ಮೇ 6 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಂಕರಾಚಾರ್ಯ ಜಯಂತಿ

ಉಡುಪಿ: ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆಯು ಮೇ 6 ರಂದು ಬೆಳಗ್ಗೆ 10 ಗಂಟೆಗೆ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ

ಉಡುಪಿ: ಕರ್ತವ್ಯ ನಿರತ ಮುಖ್ಯ ಪೇದೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಉಡುಪಿ: ಕರ್ತವ್ಯ ನಿರತ ಮುಖ್ಯ ಪೇದೆಯೊಬ್ಬರು ತನ್ನ ಬಳಿಯಿದ್ದ ಸೇವಾ ಆಯುಧದಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆದಿ ಉಡುಪಿಯಲ್ಲಿ ನಡೆದಿದೆ. ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಮುಖ್ಯ ಪೇದೆ ರಾಜೇಶ್ ಕುಂದರ್ ತನ್ನ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡ ವ್ಯಕ್ತಿ. ಇವರು ಆದಿ ಉಡುಪಿಯ ಶಾಲೆಯೊಂದರ ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಕೊಠಡಿಯಲ್ಲಿ ಭದ್ರತಾ ಕರ್ತವ್ಯದಲ್ಲಿದ್ದರು. ಅವಳಿ-ಜವಳಿ ಮಕ್ಕಳ ತಂದೆಯಾಗಿರುವ ರಾಜೇಶ್ ಕುಂದರ್, ರಾತ್ರಿ ವೇಳೆಯಲ್ಲಿ ಹಣೆಯ ಭಾಗಕ್ಕೆ ಗುಂಡಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು […]

ಮೇ 20 ರಂದು ಅಲೆವೂರು ಗ್ರಾಮ ಪಂಚಾಯತ್ ಖಾಲಿ ಸ್ಥಾನಕ್ಕೆ ಚುನಾವಣೆ

ಉಡುಪಿ: ವಿವಿಧ ಕಾರಣಗಳಿಂದ ತೆರವಾಗಿರುವ ಉಡುಪಿಯ ಅಲೆವೂರು ಗ್ರಾಮ ಪಂಚಾಯತ್ ನ 1 ಸ್ಥಾನಕ್ಕೆ ರಾಜ್ಯ ಚುನಾವಣಾ ಆಯೋಗವು ಚುನಾವಣೆ ವೇಳಾಪಟ್ಟಿಯನ್ನು ಘೋಷಿಸಿದ್ದು, ಮೇ 5 ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರಗಳನ್ನು ಸಲ್ಲಿಸಲು ಮೇ 10 ಕೊನೆಯ ದಿನವಾಗಿದ್ದು, ಮೇ 11 ರಂದು ನಾಮಪತ್ರಗಳ ಪರಿಶೀಲನೆ, ಮೇ 13 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಮೇ 20 ರಂದು ಬೆಳಗ್ಗೆ 7 ರಿಂದ ಸಂಜೆ 5 ರವರೆಗೆ ಚುನಾವಣೆ ನಡೆಯಲಿದೆ. ಮೇ 22 ರಂದು […]

ಮಕ್ಕಳ ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರ ಉತ್ತಮ ವೇದಿಕೆ: ಶರ್ಮಿಳಾ ಎಸ್

ಉಡುಪಿ: ಬೇಸಿಗೆ ಶಿಬಿರಗಳು ಮಕ್ಕಳ ಪ್ರತಿಭೆಯ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದ್ದು, ಅನುಭವಿ ತರಬೇತುದಾರರಿಂದ ಉತ್ತಮ ತರಬೇತಿ ದೊರೆಯಲಿದೆ ಎಂದು ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಸದಸ್ಯ ಕಾರ್ಯದರ್ಶಿ ಶರ್ಮಿಳಾ. ಎಸ್ ಹೇಳಿದರು. ಅವರು ಇಂದು ಬಾಲಭವನ ಸೊಸೈಟಿ ಬೆಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಉಡುಪಿ ಜಿಲ್ಲೆ ಇದರ ಸಹಯೋಗದಲ್ಲಿ ನಡೆದ ಬೇಸಿಗೆ ಶಿಬಿರದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಬೇಸಿಗೆ ಶಿಬಿರವು ಮಕ್ಕಳ ಕಲಿಕಾ ಬೆಳವಣಿಗೆಗೆ […]

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯ: ಕೂರ್ಮಾರಾವ್

ಉಡುಪಿ: ಪ್ರಸ್ತುತ ದೆಹಲಿ, ಹರಿಯಾಣ ಹಾಗೂ ಪಕ್ಕದ ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯು ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿಯೂ ಸಹ ದೈನಂದಿನ ಕೋವಿಡ್-19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರಕರಣಗಳ ಸಂಖ್ಯೆಗಳನ್ನು ಕಡಿಮೆಗೊಳಿಸುವುದು ಮತ್ತು ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಅನ್ನು ಧರಿಸುವುದು ಅವಶ್ಯಕವೆಂದು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸೂಚಿಸಿದೆ. ಆದ್ದರಿಂದ ಜಿಲ್ಲೆಯಲ್ಲಿನ ಸಾರ್ವಜನಿಕ, ಕಾರ್ಯನಿರ್ವಹಿಸುವ ಸ್ಥಳಗಳು ಹಾಗೂ ಸಂಚಾರದ ಸಮಯದಲ್ಲಿ ಮಾಸ್ಕ್ ಗಳನ್ನು ಕಡ್ಡಾಯವಾಗಿ ಧರಿಸಬೇಕು. ಜೊತೆಗೆ ಸಾರ್ವಜನಿಕ […]