ಮತ್ತೆ ಶುರುವಾಯ್ತು ಕಾಂತಾರ ಫೀವರ್ : ಕಾಂತಾರ ಚಾಪ್ಟರ್ 1 ಟ್ರೈಲರ್ ಅಬ್ಬರಕ್ಕೆ ಪ್ರೇಕ್ಷಕರು ಫುಲ್ ಖುಷ್

ಕೊನೆಗೂ ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 ಟ್ರೈಲರ್ ರಿಲೀಸ್ ಆಗಿದೆ. ಟ್ರೈಲರ್ ನ ಅದ್ದೂರಿತನಕ್ಕೆ ಪ್ರೇಕ್ಷಕರು ಖುಷ್ ಆಗಿದ್ದಾರೆ. ಚಿತ್ರದ ಟ್ರೈಲರ್  ಹೊಸ ಲೋಕವೊಂದಕ್ಕೆ ಕರೆದೊಯ್ಯುವಂತಿದ್ದು ಕಾಡಿನ ರೋಮಾಂಚಕ ಸನ್ನಿವೇಶ, ನಾಯಕನ ಪರಾಕ್ರಮ, ಜನರ ವ್ಯಾಪಾರ, ಜೀವನ, ರಾಜನ ಆಳ್ವಿಕೆ, ದಬ್ಬಾಳಿಕೆ ಎಲ್ಲವೂ ಟ್ರೈಲರ್ ನಲ್ಲಿ ಸೊಗಸಾಗಿ ಮೂಡಿಬಂದಿದೆ. ಹೊಂಬಾಳೆ ಫಿಲ್ಮ್​ ನಿರ್ಮಿಸಿದ ರಿಷಬ್ ಶೆಟ್ಟಿ  ನಿರ್ದೇಶಿಸಿ ನಟಿಸಿದ ಕಾಂತಾರ ಸಿನಿಮಾದ ಪ್ರೀಕ್ವೆಲ್ ಇದಾಗಿದೆ. ಕಳೆದ ಕೆಲವು ಸಮಯಗಳಿಂದ ಈ ಚಿತ್ರದ ಕುರಿತು ಭಾರೀ ನಿರೀಕ್ಷೆ, ಹೈಪ್ ನೀಡುವ ಮಾತುಗಳು […]

ಹೊಟೇಲ್ ನಲ್ಲಿ ಊಟದ ಬಳಿಕ ಸೋಂಪು ಕಾಳು ಯಾಕೆ ಕೊಡ್ತಾರೆ? ಅಸಲಿ ಕಾರಣ ಇಲ್ಲಿದೆ ನೋಡಿ !

ಹೊಟೇಲ್ ನಲ್ಲಿ ಊಟ ಮಾಡಿ ಬಿಲ್ ಕೊಡುವ ಸಮಯ ಬಂದಾಗ ಸೋಂಪು ಕಾಳಿನ ಜೊತೆಗೆ ಪುಟ್ಟ ಪುಟ್ಟ ಕಲ್ಲುಸಕ್ಕರೆಯನ್ನು ಕೊಡುವ ಕ್ರಮನ್ನು ನೀವು ನೋಡಿರುತ್ತೀರಿ. ಆ ಸೋಂಪು ಮತ್ತು ಕಲ್ಲುಸಕ್ಕರೆ ತಿಂದದ್ದೇ ಊಟ ಪರಿಪೂರ್ಣ ಆಯ್ತು ಎನ್ನುವ ಭಾವನೆ ನಿಮ್ಮಲ್ಲಿ ಮೂಡಿರುತ್ತೆ.ಆದ್ರೆ ಸೋಂಪು ಮತ್ತು ಕಲ್ಲು ಸಕ್ರೆ ಯಾಕೆ ಕೊಡ್ತಾರೆ ಇದರಿಂದ ನಮಗೆ ನಿಜಕ್ಕೂ ಆರೋಗ್ಯಕ್ಕೆ ಒಳ್ಳೆದಾಗುತ್ತಾ ಎನ್ನುವ ಕುರಿತು ತಿಳ್ಕೊಳ್ಳೋಣ. ಹೋಟೆಲ್‌ನಲ್ಲಿ ಮಸಾಲೆಯುಕ್ತ ಮತ್ತು ಎಣ್ಣೆಯುಕ್ತ ಆಹಾರವನ್ನು ಸೇವಿಸಿದ ನಂತರ, ನಿಮಗೆ ಹೊಟ್ಟೆಯಲ್ಲಿ ಭಾರ, ಅನಿಲ […]

 ತ್ಯಾಗದಿಂದ ಬಂದ ತೇಜಸ್ಸು “ಸ್ವಾತಂತ್ರ್ಯ”: ಪ್ರಜ್ಞಾ ಬರೆದ ಸ್ವಾತಂತ್ರ್ಯ ದಿನದ ವಿಶೇಷ ಬರಹ

ಸ್ವಾತಂತ್ರ್ಯ ದಿನಾಚರಣೆ ಎಂದರೆ ನಮ್ಮ ದೇಶವನ್ನು  ಬ್ರಿಟೀಷರ ಆಳ್ವಿಕೆಯಿಂದ ಮುಕ್ತಾಯಗೊಂಡ ಕ್ಷಣವನ್ನು ಸ್ಮರಿಸುವ  ವಿಶೇಷ ಕ್ಷಣ. ಇದು ಕೇವಲ ರಜೆಯ ದಿನವಲ್ಲ, ನಮ್ಮ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಹೋರಾಟಗಾರರ ತ್ಯಾಗ, ಧೈರ್ಯ ಮತ್ತು ದೇಶಪ್ರೇಮವನ್ನು ನೆನೆದು ಗೌರವಿಸುವ ದಿನ.  ನನ್ನ ಪ್ರಕಾರ ನಾವು ಸ್ವಾತಂತ್ರ್ಯ ದಿನವನ್ನು ತುಂಬಾ ಖುಷಿಯಿಂದ,  ಗೌರವದಿಂದ ಆಚರಿಸಬೇಕು. ನನ್ನ ಬಾಲ್ಯದ ದಿನದಲ್ಲಿ ಶಾಲೆಗೆ ಹೋಗುತ್ತಿರುವಾಗ ಸ್ವಾತಂತ್ರ್ಯ ದಿನಾಚರಣೆಯ ಹಿಂದಿನ ದಿನದಂದು ಸುತ್ತಮುತ್ತಲೂ ಎಲ್ಲಾ ಸ್ವಚ್ಛಗೊಳಿಸಿ ಭಾರತದ ನಕ್ಷೆಯನ್ನು ಧ್ವಜಸ್ತಂಬದ ಮುಂದೆ […]

ಕಂಬಳ ಕೋಣಗಳೇ ಇಲ್ಲಿ ರಿಯಲ್ ಹೀರೋಗಳು! “ಕರಾವಳಿ” ಸಿನಿಮಾದ ಟೀಸರ್ ನೋಡಿ ಖುಷಿಯಿಂದ ದಂಗಾದ್ರು ಪ್ರೇಕ್ಷಕರು ! ಅಂತದ್ದೇನಿದೆ ಟೀಸರ್ ನಲ್ಲಿ?

ಕಳೆದ ಕೆಲವು ಸಮಯದಿಂದ “ಕರಾವಳಿ ” ಎನ್ನುವ ಸಿನಿಮಾ ಸದ್ದು ಮಾಡ್ತಿದೆ. ಇನ್ನೂ ರಿಲೀಸ್ ಆಗಿರದ ಈ ಸಿನಿಮಾ ಪೋಸ್ಟರ್ ಮತ್ತು ಫಸ್ಟ್ ಲುಕ್ ಮೂಲಕ ಸದ್ದು ಮಾಡುತ್ತಿದೆ. ಈ ಸದ್ದಿಗೆ ಕಾರಣ ಈ ಸಿನಿಮಾ “ಕರಾವಳಿ”ಯ ಜನಪದ ಕ್ರೀಡೆಯಾದ ಕಂಬಳದ ಕತೆಯನ್ನೊಳಗೊಂಡ ಚಿತ್ರವಾಗಿರೋದು. ಈಗ “ಕರಾವಳಿ” ಚಿತ್ರದ ಟೀಸರ್ ಎಲ್ಲೆಲ್ಲೂ ಅಬ್ಬರಿಸುತ್ತಿದ್ದು  ಟೀಸರ್ ನೋಡಿದ ಪ್ರೇಕ್ಷಕರು ಖುಷಿಯಿಂದ ದಂಗಾಗಿದ್ದಾರೆ.  ನಟ ಪ್ರಜ್ವಲ್ ದೇವರಾಜ್ (Prajwal Devaraj) ನಟಿಸಿ ಗುರುದತ್ ಗಾಣಿಗ Gurudath Ganiga ನಿರ್ದೇಶನ ಮಾಡುತ್ತಿರುವ […]

ಕೃಷಿ ಇಲಾಖೆಯಿಂದ ಲಭ್ಯವಿರುವ ಈ ಯೋಜನೆಗಳ ಬಗ್ಗೆ ತಿಳ್ಕೊಳ್ಳಿ: ಯಾವುದಕ್ಕೆಲ್ಲಾ ಇದೆ ಸಹಾಯಧನ?

ನಮ್ಮ ರಾಜ್ಯದಲ್ಲಿ ಕೃಷಿಕರಿಗೆ ವಿವಿಧ ಸಹಾಯಧನ ಮತ್ತು ಯೋಜನೆಗಳು ಲಭ್ಯವಿದೆ. ನೀವೂ ಕೃಷಿಕರಾಗಿದ್ದರೆ ಅಥವಾ ಮುಂದೆ ಕೃಷಿ ಮಾಡುವ ಯೋಚನೆ ನಿಮಗಿದ್ದರೆ ಈ ಎಲ್ಲಾ ಯೋಜನೆಗಳ ಬಗ್ಗೆ ತಿಳಿದುಕೊಳ್ಳಿ ನಿಮಗೆ ಖಂಡಿತಾ ಪ್ರಯೋಜನವಾಗುತ್ತದೆ. ಕೃಷಿ ಯಾಂತ್ರೀಕರಣ ಯೋಜನೆಕೃಷಿ ಯಾಂತ್ರೀಕರಣವು ಕೃಷಿಯ ಆಧುನಿಕರಣ ಪ್ರಮುಖ ಅಂಗವಾಗಿದೆ. ಕೃಷಿ ಕ್ಷೇತ್ರದಲ್ಲಿ ಕಾರ್ಮಿಕರ ಕೊರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾರ್ಮಿಕರ ಮೇಲಿನ ಹೊರೆಯನ್ನು ಕಡಿಮೆ ಮಾಡಲು ರೈತರು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಸಲು ಒತ್ತು ನೀಡುತ್ತಿದ್ದಾರೆ. ಕೃಷಿ ಯಂತ್ರೋಪಕರಣಗಳು ದುಬಾರಿಯಾಗುತ್ತಿರುವ ಕಾರಣ […]