ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7 ಮೀಸಲಾತಿ ಶೀಘ್ರ ಜಾರಿ; ಸರ್ಕಾರವೇ ಜನರ ಮನೆ ಬಾಗಿಲಿಗೆ: ಡಿಕೆಶಿ

ಬಳ್ಳಾರಿ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಆಂತರಿಕವಾಗಿ ಶೇ.7ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಶೀಘ್ರದಲ್ಲೇ ಮೀಸಲಾತಿ ಜಾರಿಯ ರೂಪುರೇಷೆ ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ. ವಿಜಯನಗರ ಜಿಲ್ಲೆಯಲ್ಲಿ ಆಯೋಜಿಸಿದ್ದ ನೂತನ ‘ಪ್ರಜಾಸೇವಾ ಇಲಾಖೆ ಹಾಗೂ ಆಡಳಿತ ವಿಕೇಂದ್ರೀಕರಣ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜನರ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳು ಕಚೇರಿಗಳಲ್ಲೇ ಕುಳಿತು ಆಡಳಿತ ನಡೆಸುವ ಬದಲು ಜನರ ಮನೆ ಬಾಗಿಲಿಗೆ ತೆರಳಬೇಕು ಎಂದು ಸೂಚಿಸಿದರು. […]
ಸ್ವಂತ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಿ ದಾಖಲೆ ಬರೆದ KKR : ಕ್ಯಾಲಿಫೋರ್ನಿಯಾದಲ್ಲಿ ನಿರ್ಮಾಣವಾಯ್ತು ಭರ್ಜರಿ ಸ್ಟೇಡಿಯಂ!

ಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್ ಅವರ ನೈಟ್ ರೈಡರ್ಸ್ ಗ್ರೂಪ್ (KRG) ಅಮೆರಿಕದ ಕ್ಯಾಲಿಫೋರ್ನಿಯಾದ ಪೊಮೋನಾದಲ್ಲಿ ತನ್ನದೇ ಆದ ನೈಟ್ ರೈಡರ್ಸ್ ಕ್ರಿಕೆಟ್ ಗ್ರೌಂಡ್ ಅನ್ನು ಅಧಿಕೃತವಾಗಿ ಅನಾವರಣಗೊಳಿಸಿದೆ. ಈ ಮೈದಾನವು ಲಾಸ್ ಏಂಜಲೀಸ್ ನೈಟ್ ರೈಡರ್ಸ್ (LAKR) ತಂಡದ ತವರಿನ ಕ್ರೀಡಾಂಗಣವಾಗಿದ್ದು, ಅಮೆರಿಕದಲ್ಲಿ ಕ್ರಿಕೆಟ್ ಬೆಳವಣಿಗೆಗೆ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ. 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸಲು ಈ ಮೈದಾನ ಪ್ರಮುಖ ಕೇಂದ್ರಗಳಲ್ಲಿ ಒಂದಾಗುವ ಸಾಧ್ಯತೆಯಿದೆ. ಇದರಿಂದ ಅಮೆರಿಕದಲ್ಲಿ ಕ್ರಿಕೆಟ್ಗೆ ಇನ್ನಷ್ಟು ಉತ್ತೇಜನ […]
ನಾಳೆಯಿಂದ ಬೆಂಗಳೂರು–ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ ಶುರು: ಪ್ರಯಾಣದ ಅವಧಿ 5 ಗಂಟೆ ಕಡಿಮೆಯಾಗುವ ನಿರೀಕ್ಷೆ

ಮಂಗಳೂರು: ಅಂತೂ ಇಂತೂ ಕರಾವಳಿ ಕರ್ನಾಟಕದ ಜನರ ಬಹುದಿನಗಳ ನಿರೀಕ್ಷೆಯಾಗಿದ್ದ ಬೆಂಗಳೂರು–ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ಜೂನ್ 1ರಿಂದ ಪ್ರಾಯೋಗಿಕವಾಗಿ ಆರಂಭವಾಗಲಿದ್ದು, ಯಶಸ್ವಿ ಪರೀಕ್ಷೆಗಳ ಬಳಿಕ ವಾಣಿಜ್ಯ ಸಂಚಾರಕ್ಕೆ ಹಸಿರು ನಿಶಾನೆ ಸಿಗುವ ನಿರೀಕ್ಷೆಯಿದೆ. ಪ್ರಸ್ತುತ ಶಿರಾಡಿ ಘಾಟ್ ಮಾರ್ಗದ ಮೂಲಕ ಬೆಂಗಳೂರು ಮತ್ತು ಮಂಗಳೂರು ನಡುವೆ ರಸ್ತೆ ಪ್ರಯಾಣಕ್ಕೆ 8ರಿಂದ 10 ಗಂಟೆಗಳವರೆಗೆ ಸಮಯ ಬೇಕಾಗುತ್ತದೆ. ಆದರೆ ವಂದೇ ಭಾರತ್ ರೈಲು ಸೇವೆ ಆರಂಭವಾದರೆ ಈ ಅವಧಿ ಸುಮಾರು 5 ಗಂಟೆಗಳಿಗೆ ಇಳಿಯುವ […]
ಕಡಿಮೆ ಕಲಿತರೂ ಇಲ್ಲಿದೆ ಕೆಲಸ, ಪುನರ್ವಸತಿ ಕಾರ್ಯಕರ್ತರ ನೇಮಕಾತಿ, ಆಸಕ್ತಿ ಇದ್ಯಾ, ಈಗಲೇ ಅರ್ಜಿ ಹಾಕಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಂಟಿಯಾಗಿ ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಜಿ ಆಹ್ವಾನಿಸಿವೆ. ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಲಯ ಕಚೇರಿ–01 ಮತ್ತು ವಲಯ ಕಚೇರಿ–07ರಲ್ಲಿ ಖಾಲಿ ಇರುವ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಯೋಜನೆಯ ಮುಖ್ಯ ಉದ್ದೇಶ ವಿಕಲಚೇತನರು ಮತ್ತು ಹಿರಿಯ ನಾಗರಿಕರಿಗೆ ಪಿಂಚಣಿ, UDID ಕಾರ್ಡ್, ತರಬೇತಿ, ಉದ್ಯೋಗ ಸೌಲಭ್ಯಗಳು ಹಾಗೂ ಆರೋಗ್ಯ ಸೇವೆಗಳಂತಹ […]
ಆದಾಯದಲ್ಲಿ ಇತಿಹಾಸ ಸೃಷ್ಟಿಸಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ, ಸತತ 15 ವರ್ಷಗಳಿಂದ ರಾಜ್ಯದ ಶ್ರೀಮಂತ ದೇವಸ್ಥಾನದ ಪಟ್ಟ, ಈ ಸಲದ ಆದಾಯವೆಷ್ಟು ಗೊತ್ತಾ?

ಬೆಂಗಳೂರು: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ ರಾಜ್ಯದ ಮುಜರಾಯಿ ಇಲಾಖೆಯ ಅಡಿಯಲ್ಲಿ ಸತತ 15ನೇ ವರ್ಷವೂ ಅತಿ ಹೆಚ್ಚು ಆದಾಯ ಗಳಿಸಿದ ದೇವಸ್ಥಾನವಾಗಿ ಹೊಸ ದಾಖಲೆ ನಿರ್ಮಿಸಿದೆ. 2025-26ನೇ ಆರ್ಥಿಕ ವರ್ಷದಲ್ಲಿ ದೇವಸ್ಥಾನವು ಬರೋಬ್ಬರಿ 167 ಕೋಟಿ 89 ಲಕ್ಷ 9 ಸಾವಿರ 80 ರೂಪಾಯಿ 77 ಪೈಸೆ ಆದಾಯ ಗಳಿಸಿದ್ದು, ಕಳೆದ ವರ್ಷದಿಗಿಂತ ಸುಮಾರು 12 ಕೋಟಿ ರೂ. ಹೆಚ್ಚಳ ಕಂಡಿದೆ. 2024-25ನೇ ಸಾಲಿನಲ್ಲಿ ದೇವಸ್ಥಾನದ ಒಟ್ಟು ಆದಾಯ ಸುಮಾರು 155 ಕೋಟಿ ರೂ. ಆಗಿದ್ದರೆ, […]