ಉಡುಪಿ ಕಲ್ಸಂಕ ಜಂಕ್ಷನ್ ವಾಹನ ದಟ್ಟಣೆ ತಪ್ಪಿಸಲು ಸರ್ಕಲ್ ನಿರ್ಮಾಣಕ್ಕೆ ಚಿಂತನೆ

ಉಡುಪಿ: ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ – 169ಎ ಹಾದುಹೋಗುವ ಕಲ್ಸಂಕ ಜಂಕ್ಷನ್ ನಲ್ಲಿ ಅತಿಯಾದ ವಾಹನ ದಟ್ಟಣೆಯಿಂದ ಸಾರ್ವಜನಿಕವಾಗಿ ಸಮಸ್ಯೆಗಳು ಉಂಟಾಗುತ್ತಿದ್ದು, ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಕಲ್ಸಂಕ ಜಂಕ್ಷನ್ ನಲ್ಲಿ ಸರ್ಕಲ್ ರಚಿಸುವ ಬಗ್ಗೆ ಶನಿವಾರದಂದು ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಗಳ ಜೊತೆ ಶಾಸಕ ರಘುಪತಿ ಭಟ್ ಸಭೆ ನಡೆಸಿ ಚರ್ಚಿಸಿದರು. ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ – 169ಎ ಹಾದು ಹೋಗುವ ಪರ್ಕಳ ಪೇಟೆಯಿಂದ ಮಣಿಪಾಲ, ಉಡುಪಿ ನಗರದವರೆಗೆ ನಗರ ಪ್ರದೇಶವಾಗಿದ್ದು, […]

ಪಡುಬಿದ್ರಿ ಬಳಿ ಬೈಕ್‌ಗೆ‌ ಟೆಂಪೋ ಢಿಕ್ಕಿ; ಗಾಯಾಳು ಯುವಕ ಆಸ್ಪತ್ರೆಯಲ್ಲಿ ಸಾವು

ಉಡುಪಿ: ಪಡುಬಿದ್ರಿ ಬಳಿ ಬೈಕ್‌ಗೆ‌ ಟೆಂಪೋ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪಲಿಮಾರು‌‌ ನಿವಾಸಿ ಖಲಂದರ್ ರಫೀಕ್ ಶನಿವಾರ ಮುಂಜಾನೆ ಮೃತಪಟ್ಟಿದ್ದಾರೆ. ಶುಕ್ರವಾರ ಮಧ್ಯಾಹ್ನ ಎರ್ಮಾಳು ಮಸೀದಿಯಿಂದ ಪಡುಬಿದ್ರಿ ಕಡೆಗೆ ತನ್ನ ಬೈಕ್ ನಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಟೆಂಪೋ ಒಂದು ಬಂದು‌‌ ಢಿಕ್ಕಿ ಹೊಡೆದಿತ್ತು. ಅಪಘಾತದಿಂದ ತೀವ್ರವಾಗಿ ಗಾಯಗೊಂಡಿದ್ದ ಖಲಂದರ್‌ ರಫೀಕ್‌ ಅನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಮುಂಜಾನೆ ಆತ ಅಸುನೀಗಿದ್ದು, ಈ ಬಗ್ಗೆ ಪಡುಬಿದ್ರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹೆ ಮಣಿಪಾಲ: ಮಧುಮೇಹ ಪಾದದ ಆರೈಕೆ ಕಾರ್ಯಾಗಾರ ಉದ್ಘಾಟನೆ

  ಉಡುಪಿ: ಡಯಾಬಿಟಿಕ್ ಫೂಟ್ ಕೇರ್ & ರಿಸರ್ಚ್ ಸೆಂಟರ್, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್, ಮಣಿಪಾಲ ಸರ್ಜರಿ ಡಿಪಾರ್ಟ್ ಮೆಂಟ್, ಕಸ್ತೂರ್ಬಾ ಮೆಡಿಕಲ್ ಕಾಲೇಜ್, ಮಣಿಪಾಲ ಮತ್ತು ಇಂಡಿಯನ್ ಪೊಡಿಯಾಟ್ರಿ ಅಸೋಸಿಯೇಷನ್, ಕರ್ನಾಟಕ ಚಾಪ್ಟರ್ ಸಹಯೋಗದೊಂದಿಗೆ, ಏಪ್ರಿಲ್ 23 ರಂದು ಟಿ.ಎಮ್.ಎ ಪೈ ಸಭಾಂಗಣ ಮಾಹೆ ಮಣಿಪಾಲದಲ್ಲಿ, “ಅಪ್ ಡೇಟ್ ಆನ್ ಡಯಾಬೆಟಿಕ್ ಫೂಟ್ ಮಣಿಪಾಲ- 2022” ಎಂಬ ಮಧುಮೇಹ ಪಾದದ ಆರೈಕೆ ಕಾರ್ಯಾಗಾರದ ಉದ್ಘಾಟನೆ ನಡೆಯಿತು. ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ […]

ಜಿಲ್ಲೆಯ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡಿನ ಪ್ರಯೋಜನ ಒದಗಿಸಿ: ಕೂರ್ಮಾರಾವ್

  ಉಡುಪಿ ಜಿಲ್ಲೆಯ ಎಲ್ಲಾ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನ ಸದುಪಯೋಗದ ಬಗ್ಗೆ ಅರಿವು ಮೂಡಿಸಿ ಈ ಕಾರ್ಡ್ ನಿಂದ ಪಡೆಯಬಹುದಾದ ಸೌಲಭ್ಯಗಳನ್ನು ಎಲ್ಲಾ ಅರ್ಹ ರೈತರಿಗೂ ಆದ್ಯತೆಯ ಮೇರೆಯಲ್ಲಿ ವಿತರಿಸುವ ಬಗ್ಗೆ ಜಿಲ್ಲೆಯ ಎಲ್ಲಾ ಬ್ಯಾಂಕ್‌ಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ “ಕಿಸಾನ್ ಭಾಗೀದಾರಿ-ಪ್ರಾಥಮಿಕತಾ ಹಮಾರಿ” ವಿಶೇಷ ಕಾರ್ಯಕ್ರಮದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಿಸಾನ್ ಕ್ರೆಡಿಟ್ ಕಾರ್ಡ್ […]

ಕೇಂದ್ರ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಉಡುಪಿ: ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಏಪ್ರಿಲ್ 23 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿರುವರು. ಏ. 22 ರಂದು ರಾತ್ರಿ ಉಡುಪಿಗೆ ಆಗಮಿಸಿ, ವಾಸ್ತವ್ಯ ಮಾಡಲಿದ್ದು, ಏಪ್ರಿಲ್ 23 ರಂದು ಬೆಳಗ್ಗೆ 9.30 ಕ್ಕೆ ಉಡುಪಿ ಹಾಗೂ 11.30 ಕ್ಕೆ ಕುಂದಾಪುರದಲ್ಲಿ ಆರೋಗ್ಯ ಮೇಳ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ, ನಂತರ ಮಂಗಳೂರಿಗೆ ತೆರಳಲಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.