ಮೂಡಬಿದಿರೆ: ಜನರ ಸಮಸ್ಯೆಗೆ ಸ್ಪಂಧಿಸದ ಅಧಿಕಾರಿಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ತರಾಟೆ

ಮೂಡಬಿದಿರೆ: ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದನೆ ನೀಡದ ಮೂಡಬಿದಿರೆ ನಾಡಕಚೇರಿಯ ಅಧಿಕಾರಿಗಳನ್ನು ಶಾಸಕ ಉಮಾನಾಥ ಕೋಟ್ಯಾನ್ ತರಾಟೆಗೆ ತೆಗೆದುಕೊಂಡಿದ್ದಾರೆ.  ಸಾರ್ವಜನಿಕರ ಕುಂದು ಕೊರತೆ ನೀಗಿಸಲು ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಶಾಸಕರು ಏಕಾಏಕಿ ಮೂಡಾ ಕಚೇರಿಗೆ ತೆರಳಿದ್ದಾರೆ.  ಈ ವೇಳೆ ಜನರು ಸರತಿ ಸಾಲಿನಲ್ಲಿ ನಿಂತದ್ದನ್ನು ಕಂಡ ಶಾಸಕರು ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ತನ್ನ ರೌದ್ರಾವತಾರ ತೋರಿದ್ದಾರೆ. ನೀವು ಪ್ರಾಮಾಣಿಕವಾಗಿ ಕೆಲಸ ಮಾಡಿ. ಜನರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತರೂ ಅವರ ಸಮಸ್ಯೆ ಕೇಳುವವರಿಲ್ಲ. […]

ಹಿರಿಯಡಕ: ಉಚಿತ ದಂತ ಚಿಕಿತ್ಸಾ ಶಿಬಿರ

ಉಡುಪಿ, ಜುಲೈ 1: ಲಯನ್ಸ್ ಕ್ಲಬ್ ಹಾಗೂ ಮಣಿಪಾಲದ ಕೆ.ಎಂ.ಸಿ. ವತಿಯಿಂದ ಉಚಿತ ದಂತ ಚಿಕಿತ್ಸಾ ಶಿಬಿರವು ಇತ್ತೀಚೆಗೆ ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ಸೆಕೆಂಡ್ ವೈಸ್ ಲಯನ್ ಡಿಸ್ಟ್ರಿಕ್ಟ್ ಗವರ್ನರ್ ವಿಶ್ವನಾಥ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ಉಚಿತ ದಂತ ಚಿಕಿತ್ಸಾ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು. ಹಿರಿಯಡಕ ಲಯನ್ಸ್ ಕ್ಲಬ್ ಅಧ್ಯಕ್ಷ ಮೋಹನದಾಸ್ ಆಚಾರ್ಯ ಮಾತನಾಡಿ,  ಲಯನ್ ಕ್ಲಬ್ ಒಂದು ಅಂತಾರಾಷ್ಟ್ರೀಯ ಸಂಸ್ಥೆಯಾಗಿದ್ದು, ಸೇವೆ, ಸ್ನೇಹ, ನಾಯಕತ್ವ ಅದರ ಮೂಲತತ್ತ್ವಗಳಾಗಿವೆ […]

ಮಂಗಳೂರು‌ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರೀ ಅನಾಹುತ..! 

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾನುವಾರ ಸಂಜೆ ವಿಮಾನ ಲ್ಯಾಂಡಿಂಗ್ ವೇಳೆ ರನ್ ವೇಯಿಂದ ಹೊರಜಾರಿದ್ದು, ಭಾರೀ ದುರಂತವೊಂದು ತಪ್ಪಿದಂತಾಗಿದೆ. ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ – 380 ವಿಮಾನ ಪೈಲಟ್ ಸಮಯಪ್ರಜ್ಞೆಯಿಂದ ಸ್ವಲ್ಪದರಲ್ಲಿ ಅನಾಹುತ ತಪ್ಪಿದೆ. ದುಬೈನಿಂದ 181 ಪ್ರಯಾಣಿಕರನ್ನು ಹೊತ್ತು ತರುತ್ತಿದ್ದ ವಿಮಾನ ಸಂಜೆ 5.20ಕ್ಕೆ ಮಂಗಳೂರು ಬಜಪೆಯ ಏರ್ಪೋರ್ಟ್ ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನ. ಪೈಲೆಟ್ ಸಮಯಪ್ರಜ್ಞೆಯಿಂದ ಯಾವುದೇ ತೊಂದರೆ ಉಂಟಾಗಿಲ್ಲ.

ಉಡುಪಿ: ಪುಣ್ಯಕೋಟಿ ಗೋಸೇವಾ ಬಳಗದಿಂದ 46ನೇ ಗೋಪೂಜೆ

ಉಡುಪಿ, ಜೂ. 28: ಕುಕ್ಕಿಕಟ್ಟೆಯ ಪುಣ್ಯಕೋಟಿ ಗೋಸೇವಾ ಬಳಗದ 46ನೇ ತಿಂಗಳ ಗೋಪೂಜೆಯು ಶುಕ್ರವಾರ ಬೈಲೂರಿನ ಬಿ.ಎಂ.ಎಂ.ಶಾಲೆಯ ಸಮೀಪದ ನಿವಾಸಿ ಗೋಪಾಲಕೃಷ್ಣ ರಾವ್ ಅವರ ಮನೆಯಲ್ಲಿ ನಡೆಯಿತು. ಬಳಗದ ಸದಸ್ಯರು ಮತ್ತು ಮನೆಯವರು ಸೇರಿ ಗೋವುಗಳಿಗೆ ನವಧಾನ್ಯವನ್ನು ತಿನ್ನಿಸಿ, ಆರತಿ ಬೆಳಗಿಸಿ ಗೋಪೂಜೆಯನ್ನು ನೆರವೇರಿಸಿದರು. ಬಳಗದ ವತಿಯಿಂದ ಗೋಪಾಲಕರಿಗೆ ಪಶುಆಹಾರ ಹಾಗೂ ಗೋಕಾಣಿಕೆಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗೋಪಾಲಕರಾದ ಸಂಧ್ಯಾ ಗೋಪಾಲಕೃಷ್ಣ ರಾವ್, ಬೇಬಿ ರಾವ್, ರಂಜಿತ್ ರಾವ್, ರಜತ್ ರಾವ್ ಉಪಸ್ಥಿತರಿದ್ದರು, ಗೋಸೇವಾ ಬಳಗದ […]

ಕಟಪಾಡಿ: ಸಾರ್ವಜನಿಕ ಸ್ಥಳದ ತ್ಯಾಜ್ಯ ರಾಶಿಗೆ ಎಂದು ಮುಕ್ತಿ?..  ಸ್ವಚ್ಛತೆಯ ಜವಾಬ್ದಾರಿ ಮರೆತರೇ ಜನತೆ…

ಉಡುಪಿ: ಕಟಪಾಡಿ‌ ಗ್ರಾ.ಪಂ.‌ ವ್ಯಾಪ್ತಿಯ ಚಾಕಡಿ ರೈಲ್ವೆ ಬ್ರಿಡ್ಜ್ ಬಳಿಯ ಈಶ್ವರ ದೇವಸ್ಥಾನದ ( ಸುಭಾಷ್ ನಗರ ಮತ್ತು ಕಟಪಾಡಿ ರಸ್ತೆ ) ಸಮೀಪದಲ್ಲಿ ಸಾರ್ವಜನಿಕ ಸ್ಥಳದಲ್ಲೇ ತ್ಯಾಜ್ಯ ರಾಶಿ ಹಾಕಲಾಗುತ್ತಿದ್ದು, ಇದರಿಂದಾಗಿ ಸ್ಥಳೀಯರು, ಸಾರ್ವಜನಿಕರಿಗೆ ಭಾರಿ ಸಮಸ್ಯೆ ಎದುರಾಗಿದೆ. ಕಳೆದ ಹಲವು‌ ಸಮಯದಿಂದ ಈ ತ್ಯಾಜ್ಯ ರಾಶಿ‌ ಇಲ್ಲಿದ್ದು‌, ಇದೀಗ ಮಳೆಗೆ ಮತ್ತಷ್ಟು ಸಮಸ್ಯೆ ಉದ್ಬವಾಗುತ್ತಿದೆ. ಬೇರೆ ಭಾಗಗಳಿಂದ ‌ಕಸ ತ್ಯಾಜ್ಯಗಳನ್ನು ತಂದು ಯಾರೋ ಸಾರ್ವಜನಿಕರೇ ಈ‌ ಪ್ರದೇಶದಲ್ಲಿ ಹಾಕುತ್ತಿದ್ದಾರೆ. ಹೋಟೆಲ್, ರೆಸ್ಟೋರೆಂಟ್ ಗಳ ತ್ಯಾಜ್ಯ, […]