ನಾಗಸಾಧುಗಳಿಗೆ ಅವಮಾನ ಉಡುಪಿಯಲ್ಲಿ ‘ಲಾಲ್ ಕಪ್ತಾನ್’ ಸಿನಿಮಾ ನಿಷೇಧಕ್ಕೆ ಆಗ್ರಹ

ಉಡುಪಿ: ಹಿಂದಿ ಭಾಷೆಯ ‘ಲಾಲ್ ಕಪ್ತಾನ್’ ಸಿನಿಮಾದಲ್ಲಿ ನಾಗ ಸಾಧುಗಳನ್ನು ಅವಮಾನ ಮಾಡಲಾಗಿದ್ದು, ಇದರಿಂದ ಹಿಂದು ಧಾರ್ಮಿಕ ಭಾವನೆಗೆ ದಕ್ಕೆಯಾಗುತ್ತದೆ. ಚಲನಚಿತ್ರವನ್ನು ನಿಷೇಧಿಸಬೇಕು ಎಂದು ಪೆಲತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಮೊಕ್ತೇಸರ ರಮೇಶ ಪೆಲತ್ತೂರು ಆಗ್ರಹಿಸಿದರು. ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಭಾನುವಾರ ಹಿಂದು ಜನಜಾಗೃತಿ ಸಮಿತಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈ ಚಲನಚಿತ್ರದಲ್ಲಿ ನಾಗಾ ಸಾಧುಗಳಿಗೆ ಸಂಬಂಧಪಟ್ಟ ಕೆಲವು ವಿಕೃತ ದೃಶ್ಯಗಳಿವೆ. ಆದಿ ಶಂಕರಾಚಾರ್ಯರು ಹಿಂದೂ ಧರ್ಮದ ರಕ್ಷಣೆಗಾಗಿ ನಾಗಾಸಾಧುಗಳ ಸೇನೆ ನಿರ್ಮಿಸಿದ್ದರು. […]

ಸಾಹಿತಿ ಏರ್ಯ ಲಕ್ಷ್ಮೀ ನಾರಾಯಣ ಆಳ್ವ ನಿಧನ: ಪೇಜಾವರ ಶ್ರೀ ಸಂತಾಪ

ಉಡುಪಿ: ಸಾಹಿತ್ಯ ಕ್ಷೇತ್ರ ಮತ್ತು ವಿಶ್ವಹಿಂದೂ ಪರಿಷತ್ ನಲ್ಲಿ ಅಪಾರ ಸೇವೆಯನ್ನು ಸಲ್ಲಿಸಿದ ನಮ್ಮ ಅತ್ಯಂತ ಆಪ್ತರೂ, ಆತ್ಮೀಯರೂ ಆದ ಏರ್ಯ ಲಕ್ಮೀನಾರಾಯಣ ಆಳ್ವರ ನಿಧನದ ಸುದ್ದಿಯನ್ನು ತಿಳಿದು ನಮಗೆ ಅತ್ಯಂತ ಸಂತಾಪವಾಗಿದೆ. ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಎಲ್ಲರ ಗೌರವ ಅಭಿಮಾನಗಳಿಗೆ ಪಾತ್ರರಾಗಿದ್ದಾರೆ. ನ್ಯಾಯ, ಧರ್ಮಗಳಿಗೆ ಅನ್ಯಾಯವಾದರೆ ವಿರೋಧವಾದ ಘಟನೆಗಳಾದರೆ ನಿರ್ದಾಕ್ಷಿಣ್ಯವಾಗಿ ಅದನ್ನು ಪ್ರತಿಭಟಿಸುವ ಹೋರಾಟಗಾರರೂ ಆಗಿದ್ದರು. ನನಗಂತೂ ಉತ್ತಮ ಸಲಹೆಗಾರರೂ ಆಗಿದ್ದರು. ಅವರ ಆತ್ಮಕ್ಕೆ ಭಗವಂತನ ಅನುಗ್ರಹ ನಿರಂತರವಾಗಿ ಇರಲೆಂದು ನಾನು ಪ್ರಾರ್ಥಿಸುತ್ತೇನೆ. ಅದರಂತೆ ನಮ್ಮ […]

ಹಿರಿಯ ಸಾಹಿತಿ ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಇನ್ನಿಲ್ಲ

ಮಂಗಳೂರು: ಕರಾವಳಿಯ ಹಿರಿಯ ಸಾಹಿತಿ ಏರ್ಯಲಕ್ಷೀನಾರಾಯಣ ಆಳ್ವ(94)ಅವರು ಹೃದಯಘಾತದಿಂದ ಶನಿವಾರ ಸಂಜೆ ಏರ್ಯಬೀಡು ಅವರ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಏರ್ಯ ಅವರು ಪತ್ನಿ ಹಾಗೂ ಮಗಳು ಅಳಿಯ ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸಾಹಿತ್ಯ ಸಮ್ಮೇಳನಗಳ ಅಧ್ಯಕ್ಷರಾಗಿ, ಅನೇಕ ಧಾರ್ಮಿಕ ಸಾಮಾಜಿಕ ಕಾರ್ಯಕ್ರಮಗಳ ರೂವಾರಿಯಾಗಿ, ಸಾಹಿತ್ಯ ದಲ್ಲಿ ವಿಶೇಷ ಸಾಧನೆಗೈದ ಹಿರಿಯ ಚೇತನ ಲಕ್ಷೀನಾರಾಯಣ ಆಳ್ವ ಅವರು ಆರೋಗ್ಯವಾಗಿಯೇ ಇದ್ದರು. ಸಂಜೆಯ ವೇಳೆ ಅವರು ಮನೆಯಲ್ಲಿಯೇ ಹೃದಯಾಘಾತದಿಂದ ನಿಧನರಾದರು ಎಂದು ತಿಳಿದು ಬಂದಿದೆ. ಗಣ್ಯರ […]

ಸರಕಾರಿ ಯೋಜನೆಗಳ ವಿಫಲತೆಗೆ ಜ‌ನರ ಮಾಹಿತಿ ಕೊರತಯೂ ಕಾರಣ: ಕುದಿ ಶ್ರೀನಿವಾಸ ಭಟ್

ಉಡುಪಿ: ಕೃಷಿಕರು ತಮ್ಮ ಜಮೀನನ್ನು ಪಾಳು ಬಿಡಬಾರದು, ಸರಕಾರ‌ ನೀಡುತ್ತಿರುವ ಹಲವಾರು ಕೃಷಿ ಸೌಲಭ್ಯಗಳನ್ನು ತಿಳಿದುಕೊಳ್ಳಬೇಕು. ಜಿಲ್ಲೆಯಲ್ಲಿ ಸರಕಾರಿ ಯೋಜನೆಗಳ ವಿಫಲತೆಗೆ ಅಧಿಕಾರಿಗಳು, ಜನಪ್ರತಿನಿಧಿಳು‌ ಮಾತ್ರವಲ್ಲದೇ ಜನರಲ್ಲಿರುವ ಮಾಹಿತಿ ಕೊರತೆ ಕೂಡಾ ಕಾರಣವಾಗಿದೆ ಎಂದು ಸಾಧನಶೀಲ ಕೃಷಿಕ ರಾಷ್ಟ್ರ ಪ್ರಶಸ್ತಿ ವಿಜೇತ ಕೃಷಿಕ ಕುದಿ ಶ್ರೀನಿವಾಸ ಭಟ್ ಹೇಳಿದರು. ಅವರು ಶನಿವಾರ ಉಡುಪಿ ಜಿಲ್ಲಾ ಕೃಷಿಕ ಸಂಘ ಉಡುಪಿ ರೆಸಿಡೆನ್ಸಿ ಹೋಟೆಲ್ ರೂಫ್ ಟಾಪ್ ಸಭಾಂಗಣದಲ್ಲಿ  ಆಯೋಜಿಸಿದ್ದ ಕೃಷಿ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರಕಾರದ ಯೋಜನೆಗಳನ್ನು ಬಳಸಿಕೊಂಡು […]

ಬಿಜೆಪಿ ಸರಕಾರ ರಚನೆ ಸಂವಿಧಾನಕ್ಕೆ ಮಾಡಿದ ಅಪಚಾರ: ಐವನ್ ಡಿಸೋಜ

ಮಂಗಳೂರು: ‌ಯಡಿಯೂರಪ್ಪ ಅವರಿಗೆ  ಬಹುಮತ ಇಲ್ಲ, ಅಲ್ಪ ಮತದ ಸರಕಾರವಾಗಿದ್ದು, ಸಂವಿಧಾನದ ನಿಯಮ ಗಾಳಿಗೆ ತೂರಿ ಸರಕಾರ ರಚಿಸಿದ್ದಾರೆ. ಇದು ಸಂವಿಧಾನಕ್ಕೆ ಮಾಡಿದ ಅಪಚಾರ, ದೇಶದಲ್ಲಿ ಎಲ್ಲೂ ನಡೆಯಲಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ’ ಸೋಜಾ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು, ರಾಜ್ಯಪಾಲರು ಪಕ್ಷಪಾತ ಮಾಡಿದ್ದಾರೆ. ಯಾರಾದರೂ ಇದರ ವಿರುದ್ಧ ಕೊರ್ಟ್ ಹೋದರೆ ಈ ಸರ್ಕಾರ ಬಿದ್ದು ಹೋಗುತ್ತದೆ. ಸದನದ ಸದಸ್ಯರ ಸಂಖ್ಯೆ ಕೂಡ ಗಣನೆಗೆ ತೆಗೆದುಕೊಳ್ಳಲಿಲ್ಲ.‌ ಬಿಜೆಪಿಯದ್ದು, ಸಂಖ್ಯಾಬಲ‌ ಇಲ್ಲದ, […]