ಉಡುಪಿ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ಜಿಲ್ಲಾಧ್ಯಕ್ಷರ ಪದಗ್ರಹಣಕ್ಕೆ ಇಬ್ಬರು ಶಾಸಕರು ಗೈರು

ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಘಟಕದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಇಂದು ನಗರದ ಕಿದಿಯೂರು ಹೋಟೆಲ್ ನಲ್ಲಿ ನಡೆದ ನೂತನ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಪದಗ್ರಹಣ ಸಮಾರಂಭಕ್ಕೆ ಜಿಲ್ಲೆಯ ಐವರು ಶಾಸಕರ ಪೈಕಿ ಇಬ್ಬರು ಶಾಸಕರು ಗೈರಾಗುವ ಮೂಲಕ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಕಾರ್ಕಳ ಶಾಸಕ ಸುನಿಲ್ ಕುಮಾರ್ ಸಮಾರಂಭಕ್ಕೆ ಗೈರಾಗಿದ್ದು, ಆ ಮೂಲಕ ತಮ್ಮೊಳಗೆ ಕುದಿಯುತ್ತಿದ್ದ ಅಸಮಾಧಾನದ ಜ್ವಾಲೆಯನ್ನು ಹೊರಹಾಕಿದ್ದಾರೆ. […]
ಗ್ರಾಮಕರಣಿಕರ ಹುದ್ದೆ ನೇಮಕಾತಿಯಲ್ಲಿ ಆಮಿಷಕ್ಕೆ ಒಳಗಾಗಬೇಡಿ: ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ: ಉಡುಪಿ ಜಿಲ್ಲೆಯಲ್ಲಿ 2019 ನೇ ಸಾಲಿನ ಗ್ರಾಮಕರಣಿಕರ ಹುದ್ದೆಗೆ ನೇರ ನೇಮಕಾತಿ ಪ್ರಕ್ರಿಯೆಯು ಪ್ರಗತಿಯಲ್ಲಿದ್ದು, ಸರಕಾರದ ಮಾರ್ಗಸೂಚಿಯಡಿ ಅಭ್ಯರ್ಥಿಗಳು ಪಡೆದಿರುವ ಅಂಕಗಳನ್ನು ಪರಿಗಣಿಸಿ, ನೇರ ನೇಮಕಾತಿಗೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ. ನೇಮಕಾತಿ ಪ್ರಕ್ರಿಯೆಯಲ್ಲಿ ನೇರ ಸಂದರ್ಶನ, ಲಿಖಿತ ಪರೀಕ್ಷೆ ಇತ್ಯಾದಿಗಳು ಇರುವುದಿಲ್ಲ. ಆದ್ದರಿಂದ ಅಭ್ಯರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮೂಲಕ ಆನ್ಲೈನ್ ಅರ್ಜಿಯನ್ನು ಸಲ್ಲಿಸುವಂತೆ ಹಾಗೂ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆಯುವುದರಿಂದ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳ ಆಮೀಷಕ್ಕೆ ಒಳಗಾಗದಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. […]
ಬಿ.ಎಡ್, ಡಿ.ಎಡ್ ಕೋರ್ಸ್ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ
ಉಡುಪಿ, ಜುಲೈ 22: 2019-20 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ )ಸಮುದಾಯದ ವಿದ್ಯಾರ್ಥಿಗಳಿಗೆ ಬಿ.ಎಡ್ ಹಾಗೂ ಡಿ.ಎಡ್ ಕೋರ್ಸ್ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಆಫ್ಲೈನ್ ಅರ್ಜಿಯನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್ಸೈಟ್ https://gokdom.kar.nic.in ಅಥವಾ https://dom.karnataka.gov.in/udupi ರಿಂದ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ, ಸೂಚಿಸಲಾದ ಎಲ್ಲಾ ದಾಖಲಾತಿಗಳೊಂದಿಗೆ ಆಗಸ್ಟ್ 31 ರ ಒಳಗೆ ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: […]
ಹಲ್ಲೆ ಆರೋಪಿ ಯೋಗೀಶ್ ಸಾಲ್ಯಾನ್ ಬಿಜೆಪಿಯಿಂದ ಅಮಾನತು

ಉಡುಪಿ: ಕರ್ತವ್ಯ ನಿರತ ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ ನಡೆಸಿರುವ ಆರೋಪಿ ಬಿಜೆಪಿ ಪಕ್ಷದ, ವಡಾಭಾಂಡೇಶ್ವರ ನಗರಸಭಾ ಸದಸ್ಯ ಯೊಗೀಶ್ ಸಾಲ್ಯಾನ್ ಅವರನ್ನು ಮಂಗಳವಾರ ಬಿಜೆಪಿಯಿಂದ ಅಮಾನತುಗೊಳಿಸಲಾಗಿದೆ. ಘಟನೆಯ ಕುರಿತು ಖಂಡನೆ ವ್ಯಕ್ತಪಡಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅವರು, ಕರ್ತವ್ಯ ನಿರತ ಅಧಿಕಾರಿ ಮೇಲೆ ಹಲ್ಲೆ ನಡೆಸಿರುವ ಕ್ರಮ ಖಂಡನೀಯ. ಬಿಜೆಪಿ ಪಕ್ಷ ಇಂಥ ವಿಚಾರ ಸಹಿಸುವುದಿಲ್ಲ. ಆರೋಪಿತರ ವಿರುದ್ದ ಪಕ್ಷದ ವತಿಯಿಂದ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದರು. ಘಟನೆ ಹಿನ್ನೆಲೆ: ಮಂಗಳವಾರ ಉಡುಪಿ […]
ಉಡುಪಿ: ಆರೋಗ್ಯ ನಿರೀಕ್ಷಕರ ಮೇಲೆ ನಗರಸಭೆ ಸದಸ್ಯನಿಂದ ಹಲ್ಲೆ

ಉಡುಪಿ: ಉಡುಪಿ ನಗರಸಭೆ ಸದಸ್ಯರೊಬ್ಬರು ನಗರಸಭೆ ಆರೋಗ್ಯ ನಿರೀಕ್ಷಕರೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಮಂಗಳವಾರ ನಡೆಸಿದೆ. ಆರೋಗ್ಯ ನಿರೀಕ್ಷಕ ಪ್ರಸನ್ನ ಕುಮಾರ್ ಹಲ್ಲೆಗೆ ಒಳಗಾದವರು. ಉಡುಪಿ ನಗರಸಭೆಯ ವಡಭಾಂಡೇಶ್ವರ ವಾರ್ಡ್ನ ಸದಸ್ಯ ಯೋಗೀಶ್ ಹಲ್ಲೆ ಮಾಡಿದವರು. ಹಲ್ಲೆಗೆ ಒಳಗಾಗಿರುವ ಆರೋಗ್ಯ ನಿರೀಕ್ಷಕರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ವಿಷಯ ತಿಳಿದ ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ಆಸ್ಪತ್ರೆ ಬಳಿ ಜಮಾಯಿಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ವಡಭಾಂಡೇಶ್ವರ ಪರಿಸರದಲ್ಲಿ ರಸ್ತೆಯ ಕಲ್ಲು ತೆಗೆಯುವ ವಿಚಾರಕ್ಕೆ ಸಂಬಂಧಿಸಿದಂತೆ ನಗರಸಭೆ ಕಚೇರಿಗೆ […]