ಹಿರಿಯ ಸಾಹಿತಿ ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಇನ್ನಿಲ್ಲ

ಮಂಗಳೂರು: ಕರಾವಳಿಯ ಹಿರಿಯ ಸಾಹಿತಿ ಏರ್ಯಲಕ್ಷೀನಾರಾಯಣ ಆಳ್ವ(94)ಅವರು ಹೃದಯಘಾತದಿಂದ ಶನಿವಾರ ಸಂಜೆ ಏರ್ಯಬೀಡು ಅವರ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಏರ್ಯ ಅವರು ಪತ್ನಿ ಹಾಗೂ ಮಗಳು ಅಳಿಯ ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸಾಹಿತ್ಯ ಸಮ್ಮೇಳನಗಳ ಅಧ್ಯಕ್ಷರಾಗಿ, ಅನೇಕ ಧಾರ್ಮಿಕ ಸಾಮಾಜಿಕ ಕಾರ್ಯಕ್ರಮಗಳ ರೂವಾರಿಯಾಗಿ, ಸಾಹಿತ್ಯ ದಲ್ಲಿ ವಿಶೇಷ ಸಾಧನೆಗೈದ ಹಿರಿಯ ಚೇತನ ಲಕ್ಷೀನಾರಾಯಣ ಆಳ್ವ ಅವರು ಆರೋಗ್ಯವಾಗಿಯೇ ಇದ್ದರು. ಸಂಜೆಯ ವೇಳೆ ಅವರು ಮನೆಯಲ್ಲಿಯೇ ಹೃದಯಾಘಾತದಿಂದ ನಿಧನರಾದರು ಎಂದು ತಿಳಿದು ಬಂದಿದೆ. ಗಣ್ಯರ […]

ಸರಕಾರಿ ಯೋಜನೆಗಳ ವಿಫಲತೆಗೆ ಜ‌ನರ ಮಾಹಿತಿ ಕೊರತಯೂ ಕಾರಣ: ಕುದಿ ಶ್ರೀನಿವಾಸ ಭಟ್

ಉಡುಪಿ: ಕೃಷಿಕರು ತಮ್ಮ ಜಮೀನನ್ನು ಪಾಳು ಬಿಡಬಾರದು, ಸರಕಾರ‌ ನೀಡುತ್ತಿರುವ ಹಲವಾರು ಕೃಷಿ ಸೌಲಭ್ಯಗಳನ್ನು ತಿಳಿದುಕೊಳ್ಳಬೇಕು. ಜಿಲ್ಲೆಯಲ್ಲಿ ಸರಕಾರಿ ಯೋಜನೆಗಳ ವಿಫಲತೆಗೆ ಅಧಿಕಾರಿಗಳು, ಜನಪ್ರತಿನಿಧಿಳು‌ ಮಾತ್ರವಲ್ಲದೇ ಜನರಲ್ಲಿರುವ ಮಾಹಿತಿ ಕೊರತೆ ಕೂಡಾ ಕಾರಣವಾಗಿದೆ ಎಂದು ಸಾಧನಶೀಲ ಕೃಷಿಕ ರಾಷ್ಟ್ರ ಪ್ರಶಸ್ತಿ ವಿಜೇತ ಕೃಷಿಕ ಕುದಿ ಶ್ರೀನಿವಾಸ ಭಟ್ ಹೇಳಿದರು. ಅವರು ಶನಿವಾರ ಉಡುಪಿ ಜಿಲ್ಲಾ ಕೃಷಿಕ ಸಂಘ ಉಡುಪಿ ರೆಸಿಡೆನ್ಸಿ ಹೋಟೆಲ್ ರೂಫ್ ಟಾಪ್ ಸಭಾಂಗಣದಲ್ಲಿ  ಆಯೋಜಿಸಿದ್ದ ಕೃಷಿ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರಕಾರದ ಯೋಜನೆಗಳನ್ನು ಬಳಸಿಕೊಂಡು […]

ಬಿಜೆಪಿ ಸರಕಾರ ರಚನೆ ಸಂವಿಧಾನಕ್ಕೆ ಮಾಡಿದ ಅಪಚಾರ: ಐವನ್ ಡಿಸೋಜ

ಮಂಗಳೂರು: ‌ಯಡಿಯೂರಪ್ಪ ಅವರಿಗೆ  ಬಹುಮತ ಇಲ್ಲ, ಅಲ್ಪ ಮತದ ಸರಕಾರವಾಗಿದ್ದು, ಸಂವಿಧಾನದ ನಿಯಮ ಗಾಳಿಗೆ ತೂರಿ ಸರಕಾರ ರಚಿಸಿದ್ದಾರೆ. ಇದು ಸಂವಿಧಾನಕ್ಕೆ ಮಾಡಿದ ಅಪಚಾರ, ದೇಶದಲ್ಲಿ ಎಲ್ಲೂ ನಡೆಯಲಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ’ ಸೋಜಾ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು, ರಾಜ್ಯಪಾಲರು ಪಕ್ಷಪಾತ ಮಾಡಿದ್ದಾರೆ. ಯಾರಾದರೂ ಇದರ ವಿರುದ್ಧ ಕೊರ್ಟ್ ಹೋದರೆ ಈ ಸರ್ಕಾರ ಬಿದ್ದು ಹೋಗುತ್ತದೆ. ಸದನದ ಸದಸ್ಯರ ಸಂಖ್ಯೆ ಕೂಡ ಗಣನೆಗೆ ತೆಗೆದುಕೊಳ್ಳಲಿಲ್ಲ.‌ ಬಿಜೆಪಿಯದ್ದು, ಸಂಖ್ಯಾಬಲ‌ ಇಲ್ಲದ, […]

ರೋಪ್ ಸ್ಕಿಪ್ಪಿಂಗ್ : ಮಂಗಳೂರಿನ‌ ನಿಶಾ ಕುಲಾಲ್ ಗೆ 2 ಬೆಳ್ಳಿ 1 ಕಂಚು

ಮಂಗಳೂರು:  ಮಂಗಳೂರು ಕದ್ರಿಯ ನಿಶಾ ಕುಲಾಲ್ ಅವರು ಥೈಲ್ಯಾಂಡ್‌ನಲ್ಲಿ ನಡೆದ ಏಷಿಯನ್ ಕಾಂಟಿನೆಂಟಲ್ ರೋಪ್ ಸ್ಕಿಪ್ಪಿಂಗ್ ಚಾಂಪಿಯನ್‌ಶಿಪ್-ಎಸಿಸಿಯಲ್ಲಿ ಎರಡು ಬೆಳ್ಳಿ ಹಾಗೂ ಒಂದು ಕಂಚಿನ‌ ಪದಕ ಪಡೆದಿದ್ದಾರೆ. ಭಾರತವನ್ನು ಪ್ರತಿನಿಧಿಸಿದ್ದ ತಂಡದಲ್ಲಿ ನಿಶಾ ಕುಲಾಲ್ ಸಿಂಗಲ್ ರೋಪ್ ಸ್ಪೀಡ್ ರಿಲೇಯಲ್ಲಿ ಬೆಳ್ಳಿ, ಡಬಲ್ ಡಚ್ ಫ್ರೀ ಸ್ಟೈಲ್‌ನಲ್ಲಿ ಬೆಳ್ಳಿ, ಡಬಲ್ ಡಚ್ ಸ್ಪೀಡ್ ರಿಲೇಯಲ್ಲಿ ಕಂಚಿನ‌ ಪದಕ ಗಳಿಸಿದ್ದಾರೆ. ಭಾರತ, ಪಾಕಿಸ್ತಾನ, ಸಿಂಗಾಪುರ, ಹಾಂಕಾಂಗ್, ಫಿಲಿಫೀನ್ಸ್, ಖಜಕಿಸ್ತಾನ್,‌ ಕೊರಿಯಾ, ಥೈಲ್ಯಾಂಡ್ ಸೇರಿ 9 ರಾಷ್ಟ್ರಗಳ ಕ್ರೀಡಾಪಟುಗಳು ಈ […]

ಸಾರ್ವಜನಿಕ ಕ್ಷೇತ್ರದಲ್ಲಿ ತೊಡಗಿಸಿ ನಾಯಕತ್ವ ಗುಣ ಬೆಳೆಸಿಕೊಳ್ಳಿ: ಮಂಜುನಾಥ್

ಉಡುಪಿ: ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಜತೆಗೆ ಸಾರ್ವಜನಿಕ ಜೀವನಕ್ಕೆ ಉಪಯೋಗವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನಾಯಕತ್ವ ಗುಣಗಳನ್ನು ಬೆಳೆಸಿ ಕೊಳ್ಳಬೇಕು, ಎಂದು ನಗರಸಭಾ ಸದಸ್ಯ ಮಂಜುನಾಥ್ ಮಣಿಪಾಲ ಹೇಳಿದರು. ಅವರು ಶುಕ್ರವಾರ ಮಣಿಪಾಲ ಜೂನಿಯರ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪಾರ್ಲಿಮೆಂಟ್ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಶಾಲಾ‌ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಘಟನೆ ಕೇವಲ ಶಾಲಾ ವಾರ್ಷಿಕೋತ್ಸವಕ್ಕೆ ಮಾತ್ರ ಸೀಮಿತವಾಗಿದ್ದು, ಕಲಿಕೆಯ ಒತ್ತಡಗಳಿಂದ ಇತರ ಚಟುವಟಿಕೆಗಳನ್ನು ಆಯೋಜನೆ ಮಾಡುವುದು ಕಷ್ಟಕರ. ಆದರೆ ಸಾರ್ವಜನಿಕ ಸಂಘಟನೆಗಳ ಸಹಭಾಗಿತ್ವದಲ್ಲಿ ಸಾರ್ವಜನಿಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು  ಎಂದರು. […]