ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ವಿತರಣೆ

ಉಡುಪಿ: ಕೇಂದ್ರ ಸರ್ಕಾರದ ‘ಆಜಾದಿ ಕಾ ಅಮೃತ ಮಹೋತ್ಸವ್’ ಕಾರ್ಯಕ್ರಮದ ಆಚರಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಜೊತೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಸಾರ್ವಜನಿಕರಿಗೆ ಉಚಿತ ಪಡಿತರ ವಿತರಿಸುವ ಯೋಜನೆ ಜಾರಿಗೊಳಿಸಿರುತ್ತದೆ. ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಎನ್.ಎಫ್.ಎಸ್.ಎ ಹಾಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಬಿಡುಗಡೆಯಾದ ಆಹಾರ ಧಾನ್ಯವನ್ನು ಏಪ್ರಿಲ್ ನಿಂದ ಅಂತ್ಯೋದಯ (ಎ.ಎ.ವೈ) ಚೀಟಿದಾರರಿಗೆ ಎನ್.ಎಫ್.ಎಸ್.ಎ ಯೋಜನೆಯಡಿ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿ ಹಾಗೂ […]

ಪ್ರಾಕೃತಿಕ ವಿಕೋಪಗಳ ಮುನ್ಸೂಚನೆ ನೀಡಿ ಹೆಚ್ಚಿನ ಹಾನಿ ತಪ್ಪಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

ಉಡುಪಿ: ಮಳೆಯಿಂದಾಗುವ ಅತಿವೃಷ್ಟಿ ಸೇರಿದಂತೆ ನೈಸರ್ಗಿಕ ಪ್ರಾಕೃತಿಕ ವಿಕೋಪಗಳು ಉಂಟಾಗುವ ಮುನ್ಸೂಚನೆಗಳನ್ನು ಜನರಿಗೆ ಮುಂಚಿತವಾಗಿಯೇ ತಿಳಿಸಿ ಅವುಗಳನ್ನು ಎದುರಿಸುವ ಬಗ್ಗೆ ಅರಿವು ಮೂಡಿಸಿ, ಹಾನಿ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಸೋಮವಾರ ಜಿಲ್ಲಾಧಿಕಾರಿ ಸಂಕೀರ್ಣದ ವೀಡಿಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಾಗುವ ಯಾವುದೇ ರೀತಿಯ ನೈಸರ್ಗಿಕ ಅವಘಡಗಳು ಮತ್ತು ಅವುಗಳ ಅಡ್ಡ ಪರಿಣಾಮಗಳಿಗೆ ಸ್ಥಳೀಯ ಸಾರ್ವಜನಿಕರು […]

ಅಧ್ಯಯನ ಕೇಂದ್ರವಾಗಲಿರುವ ಸೈಂಟ್ ಮೇರೀಸ್ ದ್ವೀಪ

ಉಡುಪಿ: ಮಲ್ಪೆಯ ಸೈಂಟ್ ಮೇರೀಸ್ ದ್ವೀಪವನ್ನು ಅಧ್ಯಯನ ಕೇಂದ್ರವಾಗಿ ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಚಿಂತನೆ ನಡೆಸಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ. ಸೈಂಟ್ ಮೇರೀಸ್ ದ್ವೀಪವನ್ನು ಕೇವಲ ಪ್ರವಾಸಿ ತಾಣವೆಂದು ಬಗೆಯದೆ, ಎಲ್ಲರಿಗೂ ಪ್ರಯೋಜನವಾಗುವ ನಿಟ್ಟಿನಲ್ಲಿ ಅದನ್ನು ಅಧ್ಯಯನ ಕೇಂದ್ರವಾಗಿ ಮಾರ್ಪಡಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ಅವರು ಹೇಳಿದರು. ದ್ವೀಪದಲ್ಲಿ ನಡೆಯುತ್ತಿರುವ ಅವಘಡಗಳನ್ನು ತಪ್ಪಿಸಲು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ ಅಪರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಉಪ ಸಮಿತಿಯೊಂದನ್ನು ರಚಿಸಿದ್ದು, ಸಮಿತಿಯು ಸ್ಥಳ ಪರಿಶೀಲನೆ […]

ಲಯನ್ಸ್ ಕ್ಲಬ್ ಹಿರಿಯಡ್ಕ ಪ್ರಾಂತೀಯ ಅಧ್ಯಕ್ಷ, ಮೊದಲ ಮತ್ತು ದ್ವಿತೀಯ ಉಪ ಗವರ್ನರ್ ಗಳ ಭೇಟಿ

  ಉಡುಪಿ: ಆದಿತ್ಯವಾರದಂದು ಲಯನ್ಸ್ ಕ್ಲಬ್ ಹಿರಿಯಡ್ಕದಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷ ಶಂಕರ್ ಶೆಟ್ಟಿ ಮತ್ತು ಮೊದಲ ಉಪ ಗವರ್ನರ್ ಎಮ್ ಕೆ ಭಟ್ ಮತ್ತು ದ್ವಿತೀಯ ಉಪ ಗವರ್ನರ್ ಡಾ. ನೇರಿ ಕರ್ನಿಲೀಯೋ ಭೇಟಿ ನೀಡಿ ಕ್ಲಬ್ ನ ಕಾರ್ಯ ಚಟುವಟಿಕೆಗಳ ಬಗ್ಗೆ ಹರ್ಷ ವ್ಯಕ್ತ ಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಲಬ್ ನ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಡ್ದಮ್ ವಹಿಸಿದ್ದರು. ಹಿರಿಯಡ್ಕದ ನಾರಾಯಣಗುರು ಸಭಾಂಗಣದಲ್ಲಿ ಕಾರ್ಯಕ್ರಮವು ಸರಳ ರೀತಿಯಲ್ಲಿ ಜರುಗಿತು. ಸದಸ್ಯರಾದ ವಸಂತ್ ಶೆಟ್ಟಿ ಪ್ರಸಕ್ತ […]

ಮಂಜುನಾಥ ಭಂಡಾರಿ ಹೇಳಿಕೆ ದೆವ್ವದ ಬಾಯಲ್ಲಿ ಭಗವದ್ಗೀತೆ : ಕುಯಿಲಾಡಿ ಸುರೇಶ್ ನಾಯಕ್

  ಉಡುಪಿ: ಸ್ವಾತಂತ್ರ್ಯಾ ನಂತರ ಸುದೀರ್ಘ ಅವಧಿಗೆ ದುರಾಡಳಿತ ನಡೆಸಿರುವ ಕಾಂಗ್ರೆಸ್ ಪಕ್ಷವು ಬ್ರಹ್ಮಾಂಡ ಭ್ರಷ್ಟಾಚಾರಗೈದಿರುವುದನ್ನು ಮರೆತು ಕಾಂಗ್ರೆಸ್ ಮುಖಂಡ ಮತ್ತು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿಯವರು ಬಿಜೆಪಿ ಬಗ್ಗೆ ಲಘುವಾಗಿ ಮಾತನಾಡಿರುವುದು ದೆವ್ವದ ಬಾಯಲ್ಲಿ ಭಗವದ್ಗೀತೆ ಎಂಬಂತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.