ಚುನಾವಾಣ ಕರ್ತವ್ಯ ನಿರತ ಸಿಬ್ಬಂದಿ ನಿಧನ-15 ಲಕ್ಷ ರೂ ಪರಿಹಾರ

ಉಡುಪಿ, ಅಗಸ್ಟ್ 5: ಜಿಲ್ಲೆಯಲ್ಲಿ 2019 ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ , ಮತಯಂತ್ರಗಳನ್ನು ಇಡಲಾದ ಭದ್ರತಾ ಕೊಠಡಿಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮತ್ತು ಅರೆಸೇನಾ ಪಡೆಯ ಸಿಬ್ಬಂದಿಗಳ ತುರ್ತು ಚಿಕಿತ್ಸೆಗಾಗಿ ಕರ್ತವ್ಯ ನಿರ್ವಹಿಸಲು ನಿಯೋಜಿಸಿದ್ದ ಆರೋಗ್ಯ ಇಲಾಖೆಯ ಅಂಬುಲೆನ್ಸ್ ನ ವಾಹನ ಚಾಲಕ ಕೆ.ದಿನೇಶ್ ಗಾಣಿಗ ಇವರು, ಮೇ 2 ರಂದು ಕರ್ತವ್ಯ ಮುಗಿಸಿ, ಮನೆಗೆ ಹಿಂದಿರುಗುವಾಗ ಬಾರ್ಕೂರು ಸರ್ಕಾರಿ ಆಸ್ಪತ್ರೆ ಬಳಿ , ಬಸ್ಸಿನಲ್ಲಿ ಹೃದಯಾಘಾತವಾಗಿ ಮೃತಪಟ್ಟಿರುತ್ತಾರೆ. ಮೃತರ ಕುಟುಂಬಕ್ಕೆ ಚುನಾವಣಾ ಆಯೋಗವು ರೂ.15 […]
ಸಮಾಜ ಸೇವೆಗೆ ಸಹಾಯ ಮಾಡುವ ಮನಸ್ಸಿದ್ದರೆ ಸಾಕು: ವಿಶು ಶೆಟ್ಟಿ

ಉಡುಪಿ: ನಿಸ್ವಾರ್ಥ ಸೇವೆ ಮಾಡಿದರೆ ನಮಗೆ ಹೇಗಾದರೂ ಪ್ರತಿಫಲ ಸಿಗುತ್ತದೆ. ಸಮಾಜ ಸೇವೆಗೆ ಸಮಾಜ ಸೇವಕನೇ ಆಗಬೇಕಾಗಿಲ್ಲ. ಸಹಾಯ ಮಾಡುವ ಮನಸ್ಸಿದ್ದರೆ ಸಾಕು. ಕಷ್ಟಕ್ಕೆ ಮಿಡಿಯುವ ಹೃದಯವನ್ನು ನಾವೆಲ್ಲರೂ ಬೆಳೆಸಿಕೊಳ್ಳಬೇಕು ಎಂದು ಸಮಾಜ ಸೇವಕ ವಿಶುಶೆಟ್ಟಿ ಅಂಬಲಪಾಡಿ ಹೇಳಿದರು. ಬಿಯಿಂಗ್ ಸೋಶಿಯಲ್ ವತಿಯಿಂದ ಶ್ರೀ ತ್ರಿಕಣ್ಣೇಶ್ವರೀವಾಣಿ ಕನ್ನಡ ಮಾಸ ಪತ್ರಿಕೆಯ ಸಹಭಾಗಿತ್ವದಲ್ಲಿ ನಗರದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಶನಿವಾರ ಆಯೋಜಿಸಿದ ಕೂತು ಮಾತನಾಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನೋವಲ್ಲಿರುವವರ ಕಣ್ಣೀರು ಒರೆಸುವುದೇ ನನ್ನ ಸುಖ […]
ವಿಕಲಚೇತನರಿಗೆ ಆಧಾರ ಗೂಡಂಗಡಿ ಸೌಲಭ್ಯ
ಉಡುಪಿ, ಆಗಸ್ಟ್ 1: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಜಿಲ್ಲೆಯಲ್ಲಿ, 2019-20 ನೇ ಸಾಲಿನಲ್ಲಿ ವಿಕಲಚೇತನರಿಗೆ ಸ್ವ ಉದ್ಯೋಗ ಕೈಗೊಳ್ಳಲು ಆಧಾರ ಯೋಜನೆಯಡಿ ಪರಿಷ್ಕತ ನಿಯಮಗಳಡಿಯಲ್ಲಿ ಶೇ. 50 ಬ್ಯಾಂಕಿನಿಂದ ಸಾಲ ಮತ್ತು ಶೇ. 50 ಸಬ್ಸಿಡಿ ಇಲಾಖೆಯಿಂದ ನೀಡಲಾಗುತ್ತಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹಿಂದಿನ ಸಾಲಿನಲ್ಲಿ ಅರ್ಜಿ ಸಲ್ಲಿಸಿದವರು ಕೂಡಾ ಹೊಸದಾಗಿ ಈ ಸಾಲಿನಲ್ಲಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸಲು ಅಗಸ್ಟ್ 10 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ, ಮಾರ್ಗಸೂಚಿ ಮತ್ತು ಮಾಹಿತಿಗಾಗಿ […]
ನಾಗಸಾಧುಗಳಿಗೆ ಅವಮಾನ ಉಡುಪಿಯಲ್ಲಿ ‘ಲಾಲ್ ಕಪ್ತಾನ್’ ಸಿನಿಮಾ ನಿಷೇಧಕ್ಕೆ ಆಗ್ರಹ

ಉಡುಪಿ: ಹಿಂದಿ ಭಾಷೆಯ ‘ಲಾಲ್ ಕಪ್ತಾನ್’ ಸಿನಿಮಾದಲ್ಲಿ ನಾಗ ಸಾಧುಗಳನ್ನು ಅವಮಾನ ಮಾಡಲಾಗಿದ್ದು, ಇದರಿಂದ ಹಿಂದು ಧಾರ್ಮಿಕ ಭಾವನೆಗೆ ದಕ್ಕೆಯಾಗುತ್ತದೆ. ಚಲನಚಿತ್ರವನ್ನು ನಿಷೇಧಿಸಬೇಕು ಎಂದು ಪೆಲತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಮೊಕ್ತೇಸರ ರಮೇಶ ಪೆಲತ್ತೂರು ಆಗ್ರಹಿಸಿದರು. ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಭಾನುವಾರ ಹಿಂದು ಜನಜಾಗೃತಿ ಸಮಿತಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈ ಚಲನಚಿತ್ರದಲ್ಲಿ ನಾಗಾ ಸಾಧುಗಳಿಗೆ ಸಂಬಂಧಪಟ್ಟ ಕೆಲವು ವಿಕೃತ ದೃಶ್ಯಗಳಿವೆ. ಆದಿ ಶಂಕರಾಚಾರ್ಯರು ಹಿಂದೂ ಧರ್ಮದ ರಕ್ಷಣೆಗಾಗಿ ನಾಗಾಸಾಧುಗಳ ಸೇನೆ ನಿರ್ಮಿಸಿದ್ದರು. […]
ಸಾಹಿತಿ ಏರ್ಯ ಲಕ್ಷ್ಮೀ ನಾರಾಯಣ ಆಳ್ವ ನಿಧನ: ಪೇಜಾವರ ಶ್ರೀ ಸಂತಾಪ

ಉಡುಪಿ: ಸಾಹಿತ್ಯ ಕ್ಷೇತ್ರ ಮತ್ತು ವಿಶ್ವಹಿಂದೂ ಪರಿಷತ್ ನಲ್ಲಿ ಅಪಾರ ಸೇವೆಯನ್ನು ಸಲ್ಲಿಸಿದ ನಮ್ಮ ಅತ್ಯಂತ ಆಪ್ತರೂ, ಆತ್ಮೀಯರೂ ಆದ ಏರ್ಯ ಲಕ್ಮೀನಾರಾಯಣ ಆಳ್ವರ ನಿಧನದ ಸುದ್ದಿಯನ್ನು ತಿಳಿದು ನಮಗೆ ಅತ್ಯಂತ ಸಂತಾಪವಾಗಿದೆ. ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಎಲ್ಲರ ಗೌರವ ಅಭಿಮಾನಗಳಿಗೆ ಪಾತ್ರರಾಗಿದ್ದಾರೆ. ನ್ಯಾಯ, ಧರ್ಮಗಳಿಗೆ ಅನ್ಯಾಯವಾದರೆ ವಿರೋಧವಾದ ಘಟನೆಗಳಾದರೆ ನಿರ್ದಾಕ್ಷಿಣ್ಯವಾಗಿ ಅದನ್ನು ಪ್ರತಿಭಟಿಸುವ ಹೋರಾಟಗಾರರೂ ಆಗಿದ್ದರು. ನನಗಂತೂ ಉತ್ತಮ ಸಲಹೆಗಾರರೂ ಆಗಿದ್ದರು. ಅವರ ಆತ್ಮಕ್ಕೆ ಭಗವಂತನ ಅನುಗ್ರಹ ನಿರಂತರವಾಗಿ ಇರಲೆಂದು ನಾನು ಪ್ರಾರ್ಥಿಸುತ್ತೇನೆ. ಅದರಂತೆ ನಮ್ಮ […]