ಕಡಿಮೆ ಕಲಿತರೂ ಇಲ್ಲಿದೆ ಕೆಲಸ, ಪುನರ್ವಸತಿ ಕಾರ್ಯಕರ್ತರ ನೇಮಕಾತಿ, ಆಸಕ್ತಿ ಇದ್ಯಾ, ಈಗಲೇ ಅರ್ಜಿ ಹಾಕಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಂಟಿಯಾಗಿ ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಜಿ ಆಹ್ವಾನಿಸಿವೆ. ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಲಯ ಕಚೇರಿ–01 ಮತ್ತು ವಲಯ ಕಚೇರಿ–07ರಲ್ಲಿ ಖಾಲಿ ಇರುವ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಯೋಜನೆಯ ಮುಖ್ಯ ಉದ್ದೇಶ ವಿಕಲಚೇತನರು ಮತ್ತು ಹಿರಿಯ ನಾಗರಿಕರಿಗೆ ಪಿಂಚಣಿ, UDID ಕಾರ್ಡ್, ತರಬೇತಿ, ಉದ್ಯೋಗ ಸೌಲಭ್ಯಗಳು ಹಾಗೂ ಆರೋಗ್ಯ ಸೇವೆಗಳಂತಹ […]

ಆದಾಯದಲ್ಲಿ ಇತಿಹಾಸ ಸೃಷ್ಟಿಸಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ, ಸತತ 15 ವರ್ಷಗಳಿಂದ ರಾಜ್ಯದ ಶ್ರೀಮಂತ ದೇವಸ್ಥಾನದ ಪಟ್ಟ, ಈ ಸಲದ ಆದಾಯವೆಷ್ಟು ಗೊತ್ತಾ?

ಬೆಂಗಳೂರು: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ ರಾಜ್ಯದ ಮುಜರಾಯಿ ಇಲಾಖೆಯ ಅಡಿಯಲ್ಲಿ ಸತತ 15ನೇ ವರ್ಷವೂ ಅತಿ ಹೆಚ್ಚು ಆದಾಯ ಗಳಿಸಿದ ದೇವಸ್ಥಾನವಾಗಿ ಹೊಸ ದಾಖಲೆ ನಿರ್ಮಿಸಿದೆ. 2025-26ನೇ ಆರ್ಥಿಕ ವರ್ಷದಲ್ಲಿ ದೇವಸ್ಥಾನವು ಬರೋಬ್ಬರಿ 167 ಕೋಟಿ 89 ಲಕ್ಷ 9 ಸಾವಿರ 80 ರೂಪಾಯಿ 77 ಪೈಸೆ ಆದಾಯ ಗಳಿಸಿದ್ದು, ಕಳೆದ ವರ್ಷದಿಗಿಂತ ಸುಮಾರು 12 ಕೋಟಿ ರೂ. ಹೆಚ್ಚಳ ಕಂಡಿದೆ. 2024-25ನೇ ಸಾಲಿನಲ್ಲಿ ದೇವಸ್ಥಾನದ ಒಟ್ಟು ಆದಾಯ ಸುಮಾರು 155 ಕೋಟಿ ರೂ. ಆಗಿದ್ದರೆ, […]

ಮಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಅಮೆಜಾನ್ ನೌ ಎಂಟ್ರಿ: ‘ಕ್ವಿಕ್ ಕಾಮರ್ಸ್’ ಮಾರುಕಟ್ಟೆಯಲ್ಲಿ ಸಂಚಲನ

ಬೆಂಗಳೂರು: ರಾಜಧಾನಿ ಬೆಂಗಳೂರು, ಮುಂಬೈ ಮತ್ತು ದೆಹಲಿ-ಎನ್‌ಸಿಆರ್‌ನಂತಹ ಮಹಾನಗರಗಳಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಅಮೆಜಾನ್ ನೌ ಸೇವೆ ಇದೀಗ ಕರ್ನಾಟಕದ ಪ್ರಮುಖ ನಗರಗಳಾದ ಮಂಗಳೂರು ಮತ್ತು ಮೈಸೂರಿಗೂ ವಿಸ್ತರಿಸಲಾಗುತ್ತಿದೆ. ಭಾರತದ ಕ್ವಿಕ್ ಕಾಮರ್ಸ್ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಪೈಪೋಟಿ ಹೆಚ್ಚುತ್ತಿರುವ ಹಿನ್ನೆಲೆ, ಈ ವಲಯದಲ್ಲಿ ತನ್ನ ಸ್ಥಾನ ಮತ್ತಷ್ಟು ಬಲಪಡಿಸಲು ಇ-ಕಾಮರ್ಸ್ ದೈತ್ಯ ಅಮೆಜಾನ್ ಮಹತ್ವದ ಹೆಜ್ಜೆ ಇಟ್ಟಿದೆ. ಗ್ರಾಹಕರಿಗೆ ಕೆಲವೇ ನಿಮಿಷಗಳಲ್ಲಿ ಅಗತ್ಯ ವಸ್ತುಗಳನ್ನು ತಲುಪಿಸುವ ‘ಅಮೆಜಾನ್ ನೌ’ ಸೇವೆಯನ್ನು ಈಗಾಗಲೇ ಹಲವು ನಗರಗಳಲ್ಲಿ ಆರಂಭಿಸಿರುವ ಕಂಪನಿ, […]

ಉಡುಪಿ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು : ನಿರ್ವಹಣಾ ಹಬ್ಬ ‘ಲಕ್ಷ್ಯ-2026’ ಉದ್ಘಾಟನೆ

ಉಡುಪಿ, ಎ. 24: ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿನ ವಾಣಿಜ್ಯಶಾಸ್ತ್ರ, ನಿರ್ವಹಣಾ ವಿಭಾಗ ಮತ್ತು ಆಂತರಿಕ ಗುಣಮಟ್ಟ ಭರವಾಸಕೋಶ ಇದರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಒಂದು ದಿನದ ನಿರ್ವಹಣಾ ಹಬ್ಬ ‘ಲಕ್ಷ್ಯ-2026’ರ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಪಿ. ಜಿ ಸಭಾಂಗಣದಲ್ಲಿ ನಡೆಯಿತು. ಮಹಿಳಾ ಉದ್ಯಮಿ ಮತ್ತು ಫುಡ್ ಬ್ಲಾಗರ್ ಆದ ರೋವೆನಾ ಫೆರ್ನಾಂಡಿಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜೀವನದಲ್ಲೊಂದು ನಿರ್ದಿಷ್ಟ ಗುರಿಯನ್ನು ಹೊಂದಿದ್ದರೆ […]

ಹುಬ್ಬಳ್ಳಿ: 4 ಗಂಟೆ ಆಗಸದಲ್ಲೇ ತೇಲಾಡಿದ ವಿಮಾನ, ಪ್ರಯಾಣಿಕರ ಬೆಚ್ಚಿಬೀಳಿಸಿ ಕೊನೆಗೂ ಲ್ಯಾಂಡ್ ಆದ FLY91 ವಿಮಾನ!

ಹುಬ್ಬಳ್ಳಿ: ಇತ್ತೀಚೆಗೆ ದೇಶದಲ್ಲಿ ವಿಮಾನ ದುರಂತಗಳ ಆತಂಕ ಹೆಚ್ಚುತ್ತಿರುವ ನಡುವೆಯೇ, ರಾಜ್ಯದಲ್ಲಿ ಸಂಭವಿಸಬಹುದಾಗಿದ್ದ ದೊಡ್ಡ ದುರಂತವೊಂದು ಕೊನೆಯ ಕ್ಷಣದಲ್ಲಿ ತಪ್ಪಿದ ಘಟನೆ ಬೆಳಕಿಗೆ ಬಂದಿದೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ಬರುತ್ತಿದ್ದ Fly91 ಏರ್ ಲೈನ್ಸ್‌ನ IC3401 (ATRTurboprop AT7) ವಿಮಾನವು ಮಧ್ಯ ಗಗನದಲ್ಲೇ ತಾಂತ್ರಿಕ ದೋಷಕ್ಕೆ ಒಳಗಾಗಿ ನಿಯಂತ್ರಣ ಕಳೆದುಕೊಂಡಿದೆ. ಪರಿಣಾಮವಾಗಿ ವಿಮಾನವು ಗಗನದಲ್ಲೇ ಸುಮಾರು 4 ಗಂಟೆಗಳ ಕಾಲ ಸುತ್ತಾಡಿ, ಪ್ರಯಾಣಿಕರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಯಿತು. ಮಧ್ಯಾಹ್ನ 4 ಗಂಟೆಗೆ […]