ಮಂಗಳೂರು: ದ.ಕ.ಜಿಲ್ಲೆಯಾದ್ಯಂತ ಬಿರುಸಿನ ಮಳೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಶುಕ್ರವಾರ ಧಾರಾಕಾರವಾಗಿ ಮಳೆ ಸುರಿಯಿತು. ಮುಂಜಾನೆಯಿಂದ ಧಾರಾಕಾರ ಮಳೆಯಾದ ಹಿನ್ನೆಲೆಯಲ್ಲಿ‌ ಮಂಗಳೂರಿನ ವಿವಿಧೆಡೆ ನೀರು ತುಂಬಿ ಜನರ ಓಡಾಟಕ್ಕೆ ಅಡಚಣೆ ಉಂಟಾಯಿತು. ಪಾಂಡೇಶ್ವರ ಸಮೀಪದ ಸುಭಾಷ್ ನಗರ ಪ್ರಥಮ ಕ್ರಾಸ್ ಸಂಪೂರ್ಣ ಜಲಾವೃತವಾಗಿತ್ತು. ಹಾಗೆಯೇ ಕೇಂದ್ರ ರೈಲು ನಿಲ್ದಾಣಕ್ಕೆ ಮತ್ತೆ ನೀರು ನುಗ್ಗಿದೆ. ಕೃತಕ ನೆರೆಯಿಂದ ರೈಲು ನಿಲ್ದಾಣದ ಆವರಣ ಕೆರೆಯಂತಾಗಿತ್ತು. ರೈಲು ನಿಲ್ದಾಣಕ್ಕೆ ಆಗಮಿಸುವ, ನಿರ್ಗಮಿಸುವ ಪ್ರಯಾಣಿಕರು ಪರದಾಡುವಂತಾಗಿದೆ. ನಗರದ ಫಳ್ನೀರ್ ರಸ್ತೆ, ಕೊಟ್ಟಾರ ಚೌಕಿ ಜಲಾವೃತಗೊಂಡಿತು. ಒಳಚರಂಡಿಯಲ್ಲಿ […]

ಸಾಲಿಗ್ರಾಮ ಪ.ಪಂ.: ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಜುಲೈ 26: ಜಿಲ್ಲೆಯಲ್ಲಿ ಮಳೆಗಾಲವು ಈಗಾಗಲೇ ಆರಂಭವಾಗಿದ್ದು, ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ತೊಂದರೆಯಾಗದಂತೆ ಸಾಕಷ್ಟು ಮುಂಜಾಗೃತೆ ವಹಿಸುವಂತೆ ಸಾರ್ವಜನಿಕರಿಗೆ ತಿಳಿಸಲಾಗಿದೆ. ವ್ಯಾಪಾರಸ್ತರು ಪ್ಲಾಸ್ಟಿಕ್‍ನ್ನು ಉಪಯೋಗಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಚರಂಡಿಗೆ ಕಸಕಡ್ಡಿಗಳನ್ನು/ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಬಿಸಾಡುವುದನ್ನು ನಿಷೇಧಿಸಲಾಗಿದ್ದು, ಗೂಡಂಗಡಿ ಮಾಲೀಕರು ಉಪಯೋಗಿಸಿದ ಬೊಂಡವನ್ನು ಅದೇ ದಿನ ವಿಲೇವಾರಿ ಮಾಡಲು ಸೂಚಿಸಿದೆ. ಕೆಲವೆಡೆ ಈಗಾಗಲೇ ಡೆಂಗ್ಯೂ ರೋಗ ಕಾಣಿಸಿದ್ದು, ಡೆಂಗ್ಯೂ ಖಾಯಿಲೆಯು ವೈರಸ್ ರೋಗಾಣುವಿನಿಂದ ಉಂಟಾಗುವುದು ಮತ್ತು ಈಡೀಸ್ ಸೊಳ್ಳೆಗಳು ಕಚ್ಚುವುದರಿಂದ ರೋಗವು ಒಬ್ಬರಿಂದ […]

ಕೋಟ: ವಿಶ್ವ ಜನಸಂಖ್ಯಾ ದಿನಾಚರಣೆ

ಉಡುಪಿ, ಜುಲೈ 26: ಕೋಟ ಮಣೂರು ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಕಚೇರಿ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆಯು ಗುರುವಾರ ನಡೆಯಿತು. ಕಾಲೇಜಿನ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಈ ಕಾರ್ಯಕ್ರಮದಲ್ಲಿ ಉಡುಪಿ ತಾಲೂಕು ಪಂಚಾಯತ್ ಸದಸ್ಯೆ ಲಲಿತಾ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಉದ್ಘಾಟಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ನಾಗರತ್ನ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಟ ಮಣೂರು ಲಕ್ಷ್ಮೀ ಸೋಮ ಬಂಗೇರ ಸರಕಾರಿ […]

ವಿಧವೆ ಸೊಸೆಗೆ‌ ಮದುವೆ ಮಾಡಿಸಿದ ಅತ್ತೆ..! 

ಮಂಗಳೂರು: ಅತ್ತೆಯೇ ವಿಧವೆ ಸೊಸೆಗೆ ಮದುವೆ ಮಾಡಿಸಿದ ಅಪರೂಪದ, ಮಾನವೀಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಬೆಳ್ಳಾರೆಯ ಕೋಟೆ ದೇವಸ್ಥಾನದಲ್ಲಿ ಸೋಮವಾರ ಈ ಅಪರೂಪದ ಮದುವೆ ಸಮಾರಂಭ ನಡೆದಿದೆ. ಸುಳ್ಯ ತಾಲೂಕಿನ ಕಳಂಜ ಗ್ರಾಮದ ಗೋಪಾಲಕಜೆ ನಿವಾಸಿ ಶಾಂತಪ್ಪ ಗೌಡರ ಪುತ್ರಿ ಸುಶೀಲಾ ಎಂಬುವವರನ್ನು ಅದೇ ಗ್ರಾಮದ ದಿವಂಗತ ಪದ್ಮಯ್ಯರ ಪುತ್ರ ಮಾಧವ ಎಂಬುವವರಿಗೆ ವಿವಾಹ ಮಾಡಿ‌ ಕೊಡಲಾಗಿತ್ತು. ಆದರೆ ವಿವಾಹವಾದ ವರ್ಷದೊಳಗೆ ಅಪಘಾತದಿಂದ ಮಾಧವ ಇಹಲೋಕ ತ್ಯಜಿಸಿದ್ದರು. ಅದಾಗಲೇ ಗರ್ಭಿಣಿಯಾಗಿದ್ದ […]

ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಅನುದಾನ ಅನುಷ್ಠಾನಕ್ಕೆ ಆಗ್ರಹಿಸಿ ಪ್ರತಿಭಟನೆ

ಉಡುಪಿ: ಆದಿವಾಸಿ ಜನಾಂಗದವರ ಅಭಿವೃದ್ಧಿಗಾಗಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2.25 ಕೋಟಿ ಅನುದಾನವನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕು ಎಂದು ಆಗ್ರಹಿಸಿ ಕೊರಗರ ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕೊರಗ ಸಮುದಾಯದವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ‌ ಆರಂಭಿಸಿದರು. ಕೊರಗ ಸಮುದಾಯದ ಸಂಘಟನೆ ತಯಾರಿಸಿದ ಜನ ಯೋಜನೆಯನ್ನು ಕೈಬಿಟ್ಟು, ಅಧಿಕಾರಿಗಳು ತಯಾರಿಸಿದ ಕ್ರಿಯಾ ಯೋಜನೆಯನ್ನು ಜಾರಿಗೊಳಿಸಲು ನಿಗಮ ಹೊರಟಿದೆ. ಇದರಿಂದ ಆದಿವಾಸಿ ಜನಾಂಗದವರಿಗೆ ಸರಿಯಾದ ಅನುದಾನ ಹಂಚಿಕೆ ಆಗಲ್ಲ. ಅಲ್ಲದೆ, […]