ಉಡುಪಿ ಕೃಷ್ಣ ಮಠದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

  ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಉಡುಪಿಯ ವಿದ್ವಾನ್ ಮಧೂರು ಬಾಲಸುಬ್ರಹ್ಮಣ್ಯ ಮತ್ತು ಬಳಗದವರಿಂದ “ಕರ್ನಾಟಕ ಶಾಸ್ತ್ರೀಯ ಸಂಗೀತ” ಕಾರ್ಯಕ್ರಮವು ಉಡುಪಿಯ ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ ನಡೆಯಿತು.

ಉಡುಪಿ: ಬಾವಿಗೆ ಹಾರಿ ಮೇಸ್ತ್ರಿ ಆತ್ಮಹತ್ಯೆ

ಉಡುಪಿ: ಗಾರೆ ಮೇಸ್ತ್ರಿಯೊಬ್ಬರು ನೆರೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ 76 ಬಡಗುಬೆಟ್ಟು ಗ್ರಾಮದ ಚಂದು ಮೈದಾನದ ಬಳಿ ಶನಿವಾರ ನಡೆದಿದೆ. ಬಡಗುಬೆಟ್ಟು ಗ್ರಾಮದ ನಿವಾಸಿ 47 ವರ್ಷದ ಸದಾನಂದ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಮೇಸ್ತ್ರಿ. ಇವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಇದೇ ಕಾರಣದಿಂದ ಜೀವನದಲ್ಲಿ ಮನನೊಂದು ಶನಿವಾರ ಬೆಳಿಗ್ಗೆ 11.15 ಸುಮಾರಿಗೆ ನೆರೆಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅಗ್ನಿಶಾಮಕ ದಳದವರ ಸಹಕಾರದಿಂದ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು […]

ಉಡುಪಿ ಕಲ್ಸಂಕ ಜಂಕ್ಷನ್ ವಾಹನ ದಟ್ಟಣೆ ತಪ್ಪಿಸಲು ಸರ್ಕಲ್ ನಿರ್ಮಾಣಕ್ಕೆ ಚಿಂತನೆ

ಉಡುಪಿ: ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ – 169ಎ ಹಾದುಹೋಗುವ ಕಲ್ಸಂಕ ಜಂಕ್ಷನ್ ನಲ್ಲಿ ಅತಿಯಾದ ವಾಹನ ದಟ್ಟಣೆಯಿಂದ ಸಾರ್ವಜನಿಕವಾಗಿ ಸಮಸ್ಯೆಗಳು ಉಂಟಾಗುತ್ತಿದ್ದು, ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಕಲ್ಸಂಕ ಜಂಕ್ಷನ್ ನಲ್ಲಿ ಸರ್ಕಲ್ ರಚಿಸುವ ಬಗ್ಗೆ ಶನಿವಾರದಂದು ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಗಳ ಜೊತೆ ಶಾಸಕ ರಘುಪತಿ ಭಟ್ ಸಭೆ ನಡೆಸಿ ಚರ್ಚಿಸಿದರು. ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ – 169ಎ ಹಾದು ಹೋಗುವ ಪರ್ಕಳ ಪೇಟೆಯಿಂದ ಮಣಿಪಾಲ, ಉಡುಪಿ ನಗರದವರೆಗೆ ನಗರ ಪ್ರದೇಶವಾಗಿದ್ದು, […]

ಪಡುಬಿದ್ರಿ ಬಳಿ ಬೈಕ್‌ಗೆ‌ ಟೆಂಪೋ ಢಿಕ್ಕಿ; ಗಾಯಾಳು ಯುವಕ ಆಸ್ಪತ್ರೆಯಲ್ಲಿ ಸಾವು

ಉಡುಪಿ: ಪಡುಬಿದ್ರಿ ಬಳಿ ಬೈಕ್‌ಗೆ‌ ಟೆಂಪೋ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪಲಿಮಾರು‌‌ ನಿವಾಸಿ ಖಲಂದರ್ ರಫೀಕ್ ಶನಿವಾರ ಮುಂಜಾನೆ ಮೃತಪಟ್ಟಿದ್ದಾರೆ. ಶುಕ್ರವಾರ ಮಧ್ಯಾಹ್ನ ಎರ್ಮಾಳು ಮಸೀದಿಯಿಂದ ಪಡುಬಿದ್ರಿ ಕಡೆಗೆ ತನ್ನ ಬೈಕ್ ನಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಟೆಂಪೋ ಒಂದು ಬಂದು‌‌ ಢಿಕ್ಕಿ ಹೊಡೆದಿತ್ತು. ಅಪಘಾತದಿಂದ ತೀವ್ರವಾಗಿ ಗಾಯಗೊಂಡಿದ್ದ ಖಲಂದರ್‌ ರಫೀಕ್‌ ಅನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಮುಂಜಾನೆ ಆತ ಅಸುನೀಗಿದ್ದು, ಈ ಬಗ್ಗೆ ಪಡುಬಿದ್ರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹೆ ಮಣಿಪಾಲ: ಮಧುಮೇಹ ಪಾದದ ಆರೈಕೆ ಕಾರ್ಯಾಗಾರ ಉದ್ಘಾಟನೆ

  ಉಡುಪಿ: ಡಯಾಬಿಟಿಕ್ ಫೂಟ್ ಕೇರ್ & ರಿಸರ್ಚ್ ಸೆಂಟರ್, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್, ಮಣಿಪಾಲ ಸರ್ಜರಿ ಡಿಪಾರ್ಟ್ ಮೆಂಟ್, ಕಸ್ತೂರ್ಬಾ ಮೆಡಿಕಲ್ ಕಾಲೇಜ್, ಮಣಿಪಾಲ ಮತ್ತು ಇಂಡಿಯನ್ ಪೊಡಿಯಾಟ್ರಿ ಅಸೋಸಿಯೇಷನ್, ಕರ್ನಾಟಕ ಚಾಪ್ಟರ್ ಸಹಯೋಗದೊಂದಿಗೆ, ಏಪ್ರಿಲ್ 23 ರಂದು ಟಿ.ಎಮ್.ಎ ಪೈ ಸಭಾಂಗಣ ಮಾಹೆ ಮಣಿಪಾಲದಲ್ಲಿ, “ಅಪ್ ಡೇಟ್ ಆನ್ ಡಯಾಬೆಟಿಕ್ ಫೂಟ್ ಮಣಿಪಾಲ- 2022” ಎಂಬ ಮಧುಮೇಹ ಪಾದದ ಆರೈಕೆ ಕಾರ್ಯಾಗಾರದ ಉದ್ಘಾಟನೆ ನಡೆಯಿತು. ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ […]