ಸಮಿತಿ ಹಿರಿಯಡ್ಕ ಇವರ ವತಿಯಿಂದ ಹಿಂದೂ ಧಾರ್ಮಿಕ ಕಾರ್ಯಕ್ರಮ ಏಪ್ರಿಲ್ 30 ರಂದು ಶನಿವಾರ ಹಿರಿಯಡ್ಕ ಶ್ರೀ ಕ್ಷೇತ್ರ ವೀರಭದ್ರ ದೇವಸ್ಥಾನದ ಮುಂಬಾಗದಲ್ಲಿ ನಡೆಯಲಿದೆ. ಶ್ರೀ ಶ್ರೀ ಶ್ರೀ ಈಶಪ್ರೀಯ ತೀರ್ಥ ಸ್ವಾಮೀಜಿ ಅದಮಾರು ಮಠ, ಇವರ ದಿವ್ಯ ಉಪಸ್ಥಿತಿಯಲ್ಲಿ ನವಗ್ರಹ ಪೂರ್ವಕ ಶ್ರೀ ಶನಿಶಾಂತಿ ಮಹಾಯಾಗ ನಡೆಯಲಿದೆ. ಬೆಳಗ್ಗೆ 7.30 ಕ್ಕೆ ಗಣಹೋಮ, 8.00 ಕ್ಕೆ ಶನೇಶ್ವರ ಯಾಗ ಪ್ರಾರಂಭ, 11.00 ಗಂಟೆಗೆ […]
ಮೇ 6 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಂಕರಾಚಾರ್ಯ ಜಯಂತಿ

ಉಡುಪಿ: ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆಯು ಮೇ 6 ರಂದು ಬೆಳಗ್ಗೆ 10 ಗಂಟೆಗೆ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ
ಉಡುಪಿ: ಕರ್ತವ್ಯ ನಿರತ ಮುಖ್ಯ ಪೇದೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಉಡುಪಿ: ಕರ್ತವ್ಯ ನಿರತ ಮುಖ್ಯ ಪೇದೆಯೊಬ್ಬರು ತನ್ನ ಬಳಿಯಿದ್ದ ಸೇವಾ ಆಯುಧದಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆದಿ ಉಡುಪಿಯಲ್ಲಿ ನಡೆದಿದೆ. ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಮುಖ್ಯ ಪೇದೆ ರಾಜೇಶ್ ಕುಂದರ್ ತನ್ನ ಸರ್ವೀಸ್ ರೈಫಲ್ನಿಂದ ಗುಂಡು ಹಾರಿಸಿಕೊಂಡ ವ್ಯಕ್ತಿ. ಇವರು ಆದಿ ಉಡುಪಿಯ ಶಾಲೆಯೊಂದರ ಎಸ್ಎಸ್ಎಲ್ಸಿ ಉತ್ತರ ಪತ್ರಿಕೆಗಳ ಕೊಠಡಿಯಲ್ಲಿ ಭದ್ರತಾ ಕರ್ತವ್ಯದಲ್ಲಿದ್ದರು. ಅವಳಿ-ಜವಳಿ ಮಕ್ಕಳ ತಂದೆಯಾಗಿರುವ ರಾಜೇಶ್ ಕುಂದರ್, ರಾತ್ರಿ ವೇಳೆಯಲ್ಲಿ ಹಣೆಯ ಭಾಗಕ್ಕೆ ಗುಂಡಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು […]